ಇಂದು ನೂತನ ಸಚಿವರಿಗೆ ಖಾತೆ ಹಂಚಿಕೆ?

Published : Aug 06, 2021, 07:08 AM IST
ಇಂದು ನೂತನ ಸಚಿವರಿಗೆ ಖಾತೆ ಹಂಚಿಕೆ?

ಸಾರಾಂಶ

 ನೂತನ ಸಚಿವರಿಗೆ ಶುಕ್ರವಾರ ಖಾತೆಗಳ ಹಂಚಿಕೆಯಾಗುವ ಸಂಭವವಿದೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಸುಳಿವು

ಬೆಂಗಳೂರು (ಆ.06): ನೂತನ ಸಚಿವರಿಗೆ ಇಂದು ಖಾತೆಗಳ ಹಂಚಿಕೆಯಾಗುವ ಸಂಭವವಿದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಸುಳಿವು ನೀಡಿದ್ದು, ಖಾತೆ ಹಂಚಿಕೆ ಶುಕ್ರವಾರ ಪೂರ್ಣಗೊಳ್ಳಲಿದೆ ಎಂದು ಗುರುವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ್ದಾರೆ. 

ಹಿಂದಿನ ಯಡಿಯೂರಪ್ಪ ಸಂಪುಟದ ಬಹುತೇಕ ಸಚಿವರೇ ಈ ಸಂಪುಟದಲ್ಲೂ ಇರುವುದರಿಂದ ಖಾತೆಗಳಲ್ಲೂ ಹೆಚ್ಚಿನ ಬದಲಾವಣೆ ಇರುವುದಿಲ್ಲ ಎನ್ನಲಾಗುತ್ತಿದೆ.

ಪಕ್ಷ ಮಾಡುತ್ತಿರುವ ದೊಡ್ಡ ಅವಮಾನ: ಸ್ವಪಕ್ಷದ ವಿರುದ್ಧ ಬಿಜೆಪಿ ಶಾಸಕಿ ಅಸಮಾಧಾನ

ನಾಯಕರೊಂದಿಗೆ ಸಮಾಲೋಚನೆ ನಡೆಸಿದ ಸಿಎಂ  ಖಾತೆ ಹಂಚಿಕೆ ಪ್ರಕ್ರಿಯೆ ಬಗ್ಗೆ ದೂರವಾಣಿ ಮೂಲ ಚರ್ಚೆ ನಡೆಸಿದ್ದಾರೆನ್ನಲಾಗಿದೆ. 

ಯಡಿಯೂರಪ್ಪ ಸಂಪುಟದ ಬಹುತೇಕ ಸಚಿವರೇ ಬೊಮ್ಮಾಯಿ ಸಂಪುಟದಲ್ಲೂ ಮುಂದುವರಿದಿದ್ದು ಹೆಚ್ಚಿನ ಬದಲಾವನೆ ಆಗುವುದಿಲ್ಲ ಎನ್ನಲಾಗಿದೆ. 

ಈಶ್ವರಪ್ಪ, ಸೋಮಣ್ಣ,  ಅಶೋಕ್ ಶ್ರೀರಾಮುಲು ಸೇರಿದಂತೆ ಹಲವರ  ಖಾತೆಗಳಲ್ಲಿ  ಅಲ್ಪ ಬದಲಾವಣೆ ಆಗುವ ಸಾಧ್ಯತೆ ಇದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಲ್ಲಿಂದ ಎಲ್ಲಿಗೆ ಲಿಂಕ್? 'ಕೇಸರಿ ಬಣ್ಣ'ದ ಉಡುಪು ಧರಿಸಿದ್ದಕ್ಕೆ ವಿಚಿತ್ರ ಪ್ರಶ್ನೆ, 'ಕಣ್ಸನ್ನೆ' ಬೆಡಗಿಯ ಸಖತ್ ರಿಪ್ಲೈ ವೈರಲ್!
Politics: ಅದಲು ಬದಲಾಗುತ್ತಾ ಡಿಕೆ ಸಂಪುಟ? ಇವರೇನಾ ಹೊಸ ಸಚಿವರು; ಯಾರು ಇನ್‌ ಯಾರು ಔಟ್; ಬಂಡಾಯ ಶಮನಕ್ಕೆ ಬಂಡೆ ರಣತಂತ್ರ!