KPSC Scam: 200 ಕೋಟಿ ಪಡೆದು ಸಾಹುಕಾರನ ಅಧ್ಯಕ್ಷ ಮಾಡಿದ್ದು ಯಾರು? ಶಿವಶಂಕರಪ್ಪ ಮನೆಯಲ್ಲಿ ಯಾರ ಫೋಟೋ ಇವೆ? ಹೆಚ್‌ಡಿಕೆಗೆ ಪ್ರಿಯಾಂಕ್ ಸವಾಲ್!

Kannadaprabha News   | Kannada Prabha
Published : Aug 29, 2026, 07:29 AM IST
Priyank kharge Challenges HDK who appointed sahukar an accused kpsc scam as president?

ಸಾರಾಂಶ

ಕೆಪಿಎಸ್‌ಸಿ ನೇಮಕಾತಿ ಅಕ್ರಮಗಳ ಕುರಿತು ಮಾತನಾಡುವ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ. ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರ ನೇಮಕಾತಿ ಮತ್ತು 200 ಕೋಟಿ ರೂಪಾಯಿಗಳ ಆರೋಪದ ಬಗ್ಗೆ ಮಾತನಾಡುವಂತೆ ಒತ್ತಾಯಿಸಿದ್ದಾರೆ.

ಬೆಂಗಳೂರು (ಆ.29): ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ಅಕ್ರಮಗಳ ಕುರಿತು ಮಾತನಾಡುತ್ತಿರುವ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಕೆಪಿಎಸ್‌ಸಿ ಅಧ್ಯಕ್ಷರ ನೇಮಕಾತಿಯ ಬಗ್ಗೆಯೂ ಮಾತನಾಡುವ ಧೈರ್ಯ ತೋರಿಸಲಿ ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದರು.

ಕೆಪಿಎಸ್‌ಸಿ ಅಧ್ಯಕ್ಷರನ್ನಾಗಿ ನೇಮಿಸಿದ್ದು ಯಾರು?

ಸುದ್ದಿಗಾರರೊಂದಿಗೆ ಮಾತನಾಡಿ, ಕೆಪಿಎಸ್‌ಸಿ ನೇಮಕಾತಿಯಲ್ಲಿ ಅಕ್ರಮದ ಬಗ್ಗೆ ಮಾತನಾಡುವ ಕುಮಾರಸ್ವಾಮಿ ಅವರು ಶಿವಶಂಕರಪ್ಪ ಸಾಹುಕಾರ್‌ ಅವರನ್ನು ಕೆಪಿಎಸ್‌ಸಿ ಅಧ್ಯಕ್ಷರನ್ನಾಗಿ ನೇಮಿಸಿದ್ದು ಯಾರು? ಎಂಬುದನ್ನೂ ಹೇಳಬೇಕು ಎಂದು ಒತ್ತಾಯಿಸಿದರು.

ಸಾಹುಕಾರ್‌ನ ಮನೆಯಲ್ಲಿ ಯಾರ ಫೋಟೋಗಳಿವೆ?

ಸಾಹುಕಾರ್‌ ಅವರ ಮನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಥವಾ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಫೋಟೋ ಇಲ್ಲ. ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರ ಫೋಟೋ ಇದೆ ಎಂದು ಹೇಳಲಾಗುತ್ತಿದೆ. 200 ಕೋಟಿ ರು. ನೀಡಿ ಅವರನ್ನು ಕೆಪಿಎಸ್‌ಸಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು ಎಂದು ಬಿಜೆಪಿ ಮಾಜಿ ಶಾಸಕರೇ ಆರೋಪಿಸಿದ್ದಾರೆ. ಇದು ನಿಜವೇ? ಇದರ ಬಗ್ಗೆ ಮಾತನಾಡಲು ಕುಮಾರಸ್ವಾಮಿ ಅವರಿಗೆ ಧೈರ್ಯವಿದೆಯೇ? ಎಂದು ಸವಾಲು ಹಾಕಿದರು.

ನನ್ನ ನಾಲಿಗೆಯ ಬಗ್ಗೆ ಮಾತನಾಡಲು ಜೆಡಿಎಸ್‌ನವರಿಗೆ ಯಾವ ನೈತಿಕತೆ ಇದೆ? ಈವರೆಗೂ ಬಿಜೆಪಿಯ ನಾಯಕರಿಗೆ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಪ್ರಿಯಾಂಕ್ ಖರ್ಗೆ ಬೇಕಿತ್ತು. ಈಗ ಜೆಡಿಎಸ್‌ಗೂ ಅನಿವಾರ್ಯ ಎಂದಾದರೆ ಮಾತನಾಡಿಕೊಳ್ಳಲಿ ಒಳ್ಳೆಯದು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ದೋಸ್ತಿ ಹೋರಾಟಕ್ಕೆ ಮಣಿದ ಕಾಂಗ್ರೆಸ್‌, ಡಿಕೆ ಸಂಪುಟದ ಮೊದಲ ವಿಕೆಟ್‌ ಪತನ
'ಕಟ್ಕೊಂಡವರ ಖಾತೆಗೂ ಹೋಗಿದೆ, ಇಟ್ಕೊಂಡವರ ಖಾತೆಗೂ ಹೋಗಿದೆ: ವಾಲ್ಮೀಕಿ ಹಗರಣ, ಸಿಟಿ ರವಿ ಸ್ಫೋಟಕ ಹೇಳಿಕೆ!