ಮಾ.12ಕ್ಕೆ ಮಂಡ್ಯದಲ್ಲಿ ಮೋದಿ ಭರ್ಜರಿ 15 ಕಿ.ಮೀ ರೋಡ್‌ ಶೋ

Published : Mar 08, 2023, 12:30 AM IST
ಮಾ.12ಕ್ಕೆ ಮಂಡ್ಯದಲ್ಲಿ ಮೋದಿ ಭರ್ಜರಿ 15 ಕಿ.ಮೀ ರೋಡ್‌ ಶೋ

ಸಾರಾಂಶ

ಪಿಇಎಸ್‌ ಎಂಜಿನಿಯರಿಂಗ್‌ ಕಾಲೇಜು ಮೈದಾನದಿಂದ ಗೆಜ್ಜಲಗೆರೆವರೆಗೆ ರೋಡ್‌ಶೋ, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಉದ್ಘಾಟನೆ ಬಳಿಕ ಬೃಹತ್‌ ಸಮಾವೇಶ. 

ಮಂಡ್ಯ(ಮಾ.08):  ಪ್ರಧಾನಿ ನರೇಂದ್ರ ಮೋದಿಯವರು ಮಾ.12ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಮಂಡ್ಯದಲ್ಲಿ ಮೈ-ಬೆಂ ಹೆದ್ದಾರಿ ಉದ್ಘಾಟನೆ, ರೋಡ್‌ ಶೋ ಮತ್ತು ಬೃಹತ್‌ ಸಮಾವೇಶ ನಡೆಸಲಿದ್ದಾರೆ. ಬಳಿಕ, ಹುಬ್ಬಳ್ಳಿಯಲ್ಲಿ ಐಐಟಿಯ ನೂತನ ಕಟ್ಟಡ ಉದ್ಘಾಟಿಸಿ, ಬೃಹತ್‌ ಸಮಾವೇಶ ನಡೆಸಲಿದ್ದಾರೆ.

ಬೆಳಗ್ಗೆ ಮಂಡ್ಯದ ಪಿಇಎಸ್‌ ಇಂಜಿನಿಯರಿಂಗ್‌ ಕಾಲೇಜು ಕ್ರೀಡಾಂಗಣಕ್ಕೆ ಹೆಲಿಕಾಪ್ಟರ್‌ ಮೂಲಕ ಆಗಮಿಸುವ ಮೋದಿ, ಪಿಇಎಸ್‌ ಕಾಲೇಜಿನಿಂದ ಗೆಜ್ಜಲಗೆರೆಯವರೆಗೆ ರೋಡ್‌ ಶೋ ನಡೆಸಲಿದ್ದಾರೆ. ಬಳಿಕ ಗೆಜ್ಜಲಗೆರೆಯ ಕೈಗಾರಿಕಾ ಪ್ರದೇಶದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಇದೇ ವೇಳೆ, ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯನ್ನು ಮೋದಿ ಉದ್ಘಾಟಿಸಲಿದ್ದಾರೆ.

ಡಿ.ಕೆ.ಶಿವಕುಮಾರ್‌, ಕುಮಾರಸ್ವಾಮಿಯಿಂದ ಜಾತಿ ರಾಜಕಾರಣ: ಸಿ.ಟಿ.ರವಿ

ಈ ಹಿನ್ನೆಲೆಯಲ್ಲಿ ಮಾ.12ರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಾಹನಗಳ ಸಂಚಾರ ಮಾರ್ಗವನ್ನು ಬದಲಾಯಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಪೊಲೀಸ್‌ ಅಧೀಕ್ಷಕ ಎನ್‌.ಯತೀಶ್‌ ತಿಳಿಸಿದ್ದಾರೆ. ಮೈಸೂರಿನಿಂದ ಬೆಂಗಳೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲಾ ರೀತಿಯ ವಾಹನಗಳಿಗೆ ಮೈಸೂರು-ಬನ್ನೂರು-ಕಿರುಗಾವಲು - ಮಳವಳ್ಳಿ -ಹಲಗೂರು - ಕನಕಪುರ - ಬೆಂಗಳೂರು ಮಾರ್ಗವಾಗಿ ಸಂಚರಿಸಲು ಅವಕಾಶ ಮಾಡಿಕೊಡಲಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ವಾಹನಗಳಿಗೆ ಬೆಂಗಳೂರು-ಚನ್ನಪಟ್ಟಣ- ಹಲಗೂರು-ಮಳವಳ್ಳಿ-ಕಿರುಗಾವಲು-ಬನ್ನೂರು-ಮೈಸೂರು ಮಾರ್ಗವಾಗಿ ಸಂಚರಿಸಲು ಅವಕಾಶ ಮಾಡಿಕೊಡಲಾಗಿದೆ. ಬೆಂಗಳೂರಿನಿಂದ ಮದ್ದೂರು ಮಾರ್ಗವಾಗಿ ಕೊಳ್ಳೇಗಾಲ ಮಹದೇಶ್ವರ ಬೆಟ್ಟಕ್ಕೆ ತೆರಳುವ ಎಲ್ಲಾ ರೀತಿಯ ವಾಹನಗಳನ್ನು ಬೆಂಗಳೂರು-ಚನ್ನಪಟ್ಟಣ ಮಾರ್ಗವಾಗಿ ಸಂಚರಿಸಲು ಅನುವು ಮಾಡಿಕೊಡಲಾಗಿದೆ ಎಂದು ಅವರು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ