ಖಾತೆ ಹಂಚಿಕೆ ಬಳಿಕ ಜಗಳ, ರಾಜ್ಯದಲ್ಲಿ ಶೀಘ್ರದಲ್ಲೇ ಮತ್ತೆ ಚುನಾವಣೆ?

Published : Feb 09, 2020, 08:05 AM ISTUpdated : Feb 09, 2020, 08:59 AM IST
ಖಾತೆ ಹಂಚಿಕೆ ಬಳಿಕ ಜಗಳ, ರಾಜ್ಯದಲ್ಲಿ ಶೀಘ್ರದಲ್ಲೇ ಮತ್ತೆ ಚುನಾವಣೆ?

ಸಾರಾಂಶ

‘ಶೀಘ್ರದಲ್ಲೇ ಚುನಾವಣೆ ಬಂದರೂ ಅಚ್ಚರಿಯಿಲ್ಲ’ | ಖಾತೆ ಹಂಚಿಕೆ ಬಳಿಕ ಜಗಳ ಜೋರಾಗಲಿದೆ

ಹುಬ್ಬಳ್ಳಿ[ಫೆ.09]: ರಾಜ್ಯದಲ್ಲಿನ ಬಿಜೆಪಿ ಸರ್ಕಾರ ಸ್ಥಿರವಾಗಿಲ್ಲ. ಯಾವಾಗ ಬೇಕಾದರೂ ಚುನಾವಣೆ ಬರಬಹುದು. ಶೀಘ್ರದಲ್ಲೇ ವಿಧಾನಸಭೆ ಚುನಾವಣೆ ಬಂದರೂ ಆಶ್ಚರ್ಯವಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಭವಿಷ್ಯ ನುಡಿದಿದ್ದಾರೆ.

ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರದಲ್ಲಿ ಸಾಕಷ್ಟುಗೊಂದಲಗಳಿವೆ. ಬಹಳ ದಿನಗಳ ನಂತರ ಸಚಿವ ಸಂಪುಟ ವಿಸ್ತರಣೆಯಾಗಿದೆ. ಈಗಾಗಲೇ ಜಗಳ ಶುರುವಾಗಿದೆ. ಖಾತೆ ಹಂಚಿಕೆ ನಂತರ ಇದು ಇನ್ನಷ್ಟುಜೋರಾಗಲಿದೆ ಎಂದರು.

ತಮ್ಮ ಬೇಡಿಕೆಯನ್ನೂ ಮುಂದಿಟ್ಟರು ST ಸೋಮಶೇಖರ್

ಬಿಜೆಪಿಯಲ್ಲಿನ ಹಿರಿಯರಿಗೂ ಸಚಿವ ಸ್ಥಾನ ಕೊಟ್ಟಿಲ್ಲ. ಆ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಯಾವ ರೀತಿ ನಿಭಾಯಿಸುತ್ತಾರೆ ಎಂಬುದನ್ನು ಕಾಯ್ದು ನೋಡುತ್ತೇವೆ. ರಾಜ್ಯದಲ್ಲಿ ಸರ್ಕಾರ ಪತನವಾದರೆ ಚುನಾವಣೆಗೆ ಹೋಗಲು ಸಿದ್ಧರಾಗಬೇಕಿದೆ ಎಂದರು.

ಕೆಪಿಸಿಸಿ ಅಧ್ಯಕ್ಷರ ನೇಮಕ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಶೀಘ್ರದಲ್ಲೇ ಕೆಪಿಸಿಸಿ ಅಧ್ಯಕ್ಷರ ಆಯ್ಕೆಯಾಗಲಿದೆ. ಒಂದು ವಾರ ಅಥವಾ ಹದಿನೈದು ದಿನಗಳಲ್ಲಿ ಎಲ್ಲವೂ ಬಗೆಹರಿಯಲಿದೆ. ಕಾಂಗ್ರೆಸ್‌ನಲ್ಲಿ ಮೂಲ ಹಾಗೂ ವಲಸಿಗ ಎಂಬ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್‌ ಸೇರಿದ ಎಲ್ಲರೂ ಕಾಂಗ್ರೆಸ್ಸಿಗರೇ. ಪಕ್ಷ ಸಂಘಟನೆ ಹಾಗೂ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಕೆಪಿಸಿಸಿ ಅಧ್ಯಕ್ಷರ ಆಯ್ಕೆ ನಡೆಯಲಿದೆ ಎಂದರು.

'ಸಿಎಂ ಯಡಿಯೂರಪ್ಪ ನನಗೆ ಒಳ್ಳೆಯ ಸ್ಥಾನ ಕೊಟ್ಟೇ ಕೊಡ್ತಾರೆ'

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ