Badami: ಹೆಚ್ಚು ಸದಸ್ಯತ್ವ ಮಾಡಿಸುವ ಕಾಂಗ್ರೆಸ್ಸಿಗರಿಗೆ ಬಂಪರ್‌ ಬಹುಮಾನ..!

Published : Mar 09, 2022, 10:52 AM ISTUpdated : Mar 09, 2022, 10:54 AM IST
Badami: ಹೆಚ್ಚು ಸದಸ್ಯತ್ವ ಮಾಡಿಸುವ ಕಾಂಗ್ರೆಸ್ಸಿಗರಿಗೆ ಬಂಪರ್‌ ಬಹುಮಾನ..!

ಸಾರಾಂಶ

*  ಸಿದ್ದು ಕ್ಷೇತ್ರ ಬಾದಾಮಿಯಲ್ಲಿ ಭರ್ಜರಿ ಆಮಿಷ *  ಕ್ಷೇತ್ರಾದ್ಯಂತ ಹರಿದಾಡುತ್ತಿದೆ ಕರಪತ್ರ *  ಭಾರೀ ಸಂಚಲನ ಮೂಡಿಸಿದ ಬಹುಮಾನಗಳ ಆಫರ್‌ನ ಅಭಿಯಾನ  

ಗುಳೇದಗುಡ್ಡ(ಮಾ.09):  ಕಾಂಗ್ರೆಸ್‌ ಈಗಾಗಲೇ ರಾಜ್ಯಾದ್ಯಂತ ಡಿಜಿಟಲ್‌ ಸದಸ್ಯತ್ವ ಅಭಿಯಾನ(Congress Digital Membership Campaign) ಆರಂಭಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಪ್ರತಿನಿಧಿಸುತ್ತಿರುವ ಬಾಗಲಕೋಟೆ(Bagalkot) ಜಿಲ್ಲೆಯ ಬಾದಾಮಿ ಮತ ಕ್ಷೇತ್ರದಲ್ಲಿ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸುವ ಉದ್ದೇಶದಿಂದ ಕಾರ್ಯಕರ್ತರಿಗೆ ಬಗೆ ಬಗೆಯ ಬಹುಮಾನಗಳನ್ನು ನೀಡುವುದಾಗಿ ಆಮಿಷ ನೀಡಲಾಗುತ್ತಿದೆ.

ಬಾದಾಮಿ ಮತಕ್ಷೇತ್ರದಲ್ಲಿ ಬಾದಾಮಿ(Badami) ಮತ್ತು ಗುಳೇದಗುಡ್ಡ(Guledagudda) ತಾಲೂಕುಗಳು ಬರುತ್ತವೆ. ಇಲ್ಲಿರುವ ಕಾರ್ಯಕರ್ತರು(Activists) ಹೆಚ್ಚು ಸದಸ್ಯರನ್ನು ಡಿಜಿಟಲ್‌ ಅಭಿಯಾನದಲ್ಲಿ ಮಾಡಿಸಿದರೆ ಅವರಿಗೆ ಫ್ರಿಡ್ಜ್‌, ಟಿವಿ(Fridge, TV)  ಮತ್ತು ಮೊಬೈಲ್‌ಗಳನ್ನು(Mobile) ಬಹುಮಾನವಾಗಿ ನೀಡುತ್ತೇವೆ ಎಂದು ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ, ಸುರ್ಜೇವಾಲಾ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಅವರಿರುವ ಭಾವಚಿತ್ರ ಒಳಗೊಂಡ ಜಾಹೀರಾತೊಂದು ಎಲ್ಲೆಡೆ ಹರಿದಾಡುತ್ತಿದೆ.

ಅಂಗನವಾಡಿಯಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನ, ಬಿಜೆಪಿ ವಿರೋಧ!

ಪ್ರಥಮ ಬಹುಮಾನವಾಗಿ 5000ಕ್ಕಿಂತ ಹೆಚ್ಚಿನ ಸದಸ್ಯರನ್ನು ಮಾಡಿಸಿದ ಕಾರ್ಯಕರ್ತರಿಗೆ ಫ್ರಿಡ್ಜ್‌, ದ್ವಿತೀಯ ಬಹುಮಾನವಾಗಿ 3000ಕ್ಕಿಂತ ಹೆಚ್ಚು ಸದಸ್ಯರನ್ನು ಮಾಡಿಸಿದ ಕಾರ್ಯಕರ್ತರಿಗೆ ಎಲ್‌ಇಡಿ ಟಿವಿ ಮತ್ತು ತೃತೀಯ ಬಹುಮಾನವಾಗಿ 2000ಕ್ಕಿಂತ ಹೆಚ್ಚು ಸದಸ್ಯರನ್ನು ಮಾಡಿಸಿದ ಕಾರ್ಯಕರ್ತರಿಗೆ ಮೊಬೈಲ್‌ ಅನ್ನು ಬಹುಮಾನವಾಗಿ ನೀಡುವುದಾಗಿ ಜಾಹೀರಾತು ಹೇಳುತ್ತಿದೆ.

ಸಿದ್ದರಾಮಯ್ಯ ಶಾಸಕರಾಗಿರುವ ಈ ಕ್ಷೇತ್ರದಲ್ಲಿ ಸೋಮವಾರ ಡಿಜಿಟಲ್‌ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ ಕೆಲವೇ ಕ್ಷಣಗಳಲ್ಲಿ ಮತಕ್ಷೇತ್ರದ ಮುಖಂಡರು ಈ ನಿರ್ಧಾರಕ್ಕೆ ಬಂದಿದ್ದಾರೆ. ರಾಜ್ಯದೆಲ್ಲೆಡೆ(Karnataka) ಬಹುಮಾನಗಳ ಆಫರ್‌ನ ಅಭಿಯಾನ ಸಂಚಲನ ಮೂಡಿಸಿದೆ.

ಕಾಂಗ್ರೆಸ್‌ನಿಂದ 50 ಲಕ್ಷ ಸದಸ್ಯತ್ವದ ಟಾರ್ಗೆಟ್‌

ಬೆಂಗಳೂರು: ರಾಜ್ಯ ಕಾಂಗ್ರೆಸ್‌ (Congress) ವತಿಯಿಂದ 50 ಲಕ್ಷ ಸದಸ್ಯತ್ವ ನೋಂದಣಿಯ ಮಹತ್ವಾಕಾಂಕ್ಷೆಯೊಂದಿಗೆ ಹಮ್ಮಿಕೊಂಡಿರುವ ಕಾಂಗ್ರೆಸ್‌ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ (Randeep Singh Surjwewala) ಅವರು ಭಾನುವಾರ ಚಾಲನೆ ನೀಡಿದ್ದು, ರಾಜ್ಯದ ಮೂಲೆ-ಮೂಲೆಯಲ್ಲೂ ಸದಸ್ಯತ್ವ ನೋಂದಣಿ ಯಶಸ್ವಿಗೊಳಿಸುವ ಮೂಲಕ 2023ರಲ್ಲಿ ಕಾಂಗ್ರೆಸ್‌ ಪಕ್ಷವನ್ನು ಶತಾಯ ಗತಾಯ ಅಧಿಕಾರಕ್ಕೆ ತರಬೇಕು ಎಂದು ಕರೆ ನೀಡಿದ್ದರು 

ನ.14 ರಂದು ನಗರದ ಅರಮನೆ ಮೈದಾನದಲ್ಲಿ (Palace Ground ) ನಡೆದ ಕಾರ್ಯಕ್ರಮದಲ್ಲಿ ಸುರ್ಜೇವಾಲಾ ನೇತೃತ್ವದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ (DK Shivakumar), ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah), ಕೆಪಿಸಿಸಿ (KPCC) ಕಾರ್ಯಾಧ್ಯಕ್ಷರು ಹಾಗೂ ಹಿರಿಯ ನಾಯಕರು ವೇದಿಕೆಯ ಮೇಲೆ ಸದಸ್ಯತ್ವ ನೋಂದಣಿ ಅರ್ಜಿ ತುಂಬುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದ್ದರು. 

ಕಾಂಗ್ರೆಸ್ ಸದಸ್ಯತ್ವ ಅಭಿಯಾನ ಶುರು: ದಿಲ್ಲಿಯಿಂದ ದಿನೇಶ್ ಗುಂಡೂರಾವ್ ಮಾಹಿತಿ

ಈ ವೇಳೆ ಮಾತನಾಡಿದ ಸುರ್ಜೇವಾಲಾ, ದೇಶದ ಪಾಲಿಗೆ ಸಂವಿಧಾನವೇ ಧರ್ಮ. ಸಂವಿಧಾನಕ್ಕಿಂತ ದೊಡ್ಡ ಧರ್ಮ ಬೇರೊಂದಿಲ್ಲ. ಸಂವಿಧಾನ ಇಂದು ಅಪಾಯದಲ್ಲಿದ್ದು, ಅದರ ರಕ್ಷಣೆಗೆ ರಾಜ್ಯ ಹಾಗೂ ದೇಶದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಬೇಕು. ಇದಕ್ಕಾಗಿ ಸದಸ್ಯತ್ವ ನೋಂದಣಿಯನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದ್ದರು. 

50 ಲಕ್ಷ ಸದಸ್ಯತ್ವ:

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮಾತನಾಡಿ, 2023ರಲ್ಲಿ ಪಕ್ಷವನ್ನು ಶತಾಯ ಗತಾಯ ಅಧಿಕಾರಕ್ಕೆ ತರಲು ಕಾಂಗ್ರೆಸ್‌ ಪಕ್ಷ ಎಲ್ಲಾ ರೀತಿಯ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪಕ್ಷವನ್ನು ಗಟ್ಟಿಗೊಳಿಸಲು ರಾಜ್ಯಾದ್ಯಂತ ಆನ್‌ಲೈನ್‌ (Online) ಹಾಗೂ ಆಫ್‌ಲೈನ್‌ (Offline) ಮೂಲಕ 50 ಲಕ್ಷ ಮಂದಿಗೆ ಕಾಂಗ್ರೆಸ್‌ ಸದಸ್ಯತ್ವ ಮಾಡಿಸಬೇಕು. ಯುವ ಕಾಂಗ್ರೆಸ್‌, ಮಹಿಳಾ ಕಾಂಗ್ರೆಸ್‌ ಹಾಗೂ ಇನ್ನಿತರ ಮುಂಚೂಣಿ ಘಟಕಗಳಿಂದ ತಲಾ 1 ಲಕ್ಷ ಸದಸ್ಯತ್ವ ಮಾಡಿಸಬೇಕು. ಪ್ರತಿ ಮನೆ-ಮನೆಗೂ ಹೋಗಿ ಜನರ ಹೃದಯ ಗೆಲ್ಲಬೇಕು ಎಂದು ಕರೆ ನೀಡಿದರು. ಇದೇ ವೇಳೆ ನಕಲಿ ಸದಸ್ಯತ್ವ ಪತ್ತೆಯಾದರೆ ಸಂಬಂಧಪಟ್ಟಬ್ಲಾಕ್‌ ಅಧ್ಯಕ್ಷರನ್ನು ವಜಾಗೊಳಿಸುವುದಾಗಿ ಎಚ್ಚರಿಕೆ ನೀಡಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌