ಸರ್ಕಾರದ ಖಜಾನೆ ತುಂಬಿಸಿಕೊಳ್ಳಲು ಬೆಲೆ ಏರಿಕೆ ಅಸ್ತ್ರ: ಎಂಟಿಬಿ ನಾಗರಾಜ್ ವಾಗ್ದಾಳಿ

Published : Apr 04, 2025, 10:13 PM ISTUpdated : Apr 04, 2025, 10:48 PM IST
ಸರ್ಕಾರದ ಖಜಾನೆ ತುಂಬಿಸಿಕೊಳ್ಳಲು ಬೆಲೆ ಏರಿಕೆ ಅಸ್ತ್ರ: ಎಂಟಿಬಿ ನಾಗರಾಜ್ ವಾಗ್ದಾಳಿ

ಸಾರಾಂಶ

ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರದ ಗದ್ದುಗೆಗಾಗಿ ಅವ್ಶೆಜ್ಞಾನಿಕವಾಗಿ ಪಂಚ ಗ್ಯಾರಂಟಿಗಳನ್ನು ಕೊಟ್ಟು ಈಗ ಅಗತ್ಯ ವಸ್ತುಗಳ ಬೆಲೆ ಏರಿಸಿ ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ ಮಾಡಿದೆ ಎಂದು ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿಗೆ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ವಾಗ್ದಾಳಿ ಮಾಡಿದರು. 

ಹೊಸಕೋಟೆ (ಏ.04): ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರದ ಗದ್ದುಗೆಗಾಗಿ ಅವ್ಶೆಜ್ಞಾನಿಕವಾಗಿ ಪಂಚ ಗ್ಯಾರಂಟಿಗಳನ್ನು ಕೊಟ್ಟು ಈಗ ಅಗತ್ಯ ವಸ್ತುಗಳ ಬೆಲೆ ಏರಿಸಿ ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ ಮಾಡಿದೆ ಎಂದು ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿಗೆ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ವಾಗ್ದಾಳಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಶತಾಯಗತಾಯ ರಾಜ್ಯದಲ್ಲಿ ಅಧಿಕಾರ ಮಾಡಬೇಕೆಂದು ಮನಸೋ ಇಚ್ಚೆ ಗ್ಯಾರಂಟಿ ಘೋಷಣೆ ಮಾಡಿ ಈಗ ಸರ್ಕಾರದ ಖಜಾನೆ ಖಾಲಿ ಮಾಡಿಕೊಂಡು ಖಜಾನೆ ತುಂಬಿಸಲು ಬೆಲೆ ಏರಿಕೆ ಅಸ್ತ್ರ ಪ್ರಯೋಗಿಸುತ್ತಿದ್ದಾರೆ. ಇದರಿಂದ ಜನರಿಗೆ ಒಂದು ಕೈಯಲ್ಲಿ 2 ರು. ಕೊಟ್ಟು, ಮತ್ತೊಂದು ಕೈಯಲ್ಲಿ 4 ರು. ಕಸಿದುಕೊಳ್ಳುವ ಕೆಲಸ ಮಾಡ್ತಿದೆ. ಪ್ರಮುಖವಾಗಿ ಮದ್ಯದಂಗಡಿಗಳನ್ನೆ ಆದಾಯದ ಮೂಲ ಮಾಡಿಕೊಂಡ ಕಾಂಗ್ರೆಸ್ ಸರ್ಕಾರ, ಎರಡು ವರ್ಷದಲ್ಲಿ ಮದ್ಯದ ಬೆಲೆ ನಾಲ್ಕು ಬಾರಿ ಹೆಚ್ಚಿಸಿದೆ. ಶೇ.45ರಷ್ಟು ಏರಿಕೆ ಮಾಡಿದ್ದಲ್ಲದೆ ನಾಯಿಕೊಡೆಗಳಂತೆ ಗಲ್ಲಿಗೊಂದು ಮಧ್ಯದಂಗಡಿಗೆ ಪರವಾನಗಿ ಕೊಟ್ಟು ಜನರನ್ನು ಕುಡಿತಕ್ಕೆ ದಾಸರನ್ನಾಗಿ ಮಾಡಿ ಜೀವನ ಹಾಳು ಮಾಡುವ ಕೆಲಸ ಮಾಡ್ತಿದೆ ಎಂದು ಆರೋಪಿಸಿದರು.

ಬೆಲೆಯೇರಿಕೆ ಬರೆ: ಕಳೆದ ಎರಡು ವರ್ಷದಲ್ಲಿ ಹೊಸಕೋಟೆ ತಾಲ್ಲೂಕಿನಲ್ಲಿ 20ಕ್ಕೂ ಹೆಚ್ಚು ಮದ್ಯದಂಗಡಿಗಳಿಗೆ ಪರವಾನಗಿ ನೀಡಿರುವ ಸರ್ಕಾರ, ಗೈಡೆನ್ಸ್ ವ್ಯಾಲ್ಯೂ ಶೇ.40, ಬಾಂಡ್ ಪೇಪರ್ ಅಪಿಡಿವಿಟ್ 20 ರಿಂದ 100ರೂ, ವಿದ್ಯುತ್ ದರ 2.89 ಪೈಸೆ ಹೆಚ್ಚಿಸಿ ಈಗ ಪುನಃ 36 ಪೈಸೆ ಹೆಚ್ಚಳ, ವಾಣಿಜ್ಯ ಬಳಕೆ ವಿದ್ಯುತ್‌ಗೆ 125 ರಿಂದ 140 ರು.ಗಳಿಗೆ ಏರಿಕೆ, ಸ್ಮಾರ್ಟ್ ಮೀಟರ್ ಬೆಲೆ ಪಕ್ಕದ ರಾಜ್ಯದಲ್ಲಿ 900 ರು. ಇದ್ದರೆ ನಮ್ಮ ರಾಜ್ಯದಲ್ಲಿ 8 ರಿಂದ 9 ಸಾವಿರಕ್ಕೆ ಹೆಚ್ಚಿಸಿದೆ. ಹಾಲು ಮೂರು ಬಾರಿ ೯ ರು. ಏರಿಕೆ, ಮೊಸರು 4 ರು. ಏರಿಕೆ, ವಾಹನ ತೆರಿಗೆ ಶೇ.10ರಷ್ಟು ಹೆಚ್ಚಳ, ಬಸ್ ಪ್ರಯಾಣ ದರ ಶೇ.15ರಷ್ಟು

ಕೆಪಿಸಿಸಿ ಅಧ್ಯಕ್ಷತೆಗೆ ಸತೀಶ್‌, ಖಂಡ್ರೆ ಹೆಸರು ಶಿಫಾರಸು ಮಾಡಿದ ಸಿಎಂ ಸಿದ್ದರಾಮಯ್ಯ?

ಹೆಚ್ಚಳ, ಪೆಟ್ರೋಲ್ ೩ ರು., ಡೀಸೆಲ್ ೪ ರು., ಮೆಟ್ರೋ ದರ ಶೇ ೫೦ರಷ್ಟು, ಕಸದ ಸೆಸ್ ಶೇ.10ರಷ್ಟು, ಸರ್ಕಾರಿ ಕಾಲೇಜು ಶುಲ್ಕ ಶೇ.10ರಷ್ಟು, ಲಿಪ್ಟ್ ಜನರೇಟರ್ ವಿದ್ಯುತ್ ಪರಿವರ್ತಕ ರಿನಿವಲ್ ಶುಲ್ಕ 5 ರಿಂದ 8 ಸಾವಿರಕ್ಕೆ ಏರಿಕೆ, ಶೇ.5ರಷ್ಟು ಟೋಲ್ ಶುಲ್ಕ, ದಿನ ನಿತ್ಯದ ಬಳಕೆಯ ಆಹಾರ ಮತ್ತು ದಿನಸಿ ಎಣ್ಣೆ ಅಡುಗೆ ಪದಾರ್ಥ, ಹಣ್ಣು, ತರಕಾರಿ ನಮ್ಮ ಕೈಗೆಟುಕದ ಬೆಲೆ ಏರಿಕೆ ಮಾಡಿ ಬರೆ ಎಳೆದಿದ್ದು, ಇದರ ನಡುವೆ ಸರ್ಕಾರ ಕೊಟ್ಟಿರುವ ಗ್ಯಾರಂಟಿಗಳನ್ನೆ ಸರಿಯಾಗಿ ಪಾವತಿಸುತ್ತಿಲ್ಲ. ಸಾರಿಗೆ ಸಂಸ್ಥೆಗೆ, ವಿದ್ಯುತ್ ಪೂರೈಕೆಗೆ ಸರಿಯಾಗಿ ಬಿಲ್ ಪಾವತಿಸಿಲ್ಲ, 10 ಕೆಜಿ ಅಕ್ಕಿಯೂ ವಿತರಣೆ ಯಾಗುತ್ತಿಲ್ಲ. ಆದರೂ ಕೂಡ ಬೆಲೆ ಏರಿಕೆ ಮಾಡಿದ ಹಣ ಏನಾಗುತ್ತಿದೆ ಎಂಬ ಪ್ರಶ್ನೆ ಅನುಮಾನ ಮೂಡಿಸುತ್ತಿದೆ ಎಂದರು.

ಎಸ್‌ಸಿಪಿ, ಟಿಎಸ್‌ಪಿ ಹಣ ದುರ್ಬಳಕೆ ಸಲ್ಲ: ಪರಿಶಿಷ್ಟ ಜಾತಿ, ಪಂಗಡ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ಕಾನೂನು ಬಾಹಿರವಾಗಿ ಗ್ಯಾರಂಟಿಗಳಿಗೆ ಬಳಸಿಕೊಂಡು ಸಂವಿಧದಾನ ಉಲ್ಲಂಘನೆ ಮಾಡಲಾಗಿದೆ. ಅಲ್ಲದೆ ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಮತ ಬ್ಯಾಂಕಿಗಾಗಿ ದಲಿತ, ಹಿಂದುಳಿದವರನ್ನು ಕಡೆಗಣಿಸಿ ಕೇವಲ ಮೀಸಲಾತಿ ನೀಡಿರುವ ಇತರೆ ಸಮುದಾಯಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇದಕ್ಕೆ ತಮ್ಮ ಕ್ಷೇತ್ರಗಳ ಆಭಿವೃದ್ದಿ ಆಗ್ತಿಲ್ಲ ಎಂದು ಕಾಂಗ್ರೆಸ್ ಶಾಸಕರಿಂದಲೇ ಆಕ್ರೋಶ ವ್ಯಕ್ತವಾಗಿದೆ ಎಂದು ಟೀಕಿಸಿದರು.

ಹಿಂದೂ ಹುಲಿಯನ್ನು ಬೋನಿಗೆ ಹಾಕಿದ ಅಪ್ಪ ಮಗ: ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪ

ರಾಜಿನಾಮೆ ಕೊಟ್ಟು ಚುನಾವಣೆಗೆ ಬನ್ನಿ ಭ್ರಷ್ಟಾಚಾರ, ಹನಿಟ್ರ್ಯಾಪ್ ಹಾಗೂ ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಗುದ್ದಾಟದಿಂದಾಗಿ ಸರ್ಕಾರಕ್ಕೆ ರಾಜ್ಯಾದ್ಯಂತ ವಿರೋಧಿ ಅಲೆ ಎದ್ದಿದೆ. ಜನರು ತಿರುಗಿ ಬೀಳುವ ಮುನ್ನ ರಾಜಿನಾಮೆ ಕೊಟ್ಟು ಚುನಾವಣೆಗೆ ಬನ್ನಿ, ಇಲ್ಲವಾದರೆ ಅವೈಜ್ಞಾನಿಕ ಗ್ಯಾರಂಟಿಗಳನ್ನು ನಿಲ್ಲಿಸಿ ರಾಜ್ಯದ ಅಭಿವೃದ್ಧಿಗೆ ಮುಂದಾಗಿ. ಸಿದ್ದರಾಮಯ್ಯ ಅವರು ಕಳೆದ ಬಾರಿ ಸಿಎಂ ಆಗಿ ಮಾಡಿದ ಅಭಿವೃದ್ಧಿ ಈಗ ಮಾಡ್ತಿಲ್ಲ. ನಾನೂ ಕೂಡ ಅವರ ಸಂಪುಟದಲ್ಲಿ ಮಂತ್ರಿಯಾಗಿ ಹತ್ತಿರದಿಂದ ನೋಡಿದ್ದೇನೆ. ಈಗ ಅವರು ಕೇವಲ ಕೈ ಕಟ್ಟಿ ಬಾಯಿ ಮುಚ್ಚಿ ಅಧಿಕಾರ ನಡೆಸುವಂತಾಗಿದೆ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Shirtless Protest: ಶರ್ಟ್ ಬಿಚ್ಚಿ ಪ್ರತಿಭಟನೆ: ಇದೊಂದು ನಾಚಿಕೆಗೇಡು, ಕಾಂಗ್ರೆಸ್ ವಿರುದ್ಧ ನಿರ್ಮಲಾ ಗರಂ
Keralam Rename: ಕೇರಳಕ್ಕೆ 'ಕೇರಳಂ' ಅಂತ ಗ್ರೀನ್ ಸಿಗ್ನಲ್, ಆದ್ರೆ ಬಂಗಾಳದ 'ಬಾಂಗ್ಲಾ' ಪ್ರಸ್ತಾಪಕ್ಕೆ ಯಾಕೆ ಬ್ರೇಕ್?