ಪ್ರಧಾನಿ ಮೋದಿ ಗ್ಯಾರಂಟಿಯಿಂದ ಜನರಿಗೆ ಅನುಕೂಲ: ಕೇಂದ್ರ ಸಚಿವ ಕ್ರಿಶನ್ ಪಾಲ್

Published : Jan 06, 2024, 12:05 PM IST
ಪ್ರಧಾನಿ ಮೋದಿ ಗ್ಯಾರಂಟಿಯಿಂದ ಜನರಿಗೆ ಅನುಕೂಲ: ಕೇಂದ್ರ ಸಚಿವ ಕ್ರಿಶನ್ ಪಾಲ್

ಸಾರಾಂಶ

ಪ್ರಧಾನಿ ನರೇಂದ್ರ ಮೋದಿಯವರ ಗ್ಯಾರಂಟಿ ಯೋಜನೆಗಳಿಂದ ರೈತರು, ಕೂಲಿ ಕಾರ್ಮಿಕರು, ವ್ಯಾಪಾರಸ್ಥರು ಹಾಗೂ ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಿದೆ ಎಂದು ಕೇಂದ್ರ ಸಚಿವ ಕ್ರಿಶನ್ ಪಾಲ್ ಗುರ್ಜರ್ ತಿಳಿಸಿದರು.

ಮಾಗಡಿ (ಜ.06): ದೇಶದ ಜನರ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರಧಾನಿ ನರೇಂದ್ರ ಮೋದಿಯವರ ಗ್ಯಾರಂಟಿ ಯೋಜನೆಗಳಿಂದ ರೈತರು, ಕೂಲಿ ಕಾರ್ಮಿಕರು, ವ್ಯಾಪಾರಸ್ಥರು ಹಾಗೂ ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಿದೆ ಎಂದು ಕೇಂದ್ರ ಸಚಿವ ಕ್ರಿಶನ್ ಪಾಲ್ ಗುರ್ಜರ್ ತಿಳಿಸಿದರು.

ತಾಲೂಕಿನ ಕಲ್ಯಾ ಗ್ರಾಮದ ಶ್ರೀ ಉರಿಗದ್ದಿಗೇಶ್ವರ ಪ್ರೌಢಶಾಲೆ ಆವರಣದಲ್ಲಿ ನಡೆದ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮೋದಿ ಗ್ಯಾರಂಟಿ ಯೋಜನೆಗಳನ್ನು ಎಲ್ಲ ಸ್ತರದ ಜನರಿಗೆ ತಲುಪಿಸಿ, ಪ್ರತಿ ಗ್ರಾಮದಲ್ಲೂ ಪ್ರಚುರ ಪಡಿಸಬೇಕು ಎಂಬ ಉದ್ದೇಶದಿಂದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಗೋದ್ರಾ ಮಾದರಿ ದಾಳಿ: ಹರಿಪ್ರಸಾದ್ ಹೇಳಿಕೆಯನ್ನು ಸಮರ್ಥಿಸಿಕೊಂಡ ಸಂಸದ ಡಿ.ಕೆ.ಸುರೇಶ್

ವಿಕಸಿತ ಭಾರತ ಸಂಕಲ್ಪಯಾತ್ರೆ ವೇಳೆ ಜನರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಮಾಹಿತಿಯನ್ನು ವಿವರಿಸಲಾಗುವುದು. ಅಂತೆಯೇ ಯೋಜನೆಯ ಲಾಭ ಪಡೆಯದ ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ತಲುಪಿಸುವ ಕೆಲಸ ಮಾಡಲಾಗುವುದು. ದೇಶ ಎಲ್ಲ ಜನರ ಅಭಿವೃದ್ಧಿಯೇ ಕೇಂದ್ರ ಸರ್ಕಾರ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಸರಕಾರ ಯಾವುದೇ ಇರಲಿ ಜನರಿಗೆ ಯೋಜನೆಯ ಲಾಭವನ್ನು ತಲುಪಿಸುವುದು ಸರಕಾರ ಮತ್ತು ಅಧಿಕಾರಿಗಳ ಅಶಯವಾಗಬೇಕು. ಆದರೆ ಈ ಆಶಯಕ್ಕೆ ವಿರುದ್ಧವಾಗಿ ರಾಜ್ಯ ಸರಕಾರ ನಡೆದುಕೊಳ್ಳುತ್ತಿರುವುದು ನೋಡಿದರೆ ಜನರ ಪರಿಸ್ಥಿತಿ ಕೆಳ ಮಟ್ಟದಲ್ಲಿಡಬೇಕು. ಜನರಿಗೆ ಯಾವುದೇ ಯೋಜನೆ ನೀಡಬಾರದು ಎಂಬ ಕೆಟ್ಟ ಉದ್ದೇಶ ರಾಜ್ಯ ಸರಕಾರಕ್ಕಿರುವಂತೆ ಕಾಣುತ್ತಿದೆ ಎಂದು ಕಿಡಿಕಾರಿದರು.

ಕೇಂದ್ರ ಸರ್ಕಾರದ ಯೋಜನೆಗಳು ಕಡುಬಡವರಿಗೂ ದೊರೆಯಲಿ: ಸಚಿವ ಕ್ರಿಶನ್‌ ಪಾಲ್‌

ಪಿಡಿಒಗೆ ತರಾಟೆ: ಕೇಂದ್ರ ಸರಕಾರದ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ. ಇದರಿಂದ ಜನರಿಲ್ಲದೆ ಕಾರ್ಯಕ್ರಮಕ್ಕೆ ಬರುವ ಕೇಂದ್ರ ಸಚಿವರಿಗೆ ಇರಿಸುಮುರಿಸಾಗುತ್ತದೆ. ಜವಾಬ್ದಾರಿ ಇಲ್ಲದಿದ್ದರೆ ಬೇರೆಡೆ ವರ್ಗಾವಣೆಯಾಗಿ ಎಂದು ಕಲ್ಯ ಗ್ರಾಪಂ ಪಿಡಿಒ ಸೋಮಶೇಖರ್ ಅವರನ್ನು ಬಿಜೆಪಿ ಮುಖಂಡ ವೀರಭದ್ರ ಏಕವಚನದಲ್ಲಿ ತರಾಟೆಗೆ ತೆಗೆದುಕೊಂಡರು. ಇದಕ್ಕೆ ಬಿಜೆಪಿ ಉಸ್ತುವಾರಿ ಅಶ್ವಥನಾರಾಯಣಗೌಡ ಧ್ವನಿಗೂಡಿಸಿದರು. ಕಾರ್ಯಕ್ರಮದಲ್ಲಿ ಎಂಎಲ್ಸಿಗಳಾದ ಸಿಪಿ.ಯೋಗೇಶ್ವರ್, ಕೇಶವ ಪ್ರಸಾದ್, ಬಿಜೆಪಿ ವಕ್ತಾರ ಅಶ್ವತ್ಥನಾರಾಯಣಗೌಡ, ಜಿಲ್ಲಾಧ್ಯಕ್ಷ ಉಳುವಾಡಿ ದೇವರಾಜು, ಬಿಜೆಪಿ ಮುಖಂಡ ಕೆ.ಆರ್.ಪ್ರಸಾದ್ ಗೌಡ, ಗ್ರಾ.ಪಂ. ಸದಸ್ಯ ನಾಗರಾಜು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!