
ಬೆಂಗಳೂರು, [ಫೆ.03]: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಭರ್ಜರಿ ತಯಾರಿ ನಡೆಸಿವೆ.
ಇದೇ ಫೆಬ್ರವರಿ 10ರಂದು ರಾಜ್ಯ ಬಿಜೆಪಿ ಹುಬ್ಬಳ್ಳಿಯಲ್ಲಿ ಬೃಹತ್ ಸಮಾವೇಶ ಆಯೋಜಿಸಿದೆ. ಈ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿ ಲೋಕಸಭಾ ಚುನಾವಣಾ ಪ್ರಚಾರಕ್ಕೆ ರಣಕಹಳೆ ಊದಲಿದ್ದಾರೆ.
ಕರ್ನಾಟಕದಲ್ಲಿ ಕಮಲ ಅರಳಿಸಲು ಬರುತ್ತಿದ್ದಾರೆ ನಮೋ..!
ಈ ಮೋದಿ ರ್ಯಾಲಿಗೆ ಪ್ರತಿಯಾಗಿ ಮತದಾರರನ್ನು ಸೆಳೆಯಲು ಕಾಂಗ್ರೆಸ್ ಚುನಾವಣಾ ಸಮಾವೇಶಗಳಲ್ಲಿ ಎಐಸಿಸಿ ನೂತನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಅವರನ್ನು ಬಳಸಿಕೊಳ್ಳಲು ನಿರ್ಧರಿಸಿದೆ.
ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಎಚ್ ಕೆ ಪಾಟೀಲ್ ಈಗಾಗಲೇ ಪ್ರಿಯಾಂಕ ಗಾಂಧಿ ಅವರು ವಿವಿಧ ಚುನಾವಣಾ ರ್ಯಾಲಿಗಳಲ್ಲಿ ಭಾಗವಹಿಸುವ ಸುಳಿವು ನೀಡಿದ್ದಾರೆ.
ಮೋದಿ ರ್ಯಾಲಿಗೆ ಪ್ರತಿಯಾಗಿ ಪ್ರಿಯಾಂಕ ಗಾಂಧಿ ರ್ಯಾಲಿ ಆಯೋಜಿಸಿದರೆ, ಮತದಾರರನ್ನು ಸೆಳೆಯಬಹುದು ಎನ್ನುವುದು ರಾಜ್ಯ ಕಾಂಗ್ರೆಸ್ ನ ಲೆಕ್ಕಾಚಾರ. ಹೀಗೆ ಎರಡು ರಾಷ್ಟ್ರೀಯ ಪಕ್ಷಗಳು ಸ್ಟಾರ್ ಪ್ರಚಾರಕನ್ನು ರಾಜ್ಯಕ್ಕೆ ಕರೆತಂದು ಮತದಾರರ ಮನ ಓಲೈಸುವ ತಂತ್ರಗಳನ್ನು ರೂಪಿಸುತ್ತಿವೆ.
ಆದ್ರೆ ಈ ಸ್ಟಾರ್ ಪ್ರಚಾರನ್ನು ಕರೆತರುವುದರಿಂದ ಎಷ್ಟರ ಮಟ್ಟಿಗೆ ವರ್ಕೌಟ್ ಆಗಲಿದೆ ಎನ್ನುವುದು ಫಲಿತಾಂಶ ಹೊರಬಿದ್ದ ಬಳಿಕ ತಿಳಿಯಲಿದೆ.
ಒಟ್ಟಿನಲ್ಲಿ ಈ ಬಾರಿ ಲೋಕಸಭೆ ಚುನಾವಣೆ ರಾಜ್ಯದಲ್ಲಿ ರಂಗೇರಲಿದ್ದು, ಒಟ್ಟು 28 ಕ್ಷೇತ್ರಗಳ ಪೈಕಿ ಯಾರು ಎಷ್ಟು ಗೆಲ್ಲಲಿದ್ದಾರೆ ಎನ್ನುವುದನ್ನು ಕಾದುನೋಡಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.