ಮುಂದೆ ತಮಿಳು ನಾಯಕನಿಗೆ ಪ್ರಧಾನಿ ಹುದ್ದೆ: ಅಮಿತ್‌ ಶಾ

Published : Jun 12, 2023, 08:31 AM IST
ಮುಂದೆ ತಮಿಳು ನಾಯಕನಿಗೆ ಪ್ರಧಾನಿ ಹುದ್ದೆ: ಅಮಿತ್‌ ಶಾ

ಸಾರಾಂಶ

ಈ ಹಿಂದೆಯೂ ತಮಿಳರು ಪ್ರಧಾನಿಯಾಗುವ ಅವಕಾಶ ಎರಡು ಬಾರಿ ಬಂದಿತ್ತು. ಆದರೆ ಡಿಎಂಕೆಯಿಂದಾಗಿ ಈ ಅವಕಾಶ ಕೈತಪ್ಪಿತು ಎಂದು ಎಂದು ಶಾ ದೂರಿದರು ಎನ್ನಲಾಗಿದೆ. ಜೊತೆಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಕನಿಷ್ಠ 20 ಸ್ಥಾನ ಗೆಲ್ಲಲು ಪ್ರಯತ್ನಿಸಬೇಕು ಎಂದು ಕರೆ ನೀಡಿದರು ಎನ್ನಲಾಗಿದೆ.

ಚೆನ್ನೈ(ಜೂ.12): ಮುಂಬರುವ ದಿನಗಳಲ್ಲಿ ತಮಿಳುನಾಡಿನ ನಾಯಕರೊಬ್ಬರನ್ನು ದೇಶದ ಪ್ರಧಾನಿ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ, ಹಿರಿಯ ಬಿಜೆಪಿ ನಾಯಕ ಅಮಿತ್‌ ಶಾ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವ ಹೊತ್ತಿನಲ್ಲೇ ವ್ಯಕ್ತವಾದ ಈ ಹೇಳಿಕೆ ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ತಮಿಳುನಾಡು ಪ್ರವಾಸ ಕೈಗೊಂಡಿರುವ ಅಮಿತ್‌ ಶಾ, ಭಾನುವಾರ ರಾಜ್ಯ ಬಿಜೆಪಿಯ ಹಿರಿಯ ನಾಯಕರೊಂದಿಗೆ ಆಪ್ತ ಸಮಾಲೋಚನಾ ಸಭೆ ನಡೆಸಿದ್ದಾರೆ. ಈ ವೇಳೆ ಅವರು ಮುಂಬರುವ ದಿನಗಳಲ್ಲಿ ತಮಿಳರೊಬ್ಬರು ಈ ದೇಶದ ಪ್ರಧಾನಿಯಾಗಲಿದ್ದಾರೆ ಎನ್ನುವ ರೀತಿಯ ಮಾತುಗಳನ್ನು ಆಡಿದರು ಎಂದು ಸಭೆಯಲ್ಲಿ ಭಾಗಿಯಾಗಿದ್ದ ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ. ಆದರೆ ಈ ಕುರಿತು ಅಮಿತ್‌ ಶಾ ಹೆಚ್ಚಿನ ವಿವರ ನೀಡಲಿಲ್ಲ ಎಂದೂ ಹೇಳಿದ್ದಾರೆ.

ಶರದ್‌ ಪವಾರ್‌ಗೆ ಬಿಜೆಪಿ ಕಾರ್ಯಕರ್ತನಿಂದ್ಲೇ ಜೀವ ಬೆದರಿಕೆ: ಅಜಿತ್ ಪವಾರ್ ಸ್ಫೋಟಕ ಹೇಳಿಕೆ

ಈ ಹಿಂದೆಯೂ ತಮಿಳರು ಪ್ರಧಾನಿಯಾಗುವ ಅವಕಾಶ ಎರಡು ಬಾರಿ ಬಂದಿತ್ತು. ಆದರೆ ಡಿಎಂಕೆಯಿಂದಾಗಿ ಈ ಅವಕಾಶ ಕೈತಪ್ಪಿತು ಎಂದು ಎಂದು ಶಾ ದೂರಿದರು ಎನ್ನಲಾಗಿದೆ. ಜೊತೆಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಕನಿಷ್ಠ 20 ಸ್ಥಾನ ಗೆಲ್ಲಲು ಪ್ರಯತ್ನಿಸಬೇಕು ಎಂದು ಕರೆ ನೀಡಿದರು ಎನ್ನಲಾಗಿದೆ.

ತಮಿಳ್ನಾಡಲ್ಲಿ ಬಿಜೆಪಿ 20 ಸೀಟು ಗೆಲ್ಲಬೇಕು

ಈ ಹಿಂದೆಯೂ ತಮಿಳರು ಪ್ರಧಾನಿಯಾಗುವ ಅವಕಾಶ ಎರಡು ಬಾರಿ ಬಂದಿತ್ತು. ಆದರೆ ಡಿಎಂಕೆಯಿಂದಾಗಿ ಈ ಅವಕಾಶ ಕೈತಪ್ಪಿತು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತಮಿಳುನಾಡಿನಲ್ಲಿ ಕನಿಷ್ಠ 20 ಸ್ಥಾನ ಗೆಲ್ಲಲು ಪ್ರಯತ್ನಿಸಬೇಕು ಅಂತ ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Karnataka News Live: ಅಧಿವೇಶನಕ್ಕೂ ಮೊದಲೇ ಬ್ರದರ್ಸ್ ಒಗ್ಗಟ್ಟು: ಬಿಜೆಪಿ ಮೇಲೆ ಸವಾರಿ ಮಾಡಲು ಕಾಂಗ್ರೆಸ್ ಸಜ್ಜು
ಅಧಿವೇಶನ ವೇಳೆ ಹಳೆಯ ಬೇಡಿಕೆಗಳ ಹೊಸ ಕೂಗು!