ಕಾಂಗ್ರೆಸ್‌ ಗೆಲ್ಲಿಸಿದ್ದಕ್ಕೆ ಕನ್ನಡಿಗರಿಗೆ ಮೋದಿ ಶಿಕ್ಷೆ: ಜೈರಾಂ ರಮೇಶ್‌

Published : Mar 26, 2024, 08:45 AM IST
ಕಾಂಗ್ರೆಸ್‌ ಗೆಲ್ಲಿಸಿದ್ದಕ್ಕೆ ಕನ್ನಡಿಗರಿಗೆ ಮೋದಿ ಶಿಕ್ಷೆ: ಜೈರಾಂ ರಮೇಶ್‌

ಸಾರಾಂಶ

ಮೋದಿ ಸರ್ಕಾರ ನಿರಂತರವಾಗಿ ಭಾರತದ ರಾಜ್ಯಗಳ ಆರ್ಥಿಕತೆಯ ಕತ್ತು ಹಿಸುಕುತ್ತಿದೆ. ಈಗ ಕರ್ನಾಟಕದ ಜನರು ಬೆಲೆ ತೆರಬೇಕಾಗಿ ಬಂದಿದೆ. ಅವರು ತಮ್ಮ ಹಕ್ಕು ಚಲಾಯಿಸಿ ಕಾಂಗ್ರೆಸ್‌ ಸರ್ಕಾರವನ್ನು ಆಯ್ಕೆ ಮಾಡಿದ್ದಕ್ಕೆ ಬಿಜೆಪಿ ಸರ್ಕಾರ ಹೀಗೆ ಸೇಡು ತೀರಿಸಿಕೊಳ್ಳುತ್ತಿದೆ: ಕಾಂಗ್ರೆಸ್‌ ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್‌ 

ನವದೆಹಲಿ(ಮಾ.26):  ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನೀಡಬೇಕಿದ್ದ ಬರ ಪರಿಹಾರ ಸೇರಿದಂತೆ ವಿವಿಧ ಅನುದಾನಗಳನ್ನು ತಡೆಹಿಡಿದಿದೆ ಎಂಬ ರಾಜ್ಯ ಸರ್ಕಾರದ ಕೂಗಿಗೆ ಇದೀಗ ಕಾಂಗ್ರೆಸ್‌ ಹೈಕಮಾಂಡ್‌ ಕೂಡ ದನಿಗೂಡಿಸಿದೆ. ಕರ್ನಾಟಕದ ಜನರು ಕಾಂಗ್ರೆಸ್‌ ಸರ್ಕಾರವನ್ನು ಆಯ್ಕೆ ಮಾಡಿದ್ದಾರೆ ಎಂಬ ಕಾರಣಕ್ಕೆ ಮೋದಿ ಸರ್ಕಾರ ಅನುದಾನ ತಡೆಹಿಡಿಯುವ ಮೂಲಕ ಶಿಕ್ಷೆ ವಿಧಿಸುತ್ತಿದೆ. ಇದು ಬಿಜೆಪಿಯ ಸ್ವಾರ್ಥ ಮತ್ತು ಕ್ಷುಲ್ಲಕ ರಾಜಕಾರಣ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್‌ ಕಿಡಿಕಾರಿದ್ದಾರೆ. 

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧ ಸಿದ್ದರಾಮಯ್ಯ ಮಾಡಿದ್ದ ಟ್ವೀಟ್‌ಗೆ ಟ್ಯಾಗ್‌ ಮಾಡಿ ಟ್ವೀಟ್‌ ಮಾಡಿರುವ ಜೈರಾಂ ರಮೇಶ್‌, ಮೋದಿ ಸರ್ಕಾರ ನಿರಂತರವಾಗಿ ಭಾರತದ ರಾಜ್ಯಗಳ ಆರ್ಥಿಕತೆಯ ಕತ್ತು ಹಿಸುಕುತ್ತಿದೆ. ಈಗ ಕರ್ನಾಟಕದ ಜನರು ಬೆಲೆ ತೆರಬೇಕಾಗಿ ಬಂದಿದೆ. ಅವರು ತಮ್ಮ ಹಕ್ಕು ಚಲಾಯಿಸಿ ಕಾಂಗ್ರೆಸ್‌ ಸರ್ಕಾರವನ್ನು ಆಯ್ಕೆ ಮಾಡಿದ್ದಕ್ಕೆ ಬಿಜೆಪಿ ಸರ್ಕಾರ ಹೀಗೆ ಸೇಡು ತೀರಿಸಿಕೊಳ್ಳುತ್ತಿದೆ. ಹಣಕಾಸು ಸಚಿವರು ಕರ್ನಾಟಕದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಆದರೂ,12,000 ಕೋಟಿ ರು.ಗಿಂತ ಹೆಚ್ಚಿನ ಅನುದಾನವನ್ನು ಕರ್ನಾಟಕಕ್ಕೆ ತಡೆಹಿಡಿದಿದ್ದಾರೆ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆ 2024: ಬಿಜೆಪಿ ಜತೆ ಮೈತ್ರಿ ಯಶಸ್ಸಿಗೆ ಜೆಡಿಎಸ್‌ ಅಷ್ಟಸೂತ್ರ..!

‘ಹಣಕಾಸು ಆಯೋಗ ಕರ್ನಾಟಕಕ್ಕೆ 5495 ಕೋಟಿ ರು. ವಿಶೇಷ ಅನುದಾನ ಹಾಗೂ 6000 ಕೋಟಿ ರು. ನಿರ್ದಿಷ್ಟ ಯೋಜನೆಗಳ ಅನುದಾನ ನೀಡಬೇಕೆಂದು ಶಿಫಾರಸು ಮಾಡಿತ್ತು. ಕರ್ನಾಟಕ ಪ್ರತಿ ವರ್ಷ ಕೇಂದ್ರಕ್ಕೆ 4.3 ಲಕ್ಷ ಕೋಟಿ ರು. ತೆರಿಗೆ ನೀಡುತ್ತಿದೆ. ಎಂದು ವಾಗ್ದಾಳಿ ನಡೆಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!