ಮೋದಿ ಮಾಡ್ತಾರಂತೆ ಸಂಪುಟ ಸರ್ಜರಿ!

Published : Jul 10, 2020, 05:08 PM IST
ಮೋದಿ ಮಾಡ್ತಾರಂತೆ ಸಂಪುಟ ಸರ್ಜರಿ!

ಸಾರಾಂಶ

ಕೋವಿಡ್‌ ಸಂಕಷ್ಟದ ಮಧ್ಯೆಯೇ ಪ್ರಧಾನಿ ನರೇಂದ್ರ ಮೋದಿ ಸಂಪುಟ ಸರ್ಜರಿ|  ಕಳೆದ ವಾರ ಬಿಜೆಪಿ ನಾಯಕರು ಮತ್ತು ಆರ್‌ಎಸ್‌ಎಸ್‌ ನಾಯಕರ ನಡುವೆ ಸಭೆ | ಕೆಲವು ಇಲಾಖೆಗಳಿಗೆ ನೇರವಾಗಿ ವೃತ್ತಿಪರರನ್ನು ನೇಮಕ

ನವದೆಲಿ(ಜು.10): ಕೋವಿಡ್‌ ಸಂಕಷ್ಟದ ಮಧ್ಯೆಯೇ ಪ್ರಧಾನಿ ನರೇಂದ್ರ ಮೋದಿ ತಮ್ಮ ಸಂಪುಟಕ್ಕೆ ಮೈನರ್‌ ಸರ್ಜರಿ ಮಾಡಲಿದ್ದಾರೆ ಎಂಬ ಖಚಿತ ವರ್ತಮಾನ ದಿಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಮೂಲಗಳಿಂದ ಬರುತ್ತಿದೆ.

ಕಳೆದ ವಾರ ಬಿಜೆಪಿ ನಾಯಕರು ಮತ್ತು ಆರ್‌ಎಸ್‌ಎಸ್‌ ನಾಯಕರ ನಡುವೆ ಸಭೆ ನಡೆದಿದ್ದು, ಜುಲೈ ಅಂತ್ಯದಲ್ಲಿ ಮೋದಿ ಕೆಲವು ಜೂನಿಯರ್‌ ಮಂತ್ರಿಗಳನ್ನು ಕೈಬಿಟ್ಟು, ಕೆಲವು ಇಲಾಖೆಗಳಿಗೆ ನೇರವಾಗಿ ವೃತ್ತಿಪರರನ್ನು ನೇಮಿಸಲಿದ್ದಾರೆ ಎಂದು ಮೂಲಗಳು ಹೇಳುತ್ತಿವೆ.

ಜೂನ್‌ ಕೊನೆಯ ವಾರದಲ್ಲಿ ಪ್ರಧಾನಿ ಅಧಿಕೃತ ನಿವಾಸದಲ್ಲಿ ನಡೆದ ಸಭೆಯಲ್ಲಿ ಪ್ರಧಾನಿ ಜೊತೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮತ್ತು ಬಿ.ಎಲ್. ಸಂತೋಷ್‌ ಇದ್ದರೆ, ಆರ್‌ಎಸ್‌ಎಸ್‌ ಕಡೆಯಿಂದ ಸಹಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆ ಮತ್ತು ಕೃಷ್ಣ ಗೋಪಾಲ್ ಭಾಗವಹಿಸಿದ್ದರು ಎಂದು ತಿಳಿದುಬಂದಿದೆ.

ಮುಂಬರುವ ಬಿಹಾರ ಮತ್ತು ಪಶ್ಚಿಮ ಬಂಗಾಳ ಚುನಾವಣೆಗೆ ಸಂಬಂಧಪಟ್ಟಂತೆ ಕೂಡ ಚರ್ಚೆ ನಡೆದಿದ್ದು, ಆದರೆ ಮೋದಿ ಸಂಪುಟ ವಿಸ್ತರಣೆಯಷ್ಟೇ ಮಾಡ್ತಾರೋ ಅಥವಾ ಪುನಾಚನೆಯೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಕೆಲ ವೃತ್ತಿಪರರನ್ನು ಮತ್ತು ಕೆಲ ಅತ್ಯಂತ ಕಿರಿಯರನ್ನು ಸಂಪುಟಕ್ಕೆ ಸೇರ್ಪಡೆ ಮಾಡುವ ಸಾಧ್ಯತೆ ಬಗ್ಗೆ ಸಹ ಬಿಜೆಪಿ ವಲಯದಲ್ಲಿ ಗುಸುಗುಸು ಇದೆ.

ಅನೇಕ ಹೆಸರುಗಳು ದಿಲ್ಲಿ ಮಟ್ಟದಲ್ಲಿ ಓಡಾಡುತ್ತಿವೆಯಾದರೂ ಮೋದಿ, ನಡ್ಡಾ ಮತ್ತು ಶಾ ಅವರ ನಡುವಿನ ಕೊನೆಯ ಭೇಟಿಯಲ್ಲಿ ನಿರ್ಧಾರ ಆಗುವವರೆಗೂ ಖಚಿತತೆ ಸಿಗುವುದು ಕಷ್ಟ.

- ಪ್ರಶಾಂತ್ ನಾತು, ಸುವರ್ಣ ನ್ಯೂಸ್ ದೆಹಲಿ ಪ್ರತಿನಿಧಿ

ಇಂಡಿಯಾ ಗೇಟ್, ದೆಹಲಿಯಿಂದ ಕಂಡ ರಾಜಕಾರಣ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!
ವಿಧಾನಸಭೆಯಲ್ಲಿ 'ಉತ್ತರ ಕರ್ನಾಟಕ' ವಿವಾದ: ಶಿವಲಿಂಗೇಗೌಡರ ಮಾತುಗಳಿಗೆ ಗರಂ ಆದ ಯತ್ನಾಳ್, ಗ್ಯಾರಂಟಿ, ಗುಂಡಿ ವಿಚಾರಕ್ಕೆ ಜಟಾಪಟಿ!