ಸೋನಿಯಾ ಗಾಂಧಿ ಬೇಕಿದ್ರೆ ಬಿಜೆಪಿಗೆ ಬರ್ತಾರೆ, ಹುಕ್ಕೇರಿ ಬರಲ್ಲ ಎಂದ ಬಿಜೆಪಿ ನಾಯಕ

Published : Nov 25, 2020, 07:36 PM IST
ಸೋನಿಯಾ ಗಾಂಧಿ ಬೇಕಿದ್ರೆ ಬಿಜೆಪಿಗೆ ಬರ್ತಾರೆ, ಹುಕ್ಕೇರಿ ಬರಲ್ಲ ಎಂದ ಬಿಜೆಪಿ ನಾಯಕ

ಸಾರಾಂಶ

ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾಗಿರುವ ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ರಾಜಕೀಯ ಗರಿಗೆದರಿದೆ.

ಬೆಂಗಳೂರು, (ನ. 25): ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ಅವರು ಬೆಂಗಳೂರಿನಲ್ಲಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ್ದು, ಭಾರೀ ಕುತೂಹಲ ಮೂಡಿಸಿದೆ.

ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾವ ರಾಜಕೀಯ ವಿಷಯಗಳ ಬಗ್ಗೆಯೂ ಅವರ ಜೊತೆ ಚರ್ಚೆ ಮಾಡಿಲ್ಲ. ಬೆಳಗಾವಿ ಜಿಲ್ಲೆಯ ನೀರಾವರಿ ಕಾಮಗಾರಿಗಳ ಬಗ್ಗೆ ಚರ್ಚಿಸಲು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ್ದೆ ಎಂಬ ಸ್ಪಷ್ಟಪಡಿಸಿದರು.

ಅವರಿಗೆ ಸಚಿವ ಸ್ಥಾನ ನೀಡುವವರೆಗೂ ಹೋರಾಟ: ರಮೇಶ್ ಜಾರಕಿಹೊಳಿ ಬಹಿರಂಗ ಹೇಳಿಕೆ

ಕಾಂಗ್ರೆಸ್ ನಾಯಕ ಪ್ರಕಾಶ್ ಹುಕ್ಕೇರಿ ಬಿಜೆಪಿಗೆ ಬರುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿ ಪ್ರಭಾಕರ್ ಕೋರೆ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬೇಕಿದ್ದರೆ ಬಿಜೆಪಿಗೆ ಬರುತ್ತಾರೆ. ಆದರೆ ಪ್ರಕಾಶ್ ಹುಕ್ಕೇರಿ ಅವರು ಮಾತ್ರ ಎಂದಿಗೂ ಬಿಜೆಪಿಗೆ ಬರೋದಿಲ್ಲ ಎಂದರು. 

ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ನಾನೇನು ಈಗ ರಾಜಕೀಯದಿಂದ ನಿವೃತ್ತಿಯಾಗಿಲ್ಲ. ಪಕ್ಷ ಹೇಳಿದರೆ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಪರೋಕ್ಷವಾಗಿ ಟಿಕೆಟ್ ಎನ್ನುವುದನ್ನು ಹೇಳಿದರು.

ಇನ್ನು ರಮೇಶ್ ಜಾರಕಿಹೊಳಿ ಅವರ ಪುತ್ರ ಬೆಳಗಾವಿ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ವಿಷಯ ನನಗೆ ಗೊತ್ತಿಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ
ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ