ಏ.23ಕ್ಕೆ ಚಿತ್ರದುರ್ಗ, ಬೆಂಗಳೂರಲ್ಲಿ ಪ್ರಿಯಾಂಕಾ ಗಾಂಧಿ ಚುನಾವಣಾ ಪ್ರಚಾರ

Published : Apr 20, 2024, 07:03 AM IST
ಏ.23ಕ್ಕೆ ಚಿತ್ರದುರ್ಗ, ಬೆಂಗಳೂರಲ್ಲಿ ಪ್ರಿಯಾಂಕಾ ಗಾಂಧಿ ಚುನಾವಣಾ ಪ್ರಚಾರ

ಸಾರಾಂಶ

ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿಯವರು ಏ.23ರಂದು ರಾಜ್ಯದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. ಅಂದು ಚಿತ್ರದುರ್ಗ ಮತ್ತು ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳಾದ ಬಿ.ಎನ್‌. ಚಂದ್ರಪ್ಪ ಮತ್ತು ಸೌಮ್ಯಾರೆಡ್ಡಿಯವರ ಪರವಾಗಿ ಮತಯಾಚನೆ ಮಾಡಲಿದ್ದಾರೆ.

ಬೆಂಗಳೂರು (ಏ.20): ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿಯವರು ಏ.23ರಂದು ರಾಜ್ಯದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. ಅಂದು ಚಿತ್ರದುರ್ಗ ಮತ್ತು ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳಾದ ಬಿ.ಎನ್‌. ಚಂದ್ರಪ್ಪ ಮತ್ತು ಸೌಮ್ಯಾರೆಡ್ಡಿಯವರ ಪರವಾಗಿ ಮತಯಾಚನೆ ಮಾಡಲಿದ್ದಾರೆ. ಈ ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಪ್ರಿಯಾಂಕಾ ಗಾಂಧಿಯವರು ಕರ್ನಾಟಕಕ್ಕೆ ಆಗಮಿಸಲಿದ್ದಾರೆ.

ಬಿಜೆಪಿಯವರೇನು ಜ್ಯೋತಿಷಿಗಳೇ?: ಲೋಕಸಭಾ ಚುನಾವಣೆಯು ನ್ಯಾಯಸಮ್ಮತವಾಗಿ ನಡೆದಿದ್ದೇ ಆದಲ್ಲಿ ಬಿಜೆಪಿಯು 180 ಸ್ಥಾನಗಳಿಗಿಂತ ಅಧಿಕ ಗಳಿಕೆ ಮಾಡುವುದಿಲ್ಲ ಎಂಬುದಾಗಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕಾ, ‘ಬಿಜೆಪಿಯು ಚುನಾವಣೆಗೆ ಮೊದಲೇ 400ಕ್ಕಿಂತ ಅಧಿಕ ಸೀಟು ಗೆಲ್ಲುವುದಾಗಿ ಹೇಳಿಕೊಂಡು ತಿರುಗುತ್ತಿದೆ. 

ಆದರೆ ಚುನಾವಣೆಗೆ ಮೊದಲೇ ಅಷ್ಟು ಕರಾರುವಕ್ಕಾಗಿ ಎಷ್ಟು ಸ್ಥಾನ ಗೆಲ್ಲುತ್ತೇವೆಂದು ಹೇಳಲು ಅವರೇನು ಜ್ಯೋತಿಷಿಗಳೇ? ಇವಿಎಂಗಳನ್ನು ತಿರುಚದೇ, ನ್ಯಾಯಸಮ್ಮತವಾಗಿ ಲೋಕಸಭಾ ಚುನಾವಣೆ ನಡೆದಿದ್ದೇ ಆದಲ್ಲಿ ಬಿಜೆಪಿ 180 ಸ್ಥಾನಕ್ಕಿಂತ ಕಡಿಮೆ ಸ್ಥಾನಗಳಲ್ಲಿ ಗೆಲ್ಲಲಿದೆ’ ಎಂದು ತಿಳಿಸಿದರು. ಇದೇ ವೇಳೆ ಇಂಡಿಯಾ ಕೂಟ ಲೋಕಸಭಾ ಚುನಾವಣೆಯಲ್ಲಿ ಗಳಿಸುವ ಸ್ಥಾನಗಳ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದರು.

ಹುಬ್ಬಳ್ಳಿ ಯುವತಿ ನೇಹಾ ಹಿರೇಮಠ ಹತ್ಯೆ: ಕಾಂಗ್ರೆಸ್‌-ಬಿಜೆಪಿ ನಡುವೆ ತೀವ್ರ ರಾಜಕೀಯ ಸಂಘರ್ಷ

ಭಾಷಣಕ್ಕೆ ಮರುಳಾಗದೇ ಮತ ಹಾಕಿ: ಜನತೆ ಪ್ರಧಾನಿ ನರೇಂದ್ರ ಮೋದಿ ಭಾಷಣಕ್ಕೆ ಮರುಳಾಗದೇ ಲೋಕಸಭಾ ಚುನಾವಣೆಯಲ್ಲಿ ಬದಲಾವಣೆಗಾಗಿ ಮತ ಚಲಾಯಿಸಬೇಕು ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹಾಗೂ ನಾಯಕಿ ಪ್ರಿಯಾಂಕಾ ಗಾಂಧಿ ವರ್ದಾ ಹೇಳಿದರು. ಇಲ್ಲಿಯ ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮೋದಿ ಅವರ ಮಾತಿಗೆ ಮರುಳಾಗದೇ, ನಿಮ್ಮ ಸ್ವಂತ ಆಲೋಚನೆಯಿಂದ ನೀವು ನಿಮ್ಮನ್ನು ಪ್ರಶ್ನಿಸಿಕೊಂಡು, ಮೋದಿ ಸರ್ಕಾರದಿಂದ ಈ 10 ವರ್ಷಗಳಲ್ಲಿ ಅಭಿವೃದ್ಧಿ ಆಗಿದಿಯೇ ಎಂಬುದನ್ನು ಅರಿತು ಮತ ಚಲಾಯಿಸಿ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮತ್ತು ಬೆಳಗಾವಿ ವಿಭಜನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ