ಪಕ್ಷಾಂತರ ನಿಷೇಧ ಕಾಯ್ದೆಗೆ ಶಕ್ತಿ ತುಂಬಲು ಸಂಸತ್ತಲ್ಲಿ ಪ್ರಸ್ತಾಪ: ಮಲ್ಲಿಕಾರ್ಜುನ ಖರ್ಗೆ

Published : Jul 02, 2022, 12:30 AM IST
ಪಕ್ಷಾಂತರ ನಿಷೇಧ ಕಾಯ್ದೆಗೆ ಶಕ್ತಿ ತುಂಬಲು ಸಂಸತ್ತಲ್ಲಿ ಪ್ರಸ್ತಾಪ: ಮಲ್ಲಿಕಾರ್ಜುನ ಖರ್ಗೆ

ಸಾರಾಂಶ

*   ಮೋದಿಗೆ ಲೋಕಸಭೆಯಲ್ಲಿ 330ಕ್ಕಿಂತ ಹೆಚ್ಚು ಸ್ಥಾನ ಬಂದು, ಅನೇಕ ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದರೂ ತೃಪ್ತಿಯಿಲ್ಲ  *  ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್‌ ಸರ್ಕಾರ ಪತನಕ್ಕೆ ಬಿಜೆಪಿ ಕುತಂತ್ರವೇ ಕಾರಣ *  ಮಹಾರಾಷ್ಟ್ರದಲ್ಲಿ ನಮ್ಮ ಮೈತ್ರಿಕೂಟ ಜನರಿಂದ ಅಧಿಕಾರ ಕಳೆದುಕೊಂಡಿಲ್ಲ  

ಕಲಬುರಗಿ(ಜು.02):  ಪಕ್ಷಾಂತರ ನಿಷೇಧ ಕಾಯ್ದೆಯನ್ನು ಮತ್ತಷ್ಟು ಕಠಿಣಗೊಳಿಸಬೇಕಿದೆ. ಇದು ಎಲ್ಲ ರಾಜಕೀಯ ಪಕ್ಷಗಳು ಒಗ್ಗಟ್ಟಾಗಿ ಮಾಡಬೇಕಾದ ಕೆಲಸ. ಈ ವಿಚಾರದ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತುವುದಾಗಿ ರಾಜ್ಯಸಭೆಯಲ್ಲಿ ವಿರೋಧಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಶುಕ್ರವಾರ ಸುದ್ದಿಗಾರರ ಜತೆಗೆ ಮಾತನಾಡಿ, ಶಾಸಕರನ್ನು ಪಕ್ಷಾಂತರಗೊಳಿಸುವ ಕೆಲಸ ಯಾರೂ ಮಾಡಬಾರದು. ಇಂಥ ಕೆಲಸದಿಂದ ಇಂದಲ್ಲ, ನಾಳೆ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಹೊಡೆತ ಬೀಳುತ್ತದೆ ಎಂದು ತಿಳಿಸಿದರು.

ಅಗ್ನಿಪಥ್ ಕೈಬಿಡಲು ಆಗ್ರಹಿಸಿ ನಾಳೆ ಜಂತರ್ ಮಂತರ್ ಮುಂದೆ ಕಾಂಗ್ರೆಸ್ ಪ್ರತಿಭಟನೆ: ಮಲ್ಲಿಕಾರ್ಜುನ್ ಖರ್ಗೆ

ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್‌ ಸರ್ಕಾರ ಪತನಕ್ಕೆ ಬಿಜೆಪಿ ಕುತಂತ್ರವೇ ಕಾರಣ ಎಂಬುದು ಗುಟ್ಟೇನಲ್ಲ. ಮಹಾರಾಷ್ಟ್ರ ಒಂದೇ ಅಲ್ಲ, ದೇಶದ ಬಹುತೇಕ ಕಡೆ ಕುತಂತ್ರದಿಂದಲೇ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಮಹಾರಾಷ್ಟ್ರದಲ್ಲಿ ನಮ್ಮ ಮೈತ್ರಿಕೂಟ ಜನರಿಂದ ಅಧಿಕಾರ ಕಳೆದುಕೊಂಡಿಲ್ಲ. ಬಿಜೆಪಿ ಕುತಂತ್ರದಿಂದ ಅಧಿಕಾರ ಕಳೆದುಕೊಂಡಿದೆ. ಇದು ಪ್ರಜಾಪ್ರಭುತ್ವಕ್ಕೆ ಬಹುದೊಡ್ಡ ಹೊಡೆತ ಎಂದರು. ಮೋದಿಯವರಿಗೆ ಲೋಕಸಭೆಯಲ್ಲಿ 330ಕ್ಕಿಂತ ಹೆಚ್ಚು ಸ್ಥಾನ ಬಂದರೂ, ಅನೇಕ ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದರೂ ತೃಪ್ತಿಯಿಲ್ಲ ಎಂದು ತಿವಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ಧರಾಮಯ್ಯ ಮಾತು ಎತ್ತಿದ್ರೆ ಸಾಬ್ರು ಸಾಬ್ರು ಅಂತ ಜಪ ಮಾಡ್ತಾರೆ: ಶಾಸಕ ಯತ್ನಾಳ್ ವ್ಯಂಗ್ಯ!
ನಾನು ಹತ್ತು ಲಕ್ಷದ ವಾಚಾದ್ರೂ ಕಟ್ಟುತ್ತೇನೆ, ಅದು ನನ್ನ ಆಸ್ತಿ: ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆಶಿ