ಮಾರ್ಚ್ 25ಕ್ಕೆ ದಾವಣಗೆರೆಗೆ ಆಗಮಿಸಲಿರುವ ಪ್ರಧಾನಿ ಮೋದಿ : 150 ಸೀಟು ಗೆಲ್ಲಲು ಇಲ್ಲಿಂದಲೇ ರಣಕಹಳೆ!

Published : Mar 23, 2023, 05:32 PM ISTUpdated : Mar 23, 2023, 05:35 PM IST
ಮಾರ್ಚ್ 25ಕ್ಕೆ ದಾವಣಗೆರೆಗೆ ಆಗಮಿಸಲಿರುವ ಪ್ರಧಾನಿ ಮೋದಿ : 150 ಸೀಟು ಗೆಲ್ಲಲು ಇಲ್ಲಿಂದಲೇ ರಣಕಹಳೆ!

ಸಾರಾಂಶ

ಮಾರ್ಚ್ 25 ರಂದು ದಾವಣಗೆರೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿರುವ ಹಿನ್ನೆಲೆ ಸಂಸದ ಜಿಎಂ ಸಿದ್ದೇಶ್ವರ ಮೋದಿ ಸಮಾವೇಶದ ಕುರಿತು ಪತ್ರಿಕಾಗೋಷ್ಠಿ ನಡೆಸಿದರು.    

ದಾವಣಗೆರೆ (ಮಾ.23)  ದಾವಣಗೆರೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿರುವ ಹಿನ್ನೆಲೆ ಸಂಸದ ಜಿಎಂ ಸಿದ್ದೇಶ್ವರ ಮೋದಿ ಸಮಾವೇಶದ ಕುರಿತು ಪತ್ರಿಕಾಗೋಷ್ಠಿ ನಡೆಸಿದರು.  

ಮಾರ್ಚ್ 25 ರಂದು ಮಧ್ಯಾಹ್ನ 3 ಗಂಟೆಗೆ  ಮೋದಿಯವರು(PM Narendra Modi) ದಾವಣಗೆರೆ ಜಿ ಎಂ ಐಟಿ ಕ್ಯಾಂಪಸ್(Davanagere IIT Campus) ಆಗಮಿಸಲಿದ್ದಾರೆ. ಪ್ರಧಾನಿ ಆಗಮನದ ವೇಳೆ ಸುರಕ್ಷತೆ ,ಸೂಕ್ತ ವ್ಯವಸ್ಥೆ ಬಗ್ಗೆ ಈಗಾಗಲೇ ಸಭೆ ಮಾಡಲಾಗಿದೆ ಎಂದರು.

 

Karnataka Politics: ಕಾಂಗ್ರೆಸ್‌ಗೆ ಹಿಗ್ಗಾಮುಗ್ಗಾ ಜಾಡಿಸಿದ ಸಂಸದ ಜಿ.ಎಂ.ಸಿದ್ದೇಶ್ವರ

ರಾಜ್ಯದೆಲ್ಲೆಡೆ ಮೋದಿ ಮೇನಿಯಾ ಶುರುವಾಗಿದೆ. ವಿಜಯ ಸಂಕಲ್ಪ ಯಾತ್ರೆ ರಾಜ್ಯದ ನಾಲ್ಕು ಭಾಗಗಳಲ್ಲಿ ನಡೆಯಿತು.‌ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ
ಜೆಪಿ ನಡ್ಡಾ(JP Nadda) ಆರಂಭಿಸಿದ ವಿಜಯ ಸಂಕಲ್ಪ ಯಾತ್ರೆ (Vijayasankalpa yatre) ನಾಲ್ಕು ದಿಕ್ಕುಗಳಲ್ಲಿ ಮುಗಿದು ದಾವಣಗೆರೆಯಲ್ಲಿ ಸಮಾರೋಪ ಕಾರ್ಯಕ್ರಮ ನಡೆಯುತ್ತಿದೆ. ಅಂದಾಜು 10 ಲಕ್ಷ ಕಾರ್ಯಕರ್ತರು ಸೇರುವ ನಿರೀಕ್ಷೆ ಇದೆ ಎಂದರು.

ಈಗಾಗಲೇ ಇಡೀ ದಾವಣಗೆರೆಯನ್ನು ಕಾರ್ಯಕರ್ತರು ಕೇಸರಿಮಯ ಮಾಡಿದ್ದಾರೆ. ಇಷ್ಟು ವಿಜೃಂಭಣೆ ಕಾರ್ಯಕ್ರಮ ದಾವಣಗೆರೆ ಇತಿಹಾಸದಲ್ಲಿ ನಡೆದಿಲ್ಲ. ಮೋದಿಯವರು ಈ ಕಾರ್ಯಕ್ರಮದಲ್ಲಿ ಜನರ ಮಧ್ಯೆ ಹೋಗುತ್ತಾರೆ. ಅದಕ್ಕಾಗಿ ವಿಶೇಷ ರಸ್ತೆ ವ್ಯವಸ್ಥೆ ಮಾಡಿದ್ದೇವೆ. ಒಟ್ಟು 8 ಜಿಲ್ಲೆ ಸೇರಿದಂತೆ ರಾಜ್ಯದ ಮೂಲೆ‌ ಮೂಲೆಯಿಂದ 10 ಲಕ್ಷ ಕಾರ್ಯಕರ್ತರು ಬರುತ್ತಾರೆ. ದಾವಣಗೆರೆಯಿಂದಲೇ  3 ಲಕ್ಷ ಕಾರ್ಯಕರ್ತರು ಬರುತ್ತಾರೆ. ಈ ಕಾರ್ಯಕ್ರಮದಲ್ಲಿ  ಕಾರ್ಯಕರ್ತರು ಮೋದಿಯವರನ್ನು ಬಹಳ ಹತ್ತಿರದಿಂದ ನೋಡುವ ವ್ಯವಸ್ಥೆ ಮಾಡಲಾಗಿದೆ. ಎಂದರು.

 

'ನನ್ನ ವಿರುದ್ಧ ಕಾಂಗ್ರೆಸ್‌ ಷಡ್ಯಂತ್ರ ಮಾಡುತ್ತಿದೆ'

ಈ ಬಾರಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದೆ. ಎಲ್ಲೆಡೆ ಬಿಜೆಪಿಗೆ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ನರೇಂದ್ರ ಮೋದಿ, ಅಮಿತ್ ಶಾ ಹೋದಲೆಲ್ಲಾ ಜನಸಾಗರವೇ ಹರಿದು ಬರುತ್ತಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಬಿಜೆಪಿ  150 ಸೀಟು ಗೆಲ್ಲುವುದು ಖಚಿತ. ಆ ಗೆಲುವಿಗೆ ದಾವಣಗೆರೆಯಿಂದಲೇ ವಿಜಯೋತ್ಸವ ಕಹಳೆ ಮೊಳಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!