
ಬೆಂಗಳೂರು(ನ. 23) ಮತ್ತೆ ರಾಜ್ಯ ಸಚಿವ ಸಂಪುಟ ಪುನಾರಚನೆ ವಿಚಾರ ಚರ್ಚೆಗೆ ಬಂದಿದೆ. ಇದಕ್ಕೆ ಕಾರಣ ಬಿ ಎಲ್ ಸಂತೋಷ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಿಎಂ ಮನೆಗೆ ಭೇಟಿ ನೀಡಿದ್ದು ಅಂತಿಮ ಚಿತ್ರಣ ಸಿಕ್ಕಿದೆ ಎನ್ನಲಾಗಿದೆ.
ಸಂಪುಟ ಪುನಾರಚನೆಗೆ ಸಿಕ್ತಾ ಹೈಕಮಾಂಡ್ ನಿಂದ ಗ್ರೀನ್ ಸಿಗ್ನಲ್..? ಪುನಾರಚನೆ ಮಾಡುವಂತೆ ಬಿ ಎಲ್ ಸಂತೋಷ್ ಸಿಎಂ ಗೆ ತಿಳಿಸಿದ್ರಾ.. ಇದೀಗ ಸಂಪುಟ ಪುನಾರಚನೆ ಗೆ ಮುಂದಾದ್ರಾ ಸಿಎಂ ಬಿಎಸ್ವೈ..? ಎನ್ನುವಂತಹ ಪ್ರಶ್ನೆ ಮೂಡಿದೆ.
HDK ಮಾತಿಗೆ ದನಿಗೂಡಿಸಿದ ಎಂದ ಡಿಸಿಎಂ ಅಶ್ವತ್ ನಾರಾಯಣ್!
ಸಿಎಂ ಕಡೆಯಿಂದ ಎಷ್ಟು ಜನರನ್ನು ಸೇರಿಸಿಕೊಳ್ಳಬೇಕು, ಪಕ್ಷದಿಂದ ಯಾರನ್ನು ಸೇರಿಸಿಕೊಳ್ಳಬೇಕು, ಹಾಲಿ ಸಂಪುಟದಿಂದ ಯಾರನ್ನು ಕೈ ಬಿಡಬೇಕು ಎಂಬುದರ ಬಗ್ಗೆ ಚರ್ಚೆಯಾಗಲಿದೆ. ಸಿಎಂ ಜೊತೆಗಿನ ನಳೀನ್ ಕುಮಾರ್ ಕಟೀಲ್ ಭೇಟಿ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ. ಇದೇ ಗುರುವಾರ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಸಾಧ್ಯತೆ ಇದೆ ಎನ್ನಲಾಗಿದೆ.
ಸಂಪುಟ ವಿಸ್ತರಣೆ ಚರ್ಚೆ ಕುರಿತು ಕಳೆದೆರಡು ದಿನಗಳ ಹಿಂದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗಿ ಬಂದ ಸಿಎಂ ಬಿಎಸ್ವೈ ಈ ಕುರಿತು ಮೌನವಹಿಸಿದ್ದಾರೆ. ಈ ಕುರಿತು ಯಾವುದೇ ಹೇಳಿಕೆಯನ್ನು ಹೈ ಕಮಾಂಡ್ ಆಗಲಿ ನೀಡಿಲ್ಲ. ಈಗ ಬಿಎಲ್ ಸಂತೋಷ್ ಮೂಲಕ ಹೈ ಕಮಾಂಡ್ ಸುದ್ದಿ ಮುಟ್ಟಿಸಿದ್ದಾರೆ. ಇದೇ ಕಾರಣಕ್ಕೆ ಈ ಭೇಟಿಗಳು ಮಹತ್ವ ಪಡೆದುಕೊಂಡಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.