ಯಾವ ಬೈಗುಳವೂ ನನಗೆ ನಾಟಲ್ಲ: ಪ್ರಧಾನಿ ಮೋದಿ

Published : May 29, 2024, 07:00 AM IST
ಯಾವ ಬೈಗುಳವೂ ನನಗೆ ನಾಟಲ್ಲ: ಪ್ರಧಾನಿ ಮೋದಿ

ಸಾರಾಂಶ

ಈ ಕಸ (ಆರೋಪ) ಎಸೆಯುವವರನ್ನು ಕೇಳಿ. ನೀವು ಹೇಳುತ್ತಿರುವುದಕ್ಕೆ ಪುರಾವೆ ಏನಿದೆ? ಈ ಕಸವನ್ನು ಗೊಬ್ಬರವನ್ನಾಗಿ ಪರಿವರ್ತಿಸಿ ಅದರಿಂದ ದೇಶಕ್ಕೆ ಒಂದಿಷ್ಟು ಒಳ್ಳೆಯದನ್ನು ಉತ್ಪಾದಿಸುತ್ತೇನೆ ಎಂದು ಟಾಂಗ್ ನೀಡಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ(ಮೇ.29): ‘2024ರ ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ಪ್ರತಿಪಕ್ಷಗಳು ತಮ್ಮ ಮೇಲೆ ಸಾಕಷ್ಟು ವೈಯಕ್ತಿಕ ದಾಳಿ ನಡೆಸಿವೆ’ ಎಂದು ಆರೋಪಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ಪ್ರತಿಪಕ್ಷಗಳು ನನ್ನನ್ನು ಎಷ್ಟೇ ಬೈಯಲಿ. ನಾನು 1999ರಲ್ಲಿ ಗುಜರಾತ್‌ ಮುಖ್ಯಮಂತ್ರಿ ಆದ ಬಳಿಕ 24 ವರ್ಷಗಳಿಂದ ಅಧಿಕಾರದಲ್ಲಿದ್ದೇನೆ ಹಾಗೂ ಈ 24 ವರ್ಷಗಳಲ್ಲಿ ನಾನು ‘ಬೈಗುಳ ನಿರೋಧಕ’ (ನಿಂದನಾ ನಿರೋಧಕ/ ಗಾಲಿ ಪ್ರೂಫ್) ಆಗಿಬಿಟ್ಟಿದ್ದೇನೆ’ ಎಂದಿದ್ದಾರೆ.

ಎಎನ್‌ಐ ಸುದ್ದಿಸಂಸ್ಥೆಗೆ ಮಂಗಳವಾರ ಸಂದರ್ಶನ ನೀಡಿದ ಮೋದಿ, ‘ಕಳೆದ 24 ವರ್ಷಗಳಿಂದ ನಿರಂತರವಾಗಿ ನಿಂದನೆಗೊಳಗಾದ ನಂತರ, ನಾನು ‘ಗಾಲಿ ಪ್ರೂಫ್’ ಆಗಿದ್ದೇನೆ. ನನ್ನನ್ನು ‘ಮೌತ್ ಕಾ ಸೌದಾಗರ್’ (ಸಾವಿನ ವ್ಯಾಪಾರಿ) ಮತ್ತು ‘ಗಂದಿ ನಾಲಿ ಕಾ ಕೀಡಾ’ (ಗಟಾರದ ಒಳಗಿನ ಹುಳ) ಎಂದು ಕರೆದವರು ಯಾರು? ನಮ್ಮ ಸಂಸದರು, ‘ಮೋದಿ ಅವರ ಮೇಲೆ 101 ಬೈಗುಳಗಳು ಕೇಳಿಬಂದಿವೆ’ ಎಂದು ಲೆಕ್ಕ ಹಾಕಿದ್ದಾರೆ. ಆದ್ದರಿಂದ ಚುನಾವಣೆ ಇರಲಿ ಅಥವಾ ಚುನಾವಣೆಯಿಲ್ಲದಿರಲಿ, ಈ ಜನರು (ವಿರೋಧ ಪಕ್ಷ) ಬೈಯುವ ಹಕ್ಕು ತಮಗೆ ಮಾತ್ರ ಇದೆ ಎಂದು ಭಾವಿಸುತ್ತಾರೆ. ಅವರು ಹತಾಶೆಗೊಂಡಿದ್ದಾರೆ ಮತ್ತು ಅವರು ಈಗ ನಿಂದನೆಯನ್ನೇ ತಮ್ಮ ಸ್ವಭಾವ ಮಾಡಿಕೊಂಡಿದ್ದಾರೆ’ ಎಂದು ತರಾಟೆಗೆ ತೆಗೆದುಕೊಡರು.

3ನೇ ಮಗು ಹುಟ್ಟಿದ್ದಕ್ಕೆ ಇಬ್ಬರು ಬಿಜೆಪಿ ಕಾರ್ಪರೇಟರ್‌ಗಳು ಅನರ್ಹ: ಮೋದಿ ರೂಪಿಸಿದ್ದ ಕಾನೂನು..!

ತನಿಖಾ ಸಂಸ್ಥೆಗಳನ್ನು ನಿಗ್ರಹಿಸಲು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂಬ ವಿರೋಧ ಪಕ್ಷದ ನಾಯಕರ ಆರೋಪಗಳನ್ನು ತಳ್ಳಿಹಾಕಿದ ಮೋದಿ, ‘ಈ ಕಸ (ಆರೋಪ) ಎಸೆಯುವವರನ್ನು ಕೇಳಿ. ನೀವು ಹೇಳುತ್ತಿರುವುದಕ್ಕೆ ಪುರಾವೆ ಏನಿದೆ? ಈ ಕಸವನ್ನು ಗೊಬ್ಬರವನ್ನಾಗಿ ಪರಿವರ್ತಿಸಿ ಅದರಿಂದ ದೇಶಕ್ಕೆ ಒಂದಿಷ್ಟು ಒಳ್ಳೆಯದನ್ನು ಉತ್ಪಾದಿಸುತ್ತೇನೆ’ ಎಂದು ಟಾಂಗ್ ನೀಡಿದರು.

‘ಮನಮೋಹನ್ ಸಿಂಗ್ ಅಧಿಕಾರದಲ್ಲಿದ್ದಾಗ 10 ವರ್ಷಗಳಲ್ಲಿ ಇ.ಡಿ. 34 ಲಕ್ಷ ರು. ವಶಪಡಿಸಿಕೊಂಡಿತ್ತು. ಆದರೆ ನಮ್ಮ ಸರ್ಕಾರ 10 ವರ್ಷಗಳಲ್ಲಿ 2,200 ಕೋಟಿ ರು.ಗಳನ್ನು ಇ.ಡಿ. ವಶಪಡಿಸಿಕೊಂಡಿದೆ. ಈ ರೀತಿ ಹಣ ವಶ ಮಾಡಿಕೊಂಡವರನ್ನು ಗೌರವಿಸಬೇಕೇ ವಿನಾ, ಬೈಯಬಾರದು. ಭ್ರಷ್ಟಾಚಾರದ ಬಗ್ಗೆ ನನ್ನದು ಶೂನ್ಯ ಸಹಿಷ್ಣುತೆ’ ಎಂದರು.

‘ಇಂಡಿಯಾ ಒಕ್ಕೂಟಕ್ಕೆ ದೇಶದ ಅಭಿವೃದ್ಧಿ ಆಗಬಾರದು ಎಂಬ ಉದ್ದೇಶವಿದೆ. ಅದಕ್ಕೇ ಅವರು ನನ್ನನ್ನು ಬೈಯುತ್ತಾರೆ ಹಾಗೂ ಬೆದರಿಸುತ್ತಾರೆ. ಆದರೆ ಬರೀ ತಮ್ಮ ಖಜಾನೆ ಭರ್ತಿ ಆಗಬೇಕು ಎಂಬ ಉದ್ದೇಶ ಹೊಂದಿರುವವರು ನನ್ನನ್ನು ಬೈಯಬಾರದರು’ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!