ರಾಹುಲ್‌ ಕೋಲಾರ ಸಮಾವೇಶ ಮುಂದೂಡಿಕೆ

Published : Apr 01, 2023, 11:57 AM IST
ರಾಹುಲ್‌ ಕೋಲಾರ ಸಮಾವೇಶ ಮುಂದೂಡಿಕೆ

ಸಾರಾಂಶ

ಅಂದು ಸತ್ಯ ಮೇವ ಜಯತೆ ಹೋರಾಟಕ್ಕೆ ರಾಹುಲ್‌ ಚಾಲನೆ, ಬೆಂಗಳೂರಿನಲ್ಲಿ ಭಾರತ್‌ ಜೋಡೋ ಭವನ ಉದ್ಘಾಟನೆ, ರಾಜ್ಯ ಕಾಂಗ್ರೆಸ್‌ ಕಚೇರಿ ಇನ್ನು ಭಾರತ್‌ ಜೋಡೋ ಭವನ. 

ಬೆಂಗಳೂರು(ಏ.01): ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಏ.5 ರಂದು ಕೋಲಾರದಿಂದ ಶುರುವಾಗಬೇಕಿದ್ದ ಸತ್ಯ ಮೇವ ಜಯತೆ ಹೋರಾಟದ ಚಾಲನಾ ಸಮಾವೇಶ ಏ.9ಕ್ಕೆ ಮುಂದೂಡಿಕೆಯಾಗಿದೆ.

ರಾಹುಲ್‌ ಗಾಂಧಿ ಅವರು ಕೋಲಾರದಲ್ಲಿ ನೀರವ್‌ ಮೋದಿ ಹಾಗೂ ಲಲಿತ್‌ ಮೋದಿಯ ಕಳ್ಳತನ, ಅವರನ್ನು ಬೆಂಬಲಿಸಿದ್ದ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದರು. ಇದಕ್ಕಾಗಿ ಅವರಿಗೆ ಅನ್ಯಾಯವಾಗಿ ಶಿಕ್ಷೆ ವಿಧಿಸಿದ್ದಾರೆ. ಜತೆಗೆ ಕಾನೂನು ಬಾಹಿರವಾಗಿ ಸಂಸತ್‌ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿದ್ದಾರೆ. ಹೀಗಾಗಿ ಏಪ್ರಿಲ್‌ 9ರಂದು ರಾಹುಲ್‌ ಗಾಂಧಿ ಅವರು ಕೋಲಾರಕ್ಕೆ ಬಂದು ಗಾಂಧೀಜಿ ಅವರ ಮೂಲ ಮಂತ್ರವಾದ ‘ಸತ್ಯ ಮೇವ ಜಯತೆ’ ಹೋರಾಟ ಆರಂಭಿಸಲಿದ್ದಾರೆ ಎಂದು ಕಾಂಗ್ರೆಸ್‌ ನಾಯಕರು ಹೇಳುತ್ತಾರೆ. ದೇಶದ ಉದ್ದಗಲಕ್ಕೂ ನಡೆಯುವ ಈ ಹೋರಾಟವನ್ನು ಕೋಲಾರದಿಂದ ಶುರು ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಶಿಕ್ಷೆ ಪ್ರಶ್ನಿಸಲು ರಾಹುಲ್‌ ಗಾಂಧಿ ರೆಡಿ: ಮೋದಿ ಉಪನಾಮ ಟೀಕೆ ಕೇಸಲ್ಲಿ ಪುನರ್‌ಪರಿಶೀಲನಾ ಅರ್ಜಿ ಸಲ್ಲಿಸಲು ಸಿದ್ಧತೆ

ಈ ನಡುವೆ ಏ.9ರಂದು ನಡೆಯಬೇಕಿರುವ ರಾಹುಲ್‌ ಗಾಂಧಿ ಸಮಾವೇಶದ ಸಿದ್ಧತೆ ಪರಿಶೀಲನೆ ನಡೆಸಲು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೆವಾಲಾ ಸೇರಿದಂತೆ ಹಲವು ನಾಯಕರು ಕೋಲಾರಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಭಾರತ್‌ ಜೋಡೋ ಭವನ ಉದ್ಘಾಟನೆ:

ರಾಜ್ಯ ಕಾಂಗ್ರೆಸ್‌ ಪಕ್ಷವು ಕ್ವೀನ್ಸ್‌ ರಸ್ತೆಯಲ್ಲಿ 20 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಿರುವ ಕಾಂಗ್ರೆಸ್‌ ನೂತನ ಕಚೇರಿಯನ್ನೂ ಏ.9 ರಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಉದ್ಘಾಟಿಸಲಿದ್ದಾರೆ. ನೂತನ ಕಾಂಗ್ರೆಸ್‌ ಕಚೇರಿಗೆ ‘ಭಾರತ್‌ ಜೋಡೋ ಭವನ’ ಎಂದು ಹೆಸರಿಡಲಾಗಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ
ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ