
ಬಾಗಲಕೋಟೆ(ಏ.27): ಬಾಗಲಕೋಟೆ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಹಾಗೂ ವಿಜಯಪುರ ಅಭ್ಯರ್ಥಿ ರಮೇಶ ಜಿಗಜಿಣಗಿ ಪರವಾಗಿ ಪ್ರಚಾರ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಏ.29 ರಂದು ಬಾಗಲಕೋಟೆಗೆ ಆಗಮಿಸಲಿದ್ದಾರೆ.
ನವನಗರದಲ್ಲಿ ನಡೆಯುವ ಮೋದಿ ಅವರ ವೇದಿಕೆ ಕಾರ್ಯಕ್ರಮದ ಸಿದ್ಧತೆ ಕುರಿತು ಶುಕ್ರವಾರ ಮಾಹಿತಿ ನೀಡಿದ ಬೆಳಗಾವಿ ವಿಭಾಗದ ಚುನಾವಣೆ ಸಂಯೋಜಕ, ಶಾಸಕ ಮಹೇಶ ಟೆಂಗಿನಕಾಯಿ, ನವನಗರದ ತೋಟಗಾರಿಕೆ ವಿವಿ ಸಮೀಪದ ನೂರು ಎಕರೆ ಜಾಗದಲ್ಲಿ ಸಮಾವೇಶ ನಡೆಯಲಿದೆ.
ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂ, ಗೋವುಗಳಿಗೂ ರಕ್ಷಣೆ ಇಲ್ಲ: ಮುರುಗೇಶ ನಿರಾಣಿ
ಅಂದು ಬೆಳಗ್ಗೆ 10 ಗಂಟೆಗೆ ನಡೆಯುವ ಪ್ರಚಾರ ಸಭೆಗೆ ವಿಜಯಪುರ-ಬಾಗಲಕೊಟೆ ಜಿಲ್ಲೆಯಿಂದ 1.50 ಲಕ್ಷ ಜನ ಆಗಮಿಸುವ ನಿರೀಕ್ಷೆ ಇದೆ. ರಾಜ್ಯದ ಮುಖಂಡರು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ ಹಲವು ನಾಯಕರು ಪಾಲ್ಗೊಳ್ಳುವರು ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.