ಬಳ್ಳಾರಿ ಜೀನ್ಸ್ ಉದ್ಯಮ ಪ್ರಗತಿಗೆ ಮೋದಿ ಕ್ರಮ: ಯದುವೀರ್

Published : May 05, 2024, 03:21 PM IST
ಬಳ್ಳಾರಿ ಜೀನ್ಸ್ ಉದ್ಯಮ ಪ್ರಗತಿಗೆ ಮೋದಿ ಕ್ರಮ: ಯದುವೀರ್

ಸಾರಾಂಶ

ಬಳ್ಳಾರಿ ಜೀನ್ಸ್ ಉದ್ಯಮ ಪ್ರಗತಿಗೂ ನರೇಂದ್ರ ಮೋದಿ ಕ್ರಮ ವಹಿಸಲಿದ್ದಾರೆ. ಕೇಂದ್ರದ ಅನೇಕ ನಿಲುವಿನಿಂದ ವ್ಯಾಪಾರಿಗಳಿಗೂ ಅನುಕೂಲವಾಗಿದೆ. ಮೈಸೂರು ಅರಸರಿಗೂ ಜೈನರಿಗೂ ಅವಿನಾಭಾವ ಸಂಬಂಧವಿದೆ. ಇದು ಮುಂದುವರಿದುಕೊಂಡು ಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಚುನಾಯಿಸುವ ಮೂಲಕ ನರೇಂದ್ರ ಮೋದಿ ಕೈ ಬಲಪಡಿಸಬೇಕು ಎಂದ ಯದುವೀರ್  

ಬಳ್ಳಾರಿ(ಮೇ.05): ನಗರದ ಜೈನ ಮಾರುಕಟ್ಟೆ, ತಾಲೂಕಿನ ಗೋನಾಳ್ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಪರ ಮೈಸೂರಿನ ರಾಜಮನೆತನದ ಯದುವೀರ್ ಶನಿವಾರ ಪ್ರಚಾರ ನಡೆಸಿದರು. ಇಲ್ಲಿನ ಜೈನ ಮಾರುಕಟ್ಟೆಗೆ ಭೇಟಿ ನೀಡಿದ ಯದುವೀರ್‌ ಸ್ಥಳೀಯರು, ಮುಖಂಡರ ಸಭೆ ನಡೆಸಿ, ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಚುನಾಯಿಸುವಂತೆ ಮನವಿ ಮಾಡಿದರು.

ಬಳ್ಳಾರಿ ಜೀನ್ಸ್ ಉದ್ಯಮ ಪ್ರಗತಿಗೂ ನರೇಂದ್ರ ಮೋದಿ ಕ್ರಮ ವಹಿಸಲಿದ್ದಾರೆ. ಕೇಂದ್ರದ ಅನೇಕ ನಿಲುವಿನಿಂದ ವ್ಯಾಪಾರಿಗಳಿಗೂ ಅನುಕೂಲವಾಗಿದೆ. ಮೈಸೂರು ಅರಸರಿಗೂ ಜೈನರಿಗೂ ಅವಿನಾಭಾವ ಸಂಬಂಧವಿದೆ. ಇದು ಮುಂದುವರಿದುಕೊಂಡು ಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಚುನಾಯಿಸುವ ಮೂಲಕ ನರೇಂದ್ರ ಮೋದಿ ಕೈ ಬಲಪಡಿಸಬೇಕು ಎಂದರು.

SRI RAMULU VS E TUKARAM: ಯಾರ ಪಾಲಾಗುತ್ತೆ ಬಿಜೆಪಿ ಭದ್ರ ಕೋಟೆ..? ಯಾರ ಪರ ಬಳ್ಳಾರಿ ಮತದಾರನ ಒಲವು..?

ದಲಿತ ಕೇರಿಯಲ್ಲಿ ಯದುವೀರ್ ಪ್ರಚಾರ:

ನಗರದ 17ನೇ ವಾರ್ಡ್ ವ್ಯಾಪ್ತಿಯ ಗೋನಾಳ್ ಗ್ರಾಮದ ದಲಿತಕೇರಿಗೆ ಯದುವೀರ್ ಭೇಟಿ ನೀಡಿದಾಗ ಸ್ಥಳೀಯರು ಪುಷ್ಪಾರ್ಪಣೆ ಮಾಡಿ ಸ್ವಾಗತಿಸಿಕೊಂಡರು. ಮನೆಮನೆಗೆ ತೆರಳಿ ಪ್ರಚಾರ ನಡೆಸಿದ ಯುದುವೀರ್, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸುವಂತೆ ಸ್ಥಳೀಯರಲ್ಲಿ ಮನವಿ ಮಾಡಿದರು. ಇದೇ ವೇಳೆ ದಲಿತ ಮಹಿಳೆಯ ಮನೆಗೆ ಭೇಟಿ ನೀಡಿದ ಯದುವೀರ್ ಎಳನೀರು ಸ್ವೀಕರಿಸಿದರು.

ನೀವು ಬಂದದ್ದು ಬಹಳಷ್ಟು ಸಂತಸವಾಗಿದೆ. ರಾಜರನ್ನು ಹುಡುಕಿಕೊಂಡು ಹೋಗುವ ಕಾಲವಿತ್ತು. ಆದರೆ, ರಾಜಮನೆತನದ ಯದುವೀರ್ ದಲಿತ ಕೇರಿಗೆ ಆಗಮಿಸಿದ್ದು ಸಂತಸ ತಂದಿದೆ ಎಂದು ಸ್ಥಳೀಯರು ಸಂಭ್ರಮದಿಂದ ಹೇಳಿಕೊಂಡರು.
ಇದೇ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಯದುವೀರ್, ಇದೇ ಮೊದಲ ಬಾರಿಗೆ ಬಳ್ಳಾರಿಗೆ ಬಂದಿರುವೆ. ಈ ಹಿಂದೆ ಅಂಜನಾದ್ರಿ ಬೆಟ್ಟಕ್ಕೆ ಸಾಕಷ್ಟು ಬಾರಿ ಬಂದಿರುವೆ. ಶಾಲಾ ದಿನಗಳ ಪ್ರವಾಸದಲ್ಲಿ ಹಂಪಿಗೆ ಆಗಮಿಸಿ, ವಿರೂಪಾಕ್ಷೇಶ್ವರ ದರ್ಶನ ಪಡೆದಿದ್ದೇನೆ. ಇದೀಗ ಶ್ರೀರಾಮುಲು ಪರ ಪ್ರಚಾರ ನಡೆಸಲು ಬಳ್ಳಾರಿಗೆ ಬಂದಿರುವೆ ಎಂದರು.

Interview: ವರ್ಷದ ಹಿಂದೆ ಸೋತಿರಬಹುದು, ಆದರೆ ಈ ಚುನಾವಣೆ ಗೆಲ್ಲುತ್ತೇನೆ -ಶ್ರೀರಾಮುಲು

ಮೈಸೂರು ಮಹಾರಾಜರು ಈ ಹಿಂದಿನಿಂದಲೂ ಜನಸಾಮಾನ್ಯರೊಂದಿಗೆ ಇದ್ದವರು. ಮಹಾರಾಜರ ಕಾಲದಲ್ಲಿಯೇ ಮೀಸಲಾತಿ ಜಾರಿಗೆ ಬಂದಿದ್ದು ಎಂಬುದು ಎಲ್ಲರಿಗೂ ತಿಳಿದಿರುವ ಸಂಗತಿ. ರಾಜ ಕುಟುಂಬದವನಾದರೂ ನಾನು ಜನರ ಜೊತೆ ಇರಲು ಬಯಸುತ್ತೇನೆ ಎಂದರು.

ಮಾಜಿ ಶಾಸಕ ಜಿ.ಸೋಮಶೇಖರ ರೆಡ್ಡಿ, ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್ ಮೋಕಾ, ಮಾಜಿ ಬುಡಾಧ್ಯಕ್ಷ ಮಾರುತಿ ಪ್ರಸಾದ್, ಎಚ್‌.ಹನುಮಂತಪ್ಪ, ಡಾ.ಮಹಿಪಾಲ್, ಕೆ.ಎಂ. ಮಹೇಶ್ವರಸ್ವಾಮಿ ಇದ್ದರು. ದಲಿತಕೇರಿಯ ಯುವಕರು, ಮಕ್ಕಳು ಯದುವೀರ್‌ ಜತೆ ಫೋಟೋ ಕ್ಲಿಕ್ಕಿಸಿಕೊಂಡರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ