Lok Sabha Elections 2024: ಇವಿಎಂ ತೀರ್ಪು ವಿಪಕ್ಷಗಳಿಗೆ ಚಾಟಿ: ಪ್ರಧಾನಿ ಮೋದಿ

Published : Apr 27, 2024, 07:00 AM IST
Lok Sabha Elections 2024: ಇವಿಎಂ ತೀರ್ಪು ವಿಪಕ್ಷಗಳಿಗೆ ಚಾಟಿ: ಪ್ರಧಾನಿ ಮೋದಿ

ಸಾರಾಂಶ

ಚುನಾವಣೆಗೆ ಮರಳಿ ಮತಪತ್ರ ಬಳಸಬೇಕು ಮತ್ತು ಇವಿಎಂಗಳಲ್ಲಿ ಚಲಾವಣೆಯಾಗುವ ಎಲ್ಲಾ ಮತಗಳನ್ನು ವಿವಿಪ್ಯಾಟ್‌ನಲ್ಲಿ ಮುದ್ರಿತವಾಗುವ ಪ್ರತಿಯೊಂದಿಗೆ ಮತತಾಳೆ ನಡೆಸಬೇಕು ಎಂದು ಕೋರಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂಕೋರ್ಟ್‌ ಶುಕ್ರವಾರ ವಜಾ ಮಾಡಿದ ಬೆನ್ನಲ್ಲೇ ವಿಪಕ್ಷಗಳ ವಿರುದ್ಧ ಹರಿಹಾಯ್ದ ಪ್ರಧಾನಿ ಮೋದಿ

ಅರಾರಿಯಾ(ಬಿಹಾರ)(ಏ.27):  ‘ಎಲೆಕ್ಟ್ರಾನಿಕ್‌ ವೋಟಿಂಗ್‌ ಮಷಿನ್‌ (ಇವಿಎಂ)ಗಳ ಮೇಲಿನ ಅನುಮಾನಗಳನ್ನು ನಿವಾರಿಸಿದ ಸುಪ್ರೀಂಕೋರ್ಟ್‌ನ ಶುಕ್ರವಾರದ ತೀರ್ಪು ಕಾಂಗ್ರೆಸ್‌ ನೇತೃತ್ವದ ವಿಪಕ್ಷಗಳಿಗೆ ಹಾಕಿದ ತಪರಾಕಿ. ಇದೇ ವಿಷಯ ಮುಂದಿಟ್ಟು ಹಲವು ವರ್ಷಗಳಿಂದ ಜನರಲ್ಲಿ ಗೊಂದಲ ಸೃಷ್ಟಿ ಮಾಡಿದ್ದ ವಿಪಕ್ಷಗಳು, ಈ ಕುರಿತು ದೇಶದ ಕ್ಷಮೆ ಕೇಳಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಆಗ್ರಹ ಮಾಡಿದ್ದಾರೆ.

ಚುನಾವಣೆಗೆ ಮರಳಿ ಮತಪತ್ರ ಬಳಸಬೇಕು ಮತ್ತು ಇವಿಎಂಗಳಲ್ಲಿ ಚಲಾವಣೆಯಾಗುವ ಎಲ್ಲಾ ಮತಗಳನ್ನು ವಿವಿಪ್ಯಾಟ್‌ನಲ್ಲಿ ಮುದ್ರಿತವಾಗುವ ಪ್ರತಿಯೊಂದಿಗೆ ಮತತಾಳೆ ನಡೆಸಬೇಕು ಎಂದು ಕೋರಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂಕೋರ್ಟ್‌ ಶುಕ್ರವಾರ ವಜಾ ಮಾಡಿದ ಬೆನ್ನಲ್ಲೇ ಮೋದಿ ವಿಪಕ್ಷಗಳ ವಿರುದ್ಧ ಹರಿಹಾಯ್ದಿದ್ದಾರೆ.

ಇವಿಎಂ ಬಗ್ಗೆ ಇದ್ದ ಅನುಮಾನ ಕ್ಲಿಯರ್‌ ಆಗಿದೆ, ಚುನಾವಣೆ ನಿಯಂತ್ರಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

ಬಿಹಾರದ ಅರಾರಿಯಾದಲ್ಲಿ ಶುಕ್ರವಾರ ಬಿಜೆಪಿ ಚುನಾವಣಾ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ‘ರಾಜ್ಯದಲ್ಲಿ ಕಾಂಗ್ರೆಸ್‌ ಮತ್ತು ಆರ್‌ಜೆಡಿ ಅಧಿಕಾರದಲ್ಲಿದ್ದಾಗ ಮತಗಟ್ಟೆಗಳ ಅಪಹರಣದ ಮೂಲಕ ಬಡವರು, ಹಿಂದುಳಿದವರು ಮತ್ತು ದಲಿತರ ಹಕ್ಕುಗಳನ್ನು ಕಸಿದುಕೊಳ್ಳಲಾಗಿತ್ತು. ಆದರೆ ಇವಿಎಂಗಳ ಜಾರಿ ಬಳಿಕ ಅವರ ಅಟಕ್ಕೆ ಬ್ರೇಕ್‌ ಬಿದ್ದಿತ್ತು. ಹೀಗಾಗಿಯೇ ಅವರು ಜನರಲ್ಲಿ ಇವಿಎಂಗಳ ಬಗ್ಗೆ ಗೊಂದಲ ಸೃಷ್ಟಿಸುವ ತಪ್ಪು ಮಾಡಿದರು. ಆದರೆ ಸುಪ್ರೀಂಕೋರ್ಟ್‌ನ ಶುಕ್ರವಾರದ ತೀರ್ಪು ಈ ಪಕ್ಷಗಳಿಗೆ ಹಾಕಿದ ತಪರಾಕಿಯಾಗಿದೆ. ಮತ್ತೆ ಹಿಂದಿನಂತೆ ಮತಪೆಟ್ಟಿಗೆ ತಂದು ಮತಗಳನ್ನು ಲೂಟಿ ಮಾಡಲು ಸಂಚು ರೂಪಿಸಿದವರಿಗೆ ಮುಖಭಂಗವಾಗಿದೆ’ ಎಂದು ಕಿಡಿಕಾರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ
ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ