ಬಿಜೆಪಿ ಸೃಷ್ಟಿಸಿದ ಸಮಸ್ಯೆ ಪರಿಹಾರಕ್ಕೆ ನಮಗೆ ಮತ: ಪ್ರಿಯಾಂಕ್‌ ಖರ್ಗೆ

Published : May 14, 2023, 08:41 AM IST
ಬಿಜೆಪಿ ಸೃಷ್ಟಿಸಿದ ಸಮಸ್ಯೆ ಪರಿಹಾರಕ್ಕೆ ನಮಗೆ ಮತ: ಪ್ರಿಯಾಂಕ್‌ ಖರ್ಗೆ

ಸಾರಾಂಶ

ಅಮಿತ್‌ ಶಾ ಸೇರಿ ಹಲವರು ಇಲ್ಲಿಗೆ ಬಂದು ಪ್ರಚಾರ ಮಾಡಿದ್ದರೂ ಅವರ ಬಳಿ ರಾಜ್ಯಕ್ಕೆ ಅಂಟಿದ್ದ ಶೇ.40 ಕಮಿಷನ್‌ ಭ್ರಷ್ಟಾಚಾರದ ಹಣೆಪಟ್ಟಿ ಅಳಿಸಲು ಯಾವುದೇ ಅಸ್ತ್ರ ಇರಲಿಲ್ಲ. ಜೊತೆಗೆ ಅಭಿವೃದ್ಧಿಯ ಯಾವುದೇ ನೀಲನಕ್ಷೆಗಳನ್ನು ಅವರು ತರಲಿಲ್ಲ. ಇಲ್ಲಿಗೆ ಬಂದು ಕನ್ನಡಿಗರಿಗಾಗಿ ಏನು ಮಾಡುತ್ತೇವೆ ಎಂಬುದನ್ನೂ ಹೇಳಲಿಲ್ಲ. ಬದಲಿಗೆ ನಮ್ಮ ಅಸ್ಮಿತೆ ಬಗ್ಗೆ ಮಾತನಾಡಿದರು ಎಂದ ಪ್ರಿಯಾಂಕ್‌ ಖರ್ಗೆ

ಬೆಂಗಳೂರು(ಮೇ.14): ನಿರುದ್ಯೋಗ ನಿವಾರಣೆಗೆ, ಸಂವಿಧಾನ ಉಳಿಸಿಕೊಳ್ಳುವಿಕೆಗೆ, ಬೆಲೆ ಏರಿಕೆ ತಡೆಗೆ ಹಾಗೂ ಕನ್ನಡದ ಅಸ್ಮಿತೆಯ ಸಮಸ್ಯೆ ಸೇರಿ ಎಲ್ಲವನ್ನೂ ನಿವಾರಿಸಲು ಕಾಂಗ್ರೆಸ್‌ ಸೂಕ್ತ ಎಂದು ಜನತೆ ನಿರ್ಣಯಿಸಿ ಮತ ನೀಡಿದ್ದಾರೆ ಎಂದು ಚಿತ್ತಾಪುರದಿಂದ ಗೆಲವು ಸಾಧಿಸಿದ ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮೋದಿ, ಅಮಿತ್‌ ಶಾ ಸೇರಿ ಹಲವರು ಇಲ್ಲಿಗೆ ಬಂದು ಪ್ರಚಾರ ಮಾಡಿದ್ದರೂ ಅವರ ಬಳಿ ರಾಜ್ಯಕ್ಕೆ ಅಂಟಿದ್ದ ಶೇ.40 ಕಮಿಷನ್‌ ಭ್ರಷ್ಟಾಚಾರದ ಹಣೆಪಟ್ಟಿ ಅಳಿಸಲು ಯಾವುದೇ ಅಸ್ತ್ರ ಇರಲಿಲ್ಲ. ಜೊತೆಗೆ ಅಭಿವೃದ್ಧಿಯ ಯಾವುದೇ ನೀಲನಕ್ಷೆಗಳನ್ನು ಅವರು ತರಲಿಲ್ಲ. ಇಲ್ಲಿಗೆ ಬಂದು ಕನ್ನಡಿಗರಿಗಾಗಿ ಏನು ಮಾಡುತ್ತೇವೆ ಎಂಬುದನ್ನೂ ಹೇಳಲಿಲ್ಲ. ಬದಲಿಗೆ ನಮ್ಮ ಅಸ್ಮಿತೆ ಬಗ್ಗೆ ಮಾತನಾಡಿದರು ಎಂದರು.

Kalaburagi Election Result 2023 : ಮತ್ತೊಮ್ಮೆ ಕಾಂಗ್ರೆಸ್‌ನ ಭದ್ರಕೋಟೆಯಾದ ಕಲಬುರಗಿ!

ಕಲ್ಯಾಣ ಕರ್ನಾಟಕದ ಜೊತೆಗೆ ಇಡೀ ಕರ್ನಾಟಕ ಕಾಂಗ್ರೆಸ್‌ನ ಭದ್ರಕೋಟೆ ಎಂಬುದು ಮತ್ತೆ ಸಾಬೀತಾಗಿದೆ. ನಮ್ಮ ಭಾಗದ ಅಭಿವೃದ್ಧಿಗೆ ತುಕ್ಕು ಹಿಡಿದಿದೆ. ಅದನ್ನು ಮೊದಲು ಬಿಡಿಸಬೇಕಿದೆ. ಈ ಭಾಗದಲ್ಲಿ ಆರ್ಥಿಕತೆ ದಿವಾಳಿಯಾಗಿದ್ದು, ಸ್ಥಿರತೆ ತಂದುಕೊಡಬೇಕಿದೆ. ಆಡಳಿತ ಭ್ರಷ್ಟಾಚಾರದಿಂದ ಕೂಡಿದೆ. ಇದನ್ನೆಲ್ಲವನ್ನೂ ಸರಿಪಡಿಸಬೇಕಿದೆ. ಹೀಗಾಗಿ ಮೊದಲು ಆ ಕೆಲಸವನ್ನು ಮಾಡುತ್ತೇವೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಮೋದಿಯಿಂದ ಬದ್ಧತೆಯ ಕಾರ್ಯ: ಸಂಸದ ಬಿ.ವೈ.ರಾಘವೇಂದ್ರ
ಹೈಕಮಾಂಡ್‌ ನಿರ್ಧಾರವೇ ಅಂತಿಮ: ಸಿಎಂ ಬದಲು ವಿಚಾರಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ