ಮಾ.16ಕ್ಕೆ ಕಲಬುರಗಿಗೆ ಪ್ರಧಾನಿ ಮೋದಿ ಭೇಟಿ, 2 ಲಕ್ಷ ಜನ ಸೇರುವ ನಿರೀಕ್ಷೆ: ತೇಲ್ಕೂರ

Published : Mar 14, 2024, 11:00 PM IST
ಮಾ.16ಕ್ಕೆ ಕಲಬುರಗಿಗೆ ಪ್ರಧಾನಿ ಮೋದಿ ಭೇಟಿ, 2 ಲಕ್ಷ ಜನ ಸೇರುವ ನಿರೀಕ್ಷೆ: ತೇಲ್ಕೂರ

ಸಾರಾಂಶ

ಈ ಬೃಹತ್ ಸಮಾವೇಶದಲ್ಲಿ ರಾಷ್ಟ್ರ ಮತ್ತು ರಾಜ್ಯ ನಾಯಕರು ಮತ್ತು ಕಲಬುರಗಿ, ಬೀದರ್ ಸಂಸದರು ಸೇರಿದಂತೆ ಬಿಜೆಪಿ ಪಕ್ಷದ ಇನ್ನಿತರ ಹಲವಾರು ಮುಖಂಡರು ಪಾಲ್ಗೊಳ್ಳಲಿದ್ದಾರೆ: ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ   

ಸೇಡಂ(ಮಾ.14):  ಮುಂಬರುವ ಕಲಬುರಗಿ- ಬೀದರ್‌ ಎರಡೂ ಲೋಕಸಭೆ ಚುನಾವಣೆ ಪ್ರಚಾರದ ನಿಮಿತ್ತ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾ.16ರಂದು ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಏರ್ಪಡಿಸಲಾಗಿರುವ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಕಲ್ಯಾಣ ಕರ್ನಾಟಕ ದಿಂದಲೇ ಕರ್ನಾಟಕದ ಲೋಕಸಭೆ ಚುನಾವಣೆ ಕಹಳೆ ಊದಲಿದ್ದಾರೆ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ತಿಳಿಸಿದ್ದಾರೆ.

ಅವರು ಬುಧವಾರ ಸೇಡಂ ಪಟ್ಟಣದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಅಂದು ನಡೆಯಲಿರುವ ಕಾರ್ಯಕ್ರಮಕ್ಕೆ ಎರಡೂ ಲೋಕಸಭೆ ಕ್ಷೇತ್ರದ ಸುಮಾರು ಎರಡು ಲಕ್ಷ ಜನ ಸಾಕ್ಷಿಯಾಗಲಿದ್ದಾರೆ ಎಂದ ಅವರು, ಕಾರ್ಯಕ್ರಮದ ಯಶಸ್ಸಿಗೆ ಸಕಲ ಸಿದ್ಧತೆ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಕಾರ್ಯಕರ್ತರಿಗೆ ಕಲಬುರಗಿ ನಗರಕ್ಕೆ ಪ್ರವೇಶಿಸಿಸುವ ಎಲ್ಲಾ ಪ್ರಮುಖ ರಸ್ತೆಗಳಲ್ಲಿರುವ ಕಲ್ಯಾಣ ಮಂಟಪಗಳಲ್ಲಿ ಊಟದ ವ್ಯವಸ್ಥೆ ಮಾಡಲಾಗುತ್ತಿದೆ.

ಬಿಜೆಪಿ ಸರ್ಕಾರ ಇದ್ದಾಗ ಭಯೋತ್ಪಾದಕರ ಅಡ್ಡೆಯಾಗಿತ್ತು; ನಮ್ಮ ಸರ್ಕಾರ ಬಂದ ಮೇಲೆ ಕಡಿಮೆಯಾಗಿದೆ: ರಾಮಲಿಂಗಾರೆಡ್ಡಿ

ಸೇಡಂ ತಾಲೂಕಿನಿಂದ ಹತ್ತು ಸಾವಿರ ಜನ ಬರಲಿದ್ದು ಒಂದು ಸಾವಿರ ವಾಹನ ಸೇಡಂ ನಿಂದಲೇ ವ್ಯವಸ್ಥೆ ಮಾಡಲಾಗಿದೆ. ಬಿಜೆಪಿ ನೇತೃತ್ವದ ಎನ್ಡಿಎ ಗೆ ಲೋಕಸಭೆ ಯಲ್ಲಿ ಈ ಬಾರಿ ನಾಲ್ಕು ನೂರು ಕ್ಷೇತ್ರದ ಗುರಿಯೊಂದಿಗೆ ಭಾರತಕ್ಕೆ ಮತ್ತೊಮ್ಮೆ ಮೋದಿ ಎಂಬ ಘೋಷಣೆಯೊಂದಿಗೆ ಎರಡು ಲಕ್ಷ ಜನ ಸೇರುವ ನಿರೀಕ್ಷೆಯಿದೆ ಹಾಗೆಯೇ ಮೋದಿ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಕಾರ್ಯಕ್ರಮ ಯಶಸ್ವಿಗೊಳಿಸಲು ವಿನಂತಿಸಿದರು. ಈ ಬೃಹತ್ ಸಮಾವೇಶದಲ್ಲಿ ರಾಷ್ಟ್ರ ಮತ್ತು ರಾಜ್ಯ ನಾಯಕರು ಮತ್ತು ಕಲಬುರಗಿ, ಬೀದರ್ ಸಂಸದರು ಸೇರಿದಂತೆ ಬಿಜೆಪಿ ಪಕ್ಷದ ಇನ್ನಿತರ ಹಲವಾರು ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕಲಬುರಗಿ ಲೋಕಸಭೆ ಚುನಾವಣೆ ಸೇಡಂ ಉಸ್ತುವಾರಿ ಅವ್ವಣ್ಣ ಮ್ಯಾಗೇರಿ, ಸೇಡಂ ಮಂಡಲದ ಬಿಜೆಪಿ ಅಧ್ಯಕ್ಷ ಶರಣು ಶಂಕರ್, ಪ್ರದಾನ ಕಾರ್ಯದರ್ಶಿಗಳಾದ ತಿರುಪತಿ ಶಾಬಾದಕರ್, ವೀರೇಶ ಹೂಗಾರ, ಎಪಿಎಂಸಿ ಮಾಜಿ ಅಧ್ಯಕ್ಷ ಸಿದ್ದು ಬಾನಾರ, ಎಸ್ಸಿ ಮೋರ್ಚಾ ಮಾಜಿ ಅಧ್ಯಕ್ಷ ವಿಜಯಕುಮಾರ್ ಆಡಕಿ, ಓಂಪ್ರಕಾಶ್ ಪಾಟೀಲ, ರವಿ ಭಂಟನಳ್ಳಿ ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ