
ಶಿರಸಿ (ಜು.17): ವೀರ ಸಾವರ್ಕರ್ ಸೇರಿದಂತೆ ದೇಶಭಕ್ತರ ಪಾಠವನ್ನು ಪಠ್ಯದಿಂದ ಹೊರಹಾಕಿರುವುದು ಕಾಂಗ್ರೆಸ್ನ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು. ನಗರದ ಲಿಂಗದಕೋಣ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾನುವಾರ ಭಾಗಿಯಾದ ಬಳಿಕ ಮಾಧ್ಯಮದೊಂದಿಗೆ ಅವರು ಮಾತನಾಡಿದರು. ಸಾವರ್ಕರ್ ಒಬ್ಬ ಶ್ರೇಷ್ಠ ಹೋರಾಟಗಾರರಾಗಿದ್ದು, ಅಂಡಮಾನ್ ಜೈಲಿನಲ್ಲಿ 23 ವರ್ಷ ಇದ್ದರು. ಗಾಂಧೀಜಿ, ನೆಹರು ಅಥವಾ ಕಾಂಗ್ರೆಸ್ನ ಒಬ್ಬರೇ ಒಬ್ಬರು ಕೂಡ ಅಂಡಮಾನ್ ಜೈಲಿಗೆ ಹೋಗಿಲ್ಲ.
ಜೈಲು ಎಂದರೆ ಕಾಂಗ್ರೆಸಿಗರಿಗೆ ರೆಸಾರ್ಟ್ ಆಗಿತ್ತು. ಜೈಲಿನಲ್ಲಿ ಕಠಿಣ ಶಿಕ್ಷೆ ಅನುಭವಿಸಿದ ಸಾವರ್ಕರ್ ಬಗ್ಗೆ ಅವಹೇಳನಕಾರಿ, ಅಸಹ್ಯವಾಗಿ ಮಾತನಾಡುವುದನ್ನು ಬಿಟ್ಟು ನಾಲಿಗೆ ಬಿಗಿಹಿಡಿದು ಮಾತನಾಡಲಿ ಎಂದು ಎಚ್ಚರಿಸಿದರು. ಬಿಜೆಪಿ ಹಿಂದುತ್ವವನ್ನು ಕಡೆಗಣಿಸುತ್ತಿದೆ. ಕಾರ್ಯಕರ್ತರನ್ನು ಅಲಕ್ಷ್ಯ ಮಾಡುತ್ತಿದೆ. ತಮ್ಮ ಸ್ವಾರ್ಥ ಹಾಗೂ ಭ್ರಷ್ಟಾಚಾರ ತುಂಬಿ ತುಳುಕಿದ ವಾತಾವರಣ ಮತ್ತು ಹಿಂದುತ್ವ ಕಡೆಗಣಿಸಿದ ಪರಿಣಾಮದಿಂದ ಇವತ್ತು ದೊಡ್ಡ ಪ್ರಮಾಣದಲ್ಲಿ ಹಿಂದೂಗಳಿಗೆ ಮತ್ತು ಬಿಜೆಪಿ ಪ್ರಮುಖರಲ್ಲಿ ವ್ಯತ್ಯಾಸ ಉಂಟಾಗಿದೆ.
ನಿಂತು ನಿಂತು ಓಡುತ್ತಿರುವ ಮಂಡ್ಯದ ಮೈ ಶುಗರ್: ನುರಿತ ತಜ್ಞರಿಲ್ಲದೇ ಪದೇ ಪದೇ ತಾಂತ್ರಿಕ ಸಮಸ್ಯೆ
ಈ ವ್ಯತ್ಯಾಸ ಹೋಗಬೇಕಾದರೆ ತಮ್ಮ ತಪ್ಪನ್ನು ಒಪ್ಪಿಕೊಂಡು ಹಿಂದೂ ಸಂಘಟನೆಗಳಿಗೆ ಬಲ ತುಂಬುವ ಕೆಲಸ ಮಾಡಿದರೆ ಮಾತ್ರ ಮತ್ತೆ ಕರ್ನಾಟಕದಲ್ಲಿ ಬಿಜೆಪಿ ಏನಾದರೂ ಉಸಿರು ಬಿಡಬಹುದು. ಇಲ್ಲವಾದರೆ ಇನ್ನೂ ಧೂಳಿಪಟವಾಗಲಿದೆ ಎಂದರು. ನಮಗೆ ಮೋದಿ ಬೇಕು. ದೇಶದ ಸುರಕ್ಷತೆಯ ರಕ್ಷಣೆಗೋಸ್ಕರ ಮೋದಿ ಬೇಕು. ಇಡೀ ಕರ್ನಾಟಕದಲ್ಲಿ ಲೋಕಸಭೆಯ 28ಕ್ಕೆ 28 ಸ್ಥಾನ ಮೋದಿ ಕೈ ಬಲಪಡಿಸುವವರು ಬರಬೇಕು. ಈ ಸಂಬಂಧ ಶ್ರೀರಾಮ ಸೇನೆ ಸಂಘಟನೆ ಮೋದಿ ಗೆಲ್ಲಿಸಿ ದೇಶ ಉಳಿಸಿ ಎಂದು ದೊಡ್ಡ ಅಭಿಯಾನ ಕೈಗೊಳ್ಳುತ್ತಿದೆ ಎಂದರು.
ಏಕರೂಪ ನಾಗರಿಕ ಸಂಹಿತೆ ಕಾನೂನು ಜಾರಿ ಮಾಡದಿರಲು ಕಾರಣ ಕಾಂಗ್ರೆಸ್ನ ಮುಸ್ಲಿಂ ತುಷ್ಟೀಕರಣ ಕಾರಣವಾಗಿದೆ. ಏಕರೂಪ ನಾಗರಿಕ ಸಂಹಿತೆ ಕಾನೂನು ಚರ್ಚೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅಭಿಪ್ರಾಯ ತಿಳಿಸುವಂತೆ ಆಹ್ವಾನ ನೀಡಿದೆ. ಈ ಕಾನೂನು ಜಾರಿಗೆ 50 ಲಕ್ಷ ಜನರು ಬೆಂಬಲಿಸಿದ್ದಾರೆ. ಜಾರಿಯಾಗಬೇಕೆಂಬ ಆಗ್ರಹ ದೇಶದಲ್ಲಿದೆ. ಅದಕ್ಕೆ ಪೂರಕವಾಗಿ ಶ್ರೀರಾಮ ಸೇನೆ ಸಂಘಟನೆ 5 ಲಕ್ಷ ನಾಗರಿಕರ ಸಹಿ ಅಭಿಯಾನ ಮಾಡಿ ಪ್ರಧಾನಮಂತ್ರಿ ಅವರಿಗೆ ಕಳುಹಿಸುತ್ತೇವೆ. ಬರಿ ಮುಸ್ಲಿಂ ಮಹಿಳೆಯರಿಗೆ ಸಂಬಂಧಪಟ್ಟಷರಿಯಾ ಬಗ್ಗೆ ಮಾತನಾಡುತ್ತಾರೆ. ಷರಿಯಾದಲ್ಲಿ ಇನ್ನೊಂದು ಕಾನೂನು ಇದೆ.
ಬಿಜೆಪಿಯಿಂದ ಮತ್ತೆ ಕೋಮುಗಲಭೆ ಸೃಷ್ಟಿ: ಸಚಿವ ಈಶ್ವರ ಖಂಡ್ರೆ
ಯಾರು ಕಳ್ಳತನ, ದರೋಡೆ ಮಾಡುತ್ತಾರೆಯೋ ಅವರ ಕೈ ಕತ್ತರಿಸಬೇಕು ಎಂದಿದೆ. ಅದನ್ನು ಇಲ್ಲಿಯ ಮುಸ್ಲಿಮರು ಒಪ್ಪಿಕೊಳ್ಳುತ್ತಾರೆಯೇ ಎಂದು ಪ್ರಶ್ನಿಸಿದರು. ಹೆಗಡೆಕಟ್ಟಾದಲ್ಲಿ ಗೋವಿನ ತಲೆ ಸಿಕ್ಕಿದಾಗ ಹಿಂದೂ ಸಂಘಟನೆಯು ವಿರೋಧ ವ್ಯಕ್ತಪಡಿಸಿದರೂ, ಪೊಲೀಸ್ ಇಲಾಖೆಯಾಗಲಿ ಈ ಸಂಬಂಧ ಕ್ರಮ ಕೈಗೊಂಡು ಸಂಬಂಧಪಟ್ಟವ್ಯಕ್ತಿ ಬಂಧನವಾಗದಿರುವುದನ್ನು ಖಂಡಿಸುತ್ತೇನೆ. ಸ್ಥಳೀಯ ಶಾಸಕರು ಆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕಿತ್ತು. ಪೊಲೀಸ್ ಇಲಾಖೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಹೆಗಡೆಕಟ್ಟಾಚಲೋಗೆ ಕರೆ ನೀಡುತ್ತೇನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.