
ಹಾವೇರಿ(ಮೇ.06): ಸರ್ವಜ್ಞ ಮತ್ತು ಕನಕದಾಸರ ನಾಡು ಹಾವೇರಿ ಜನತೆಗೆ ನನ್ನ ನಮಸ್ಕಾರ ಅಂತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಮಾತನಾಡುವ ಮೂಲಕ ಭಾಷಣವನ್ನ ಆರಂಭಿಸಿದ್ದಾರೆ. ಹೌದು, ಇಂದು(ಶನಿವಾರ) ನಗರದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಮೋದಿ ಭಜರಂಗ ಬಲಿ ಕಿ ಜೈ ಅಂತ ಮೋದಿ ಕೂಗಿದ್ದಾರೆ. ಇದಕ್ಕೆ ಪ್ರತಿಯಾಗಿ ಸಮಾವೇಶದಲ್ಲಿ ನೆರೆದ ಜನ ಕೂಡ ಜೈ ಅಂತ ಹುಮ್ಮಸ್ಸಿನಿಂದ ಕೂಗಿದ್ದಾರೆ.
ನೀವು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದೀರಿ. ನಮಗೆ ಆಶೀರ್ವಾದ ಮಾಡಲು ಬಂದಿದ್ದೀರಿ. ಸುಳ್ಳು ಹಿಡಿದುಕೊಂಡು ಕಾಂಗ್ರೆಸ್ನವರು ಹೋಗ್ತಾ ಇದಾರೆ. ಕರ್ನಾಟಕ ಕಾಂಗ್ರೆಸ್ ತುಷ್ಟೀಕರಣ ನೀತಿಯನ್ನು ಕರ್ನಾಟಕದ ಪ್ರತಿಯೊಬ್ಬರು ತಿಳಿದುಕೊಂಡಿದ್ದಾರೆ. ಒಬಿಸಿ, ಲಿಂಗಾಯತ ಎಲ್ಲರೂ ಕೋಪದಲ್ಲಿದ್ದಾರೆ. ಜನರ ಸಿಟ್ಟು ಈಗ ಸಂಕಲ್ಪ ಆಗಿದೆ. ಕರ್ನಾಟಕದ ಗಲ್ಲಿ ಗಲ್ಲಿ, ಮನೆ ಮನೆಗಳಿಂದ ನಾಲ್ಕೂ ದಿಕ್ಕುಗಳಿಂದ ಒಂದೇ ದನಿ ಬರುತ್ತಿದೆ. ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರವಾಗಿದೆ ಅಂತ ಪ್ರಧಾನಿ ಮೋದಿ ಹೇಳಿದ್ದಾರೆ.
ಹಿರೇಕೆರೂರಲ್ಲಿ ಬಿ.ಸಿ.ಪಾಟೀಲ, ಬಣಕಾರ ನಡುವೆ ಜಿದ್ದಾಜಿದ್ದಿ: ಅಭ್ಯರ್ಥಿಗಳು ಅವರೇ, ಪಕ್ಷ ಮಾತ್ರ ಬೇರೆ!
ಸಹೋದರ ಸಹೋದರಿಯರೇ ಸ್ವಾತಂತ್ರ್ಯದ ಬಳಿಕ ಹಲವು ದಶಕಗಳ ಕಾಲ ಕಾಂಗ್ರೆಸ್ ಸರ್ಕಾರ ಇತ್ತು. ಕರ್ನಾಟಕದಲ್ಲೂ ಕಾಂಗ್ರೆಸ್ ಸರ್ಕಾರ ಇತ್ತು. ಯಡಿಯೂರಪ್ಪ ಹಾಗೂ ಬೊಮ್ಮಾಯಿ ಸರ್ಕಾರ ಮೂರುವರೆ ವರ್ಷಗಳಲ್ಲಿ ಕಾಂಗ್ರೆಸ್ನ ಅಭಾವ, ಡಬಲ್ ಇಂಜಿನ್ ಸರ್ಕಾರದ ಪ್ರಭಾವ ಹಾವೇರಿ ಜನ ನೋಡ್ತಾ ಇದಾರೆ. ಡಬಲ್ ಇಂಜಿನ್ ಸರ್ಕಾರದಿಂದ ಹಾವೇರಿಗೆ ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಕಾಲೇಜ್ ಸಿಕ್ಕಿದೆ. ಹೊಸ ಮಿಲ್ಕ್ ಡೈರಿ, ರಸ್ತೆ, ರೈಲು ಎಲ್ಲಾ ಅಭಿವೃದ್ಧಿ ಆಗಿದೆ. 6 ಪಥದ ಚಿತ್ರದುರ್ಗ, ದಾವಣಗೆರೆ, ಹಾವೇರಿ ಹೈವೇ ಯಾರ ಕೊಡುಗೆಯಾಗಿದೆ ಅಂತ ಕೇಳುವ ಮೂಲಕ ಕಾಂಗ್ರೆಸ್ ವಿರುದ್ಧ ಮೋದಿ ಕೆಂಡ ಕಾರಿದ್ದಾರೆ.
ವಿಕಾಸದ ಈ ಎಲ್ಲಾ ಕಾರ್ಯಗಳನ್ನು ಕಾಂಗ್ರೆಸ್ ಮಾಡಬಹುದಿತ್ತು. ಅವರಿಗೆ ಅವಕಾಶ ಸಿಕ್ಕಿತ್ತು ಆದರೆ ಕಾಂಗ್ರೆಸ್ ಏನನ್ನೂ ಮಾಡಲಿಲ್ಲ. ಕಾಂಗ್ರೆಸ್ ಅಂದರೆ ಟೋಟಲ್ ಕರಪ್ಷನ್, ಕಾಂಗ್ರೆಸ್ನವರದ್ದು 85% ಕಮಿಷನ್, ಕಾಂಗ್ರೆಸ್ನವರು ಎಲ್ಲಾ ಹಣ ತಾವೇ ಲೂಟಿ ಮಾಡ್ತಾರೆ. ಸಹೋದರ ಸಹೋದರಿಯರೇ ಯೂರಿಯಾ ಕೊರತೆ ಉಂಟಾಗಿತ್ತು. ಕಾಂಗ್ರೆಸ್ ರೈತರ ಹಣ ಕೂಡಾ ಲೂಟಿ ಮಾಡ್ತು ಅಂತ ಹೇಳುವ ಮೂಲಕ ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.