ಪ್ರಧಾನಿ ಮೋದಿ ಅತಿ ಆತ್ಮವಿಶ್ವಾಸ, ದೇಶಕ್ಕೆ ಒಳ್ಳೆಯದಲ್ಲ: ಖರ್ಗೆ ಟೀಕೆ

Published : Apr 17, 2024, 07:17 AM IST
ಪ್ರಧಾನಿ ಮೋದಿ ಅತಿ ಆತ್ಮವಿಶ್ವಾಸ, ದೇಶಕ್ಕೆ ಒಳ್ಳೆಯದಲ್ಲ: ಖರ್ಗೆ ಟೀಕೆ

ಸಾರಾಂಶ

ಅದೃಷ್ಟವಶಾತ್ ಅಬ್ ಕೀ ಬಾರ್ 600 ಪಾರ್ ’ ಎಂದು ಹೇಳಿಲ್ಲ. ಅಹಂಕಾರದ ಪ್ರಚಾರ, ಪ್ರತಿಪಕ್ಷಗಳನ್ನು ದುರ್ಬಲಗೊಳಿಸುವುದು, ಎಲ್ಲವೂ ನಾನೇ ಎನ್ನುವ ಮೋದಿ ನಡೆ ದುರದೃಷ್ಟಕರ ಎಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ 

ನವದೆಹಲಿ(ಏ.17):  ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಮುಂದಿನ ಐದು ವರ್ಷಗಳ ಅವಧಿಗೆ ಮಾಡಬೇಕು ಎಂದಿರುವ ಕಾರ್ಯ ಯೋಜನೆಗಳ ಪಟ್ಟಿ ಸಿದ್ಧ ಪಡಿಸಿಕೊಂಡು , ಈ ಬಗ್ಗೆ ಕಾರ್ಯದರ್ಶಿಗಳಿಗೆ ಕೂಡ ವಿವರಣೆ ನೀಡುತ್ತಿದ್ದಾರೆ. ಈ ರೀತಿಯ ಅತಿಯಾದ ಆತ್ಮ ವಿಶ್ವಾಸ ಮತ್ತು ದುರಂಹಕಾರ ದೇಶಕ್ಕೆ ಮತ್ತು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಿಟಿಐ ಸಂದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದೇ ಸಂದರ್ಭದಲ್ಲಿ ಈ ಸಲದ ಲೋಕಸಭಾ ಚುನಾವಣೆಯಲ್ಲಿ ನಾವು 400 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎನ್ನುವ ಮೋದಿ ಮಾತಿಗೆ ಖರ್ಗೆ ವ್ಯಂಗ್ಯವಾಡಿದ್ದು, ‘ ಅದೃಷ್ಟವಶಾತ್ ಅಬ್ ಕೀ ಬಾರ್ 600 ಪಾರ್ ’ ಎಂದು ಹೇಳಿಲ್ಲ. ಅಹಂಕಾರದ ಪ್ರಚಾರ , ಪ್ರತಿಪಕ್ಷಗಳನ್ನು ದುರ್ಬಲಗೊಳಿಸುವುದು, ಎಲ್ಲವೂ ನಾನೇ ಎನ್ನುವ ಮೋದಿ ನಡೆ ದುರದೃಷ್ಟಕರ ’ ಎಂದಿದ್ದಾರೆ.

ನಾನು ಇನ್ನೂ ಸತ್ತಿಲ್ಲ, ಬದುಕಿದ್ದೇನೆ: ಮಲ್ಲಿಕಾರ್ಜುನ ಖರ್ಗೆ ಎಮೋಷನಲ್ ಭಾಷಣ!

ಇದೇ ಸಂದರ್ಭದಲ್ಲಿ ಮಹಾಮೈತ್ರಿ ಕೂಟದ ಪ್ರಧಾನಿ ಅಭ್ಯರ್ಥಿ ಯಾರು ಎನ್ನುವ ಪ್ರಶ್ನೆಗೂ ಉತ್ತರ ನೀಡಿರುವ ಖರ್ಗೆ ‘ ಇಂಡಿಯಾ ಮೈತ್ರಿ ಕೂಟದ ಪ್ರಧಾನಿ ಅಭ್ಯರ್ಥಿ ಯಾರು ಎನ್ನುವುದು ಫಲಿತಾಂಶದ ಬಳಿಕವೇ ನಿರ್ಧಾರವಾಗುತ್ತದೆ. ಎಲ್ಲದಕ್ಕೂ ಮೊದಲು ನಾವು ಚುನಾವಣೆಯನ್ನು ಗೆಲ್ಲಬೇಕು’ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ