ಭತ್ತದ ಗದ್ದೆಯಲ್ಲಿ ಸಿಲುಕಿದ ಪ್ರಧಾನಿ ಮೋದಿ ಭದ್ರತಾ ಪಡೆಯ ಹೆಲಿಕಾಪ್ಟರ್: ಮೇಲೆತ್ತಲು ಪರದಾಟ!

Published : May 02, 2023, 05:58 PM IST
ಭತ್ತದ ಗದ್ದೆಯಲ್ಲಿ ಸಿಲುಕಿದ ಪ್ರಧಾನಿ ಮೋದಿ ಭದ್ರತಾ ಪಡೆಯ ಹೆಲಿಕಾಪ್ಟರ್: ಮೇಲೆತ್ತಲು ಪರದಾಟ!

ಸಾರಾಂಶ

 ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭದ್ರತಾ ಪಡೆಯ ಸೇನಾ ಹೆಲಿಕಾಪ್ಟರ್‌ ಸಿಂಧನೂರಿನ ಗದ್ದೆಯಲ್ಲಿ ಸಿಲುಕಿಕೊಂಡಿದೆ.

ರಾಯಚೂರು (ಮೇ 2): ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯ ಸಿಂಧನೂರಿಗೆ ಪ್ರಚಾರ ಕಾರ್ಯಕ್ರನಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭದ್ರತಾ ಸಿಬ್ಬಂದಿಯ ಸೇನಾ ಪಡೆಯ ಹೆಲಿಕಾಪ್ಟರ್‌ ಭತ್ತದ ಗದ್ದೆಯಲ್ಲಿ ಮಾಡಲಾಗಿದ್ದ ಹೆಲಿಪ್ಯಾಡ್‌ನಲ್ಲಿ ಸಿಕ್ಕಿಹಾಕಿಕೊಂಡಿದೆ.

ಕರ್ನಾಟಕದ ಭತ್ತದ ಕಣಜ ಎಂದು ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪ್ರಚಾರಕ್ಕೆ ಬೃಹತ್‌ ವೇದಿಕೆಯನ್ನು ಸಿದ್ಧಪಡಿಸಲಾಗಿತ್ತು. ಈ ವೇಳೆ ಕಾರ್ಯಕ್ರಮಕ್ಕೆ ಹೆಲಿಕಾಪ್ಟರ್‌ನಲ್ಲಿ ಆಗಮಿಸುತ್ತಿದ್ದ ನರೇಂದ್ರ ಮೋದಿ ಅವರಿಗೆ ಹೆಲಿಪ್ಯಾಡ್‌ ಸಿದ್ಧಪಡಿಸಲಾಗಿತ್ತು. ಆದರೆ, ಅವರ ಭದ್ರತಾ ಸಿಬ್ಬಂದಿಗೂ ಹೆಲಿಪ್ಯಾಡ್‌ ನಿರ್ಮಾಣ ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದರಿಂದ ತರಾತುರಿಯಲ್ಲಿ ಭತ್ತದ ಗದ್ದೆಯಲ್ಲಿ ಮಣ್ಣನ್ನು ಹಾಕಿ ಹೆಲಿಪ್ಯಾಡ್‌ ನಿರ್ಮಿಸಲಾಗಿತ್ತು. ಭಾರತೀಯ ಭದ್ರತಾ ಪಡೆಯ ಹೆಲಿಕಾಪ್ಟರ್‌ ಲ್ಯಾಂಡ್‌ ಆದ ತಕ್ಷಣ ಗದ್ದೆಯಲ್ಲಿ ಸಿಕ್ಕಿಕೊಂಡಿದೆ. ಸುಮಾರು 3 ಗಂಟೆಗಳಿಂದ ಹೆಲಿಕಾಪ್ಟರ್‌ ತೆರವು ಕಾರ್ಯಾಚರಣೆ ಮಾಡಲಾಗುತ್ತಿದ್ದರೂ ಸಫಲವಾಗಿಲ್ಲ.

ಲಾಯಕ್ ತಂದೆ ಹೇಳಿದ ಮಾತನ್ನು ಮಂದುವರಿಸಿದ ಲಾಯಕ್ ಪುತ್ರ, ನಿಂದನೆಗೆ ಮೋದಿ ತಿರುಗೇಟು!

ಸಿಂಧನೂರಿಗೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಿಂಧನೂರು ಹೊರವಲಯದ ಹೊಸಳ್ಳಿ ಕ್ಯಾಂಪ್‌ನ ಪ್ರಚಾರ ಸಮಾವೇಶದ ವೇದಿಕೆ ಹಿಂಭಾಗ ನಿರ್ಮಿಸಲಾದ ಹೆಲಿಪ್ಯಾಡ್‌ನಲ್ಲಿ ಇಳಿದರು. ಈ ವೇಳೆ ಸೇನಾ ಹೆಲಿಕ್ಯಾಪ್ಟರ್ ಮೂಲಕ ಆಗಮಿಸಿದ್ದು, ಸ್ಥಳೀಯ ಮುಖಂಡರು ಮೋದಿಯನ್ನು ಸ್ವಾಗತಿಸಿದರು. ಮೋದಿ ಹೆಲಿಕ್ಯಾಪ್ಟರ್ ಲ್ಯಾಂಡಿಗ್ ವೇಳೆ ಎಡವಟ್ಟು ಆಗಿದೆ. ಹೆಲಿಕ್ಯಾಪ್ಟರ್ ಗಾಳಿ ರಭಸಕ್ಕೆ ಮೋದಿ ಅವರ ಭದ್ರತಾ ಸಿಬ್ಬಂದಿಗೆ ಹಾಕಲಾಗಿದ್ದ ಟೆಂಟ್‌ ಹಾರಿ ಹೋಗಿದೆ. ಆದರೆ, ಮೋದಿ ಆಗಮಿಸಿದ ಹೆಲಿಪ್ಯಾಡ್ ನಲ್ಲಿ ಮತ್ತೊಂದು ಎಡವಟ್ಟು ಸಂಭವಿಸಿದೆ. ಕೆಸರಿನ ಗದ್ದೆಯಲ್ಲಿ ಸೇನಾ ಹೆಲಿಕ್ಯಾಪ್ಟರ್ ಸಿಲುಕಿಕೊಂಡಿದೆ. ಮಳೆಯಿಂದಾಗಿ ಹೆಲಿಪ್ಯಾಡ್ ಸಂಪೂರ್ಣ ಜಲಾವೃತವಾಗಿತ್ತು. ಅವಸರದಲ್ಲಿ ಹೆಲಿಪ್ಯಾಡ್ ಪುನಃ ಸಿದ್ಧಗೊಳಿಸಲಾಗಿದ್ದು, ಇದೀಗ ಸೇನೆಯ ಹೆಲಿಕಾಪ್ಟರ್‌ ಕೆಸರಿನಲ್ಲಿ ಸಿಲುಕಿದ್ದು, ಅದನ್ನು ಮೇಲೆತ್ತಲು ಸಿಬ್ಬಂದಿ ಹರಸಾಹರ ಮಾಡುತ್ತಿದ್ದಾರೆ.

ನೆಲದಿಂದ ಮೇಲಕ್ಕೇಳದ ಹೆಲಿಕ್ಯಾಪ್ಟರ್: ಇನ್ನು ಸೇನೆಯ ಹೆಲಿಕಾಪ್ಟರ್‌ ಮೇಲಕ್ಕೆತ್ತಲು ಹೆಲಿಪ್ಯಾಡ್‌ ಬಳಿಗೆ ಜೆಸಿಬಿಯನ್ನು ತೆಗೆದುಕೊಂಡು ಹೋಗಲಾಗಿತ್ತು. ಜೆಸಿಬಿಯಿಂದ ಮೇಲೆತ್ತಲು ಕಾರ್ಯಾಚರಣೆ ಮಾಡಿದರೂ ಯಾವುದೇ ಸಫಲತೆ ಕಂಡುಬಂದಿಲ್ಲ. ಸುಮಾರು 50 ಕ್ಕೂ ಹೆಚ್ಚು ಜನರಿಂದ ಹೆಲಿಕ್ಯಾಪ್ಟರ್ ಮೇಲೆಕ್ಕೆತ್ತುವ ಕಾರ್ಯ ನಡೆಯುತ್ತಿದೆ. ಸುಮಾರು ಮೂರ್ನಾಲ್ಕು ಗಂಟೆಗಳ ಸತತ ಪ್ರಯತ್ನ ಮಾಡಿದರೂ ಸೇನಾ ಹೆಲಿಕಾಪ್ಟರ್‌ ಅನ್ನು ಮೇಲೆತ್ತಲು ಸಾಧ್ಯವಾಗಿಲ್ಲ. ಹೆಲಿಪ್ಯಾಡ್ ನಲ್ಲಿಯೇ ಉಳಿದ ಸೇನಾ ಹೆಲಿಕ್ಯಾಪ್ಟರ್. ತೇವಾಂಶ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹೆಲಿಪ್ಯಾಡ್ ನಲ್ಲಿ ಹೆಲಿಕ್ಯಾಪ್ಟರ್ ಹಾಕಿಕೊಂಡಿದೆ. 

ಖರ್ಗೆ ವಿವಾದಾತ್ಮಕ ಹೇಳಿಕೆಯಿಂದ ಕಾಂಗ್ರೆಸ್‌ಗೆ ನಷ್ಟ, ಸಮೀಕ್ಷೆಯಲ್ಲಿ ಬಯಲಾಯ್ತು ರಹಸ್ಯ!

ಭದ್ರತಾ ಸಿಬ್ಬಂದಿ ಕರೆದೊಯ್ಯಲು ಮತ್ತೊಂದು ಹೆಲಿಕಾಪ್ಟರ್‌ ಆಗಮನ: ಇನ್ನು ನರೇಂದ್ರ ಮೋದಿ ಅವರು ಕಾರ್ಯಕ್ರಮ ಮುಗಿಸಿ ಕಲಬುರಗಿಯತ್ತ ಹೊರಟರು. ಆದರೆ, ಭದ್ರತಾ ಸಿಬ್ಬಂದಿ ಕರೆದೊಯ್ಯುವ ಹೆಲಿಕಾಪ್ಟರ್‌ ಕೆಸರಿನ ಗದ್ದೆಯಲ್ಲಿ ಸಿಕ್ಕಿಕೊಂಡಿದ್ದರಿಂದ, ಅವರನ್ನು ಕರೆದೊಯ್ಯಲು ಬೇರೊಂದು ಹೆಲಿಕ್ಯಾಪ್ಟರ್ ಅನ್ನು ಸ್ಥಳಕ್ಕೆ ತರಿಸಲಾಯಿತು. ಕೆಸರಿನಲ್ಲಿ ಸಿಲುಕಿರುವ ಹೆಲಿಕಾಪ್ಟರ್‌ ಮೇಲೆತ್ತಲು ಕೆಲವು ಸಿಬ್ಬಂದಿ ಬಂದಿದ್ದಾರೆ. ಇನ್ನು ನರೇಂದ್ ಮೋದಿ ಹಾಗೂ ಅವರ ಭದ್ರತಾ ಸಿಬ್ಬಂದಿ ಕಲಬುರಗಿ ಪಟ್ಟಣದ ಕಾರ್ಯಕ್ರಮಕ್ಕೆ ತೆರಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ