ಪ್ರಾಸಿಕ್ಯೂಷನ್‌: ಸಿಎಂ ಸಿದ್ದರಾಮಯ್ಯಗೆ ಇಂದು ಮತ್ತೆ ಟೆನ್ಷನ್‌, ಹೈಕೋರ್ಟ್‌ನಲ್ಲಿಂದು ವಿಚಾರಣೆ

Published : Aug 31, 2024, 07:13 AM IST
ಪ್ರಾಸಿಕ್ಯೂಷನ್‌: ಸಿಎಂ ಸಿದ್ದರಾಮಯ್ಯಗೆ ಇಂದು ಮತ್ತೆ ಟೆನ್ಷನ್‌, ಹೈಕೋರ್ಟ್‌ನಲ್ಲಿಂದು ವಿಚಾರಣೆ

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆಯು ಶನಿವಾರ ಮುಂದುವರೆಯಲಿದ್ದು, ಇಡೀ ರಾಜ್ಯದ ಗಮನ ಕಲಾಪದ ಮೇಲೆ ನೆಟ್ಟಿದೆ. 

ಬೆಂಗಳೂರು (ಆ.31): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆಯು ಶನಿವಾರ ಮುಂದುವರೆಯಲಿದ್ದು, ಇಡೀ ರಾಜ್ಯದ ಗಮನ ಕಲಾಪದ ಮೇಲೆ ನೆಟ್ಟಿದೆ. ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠದ ಮುಂದೆ ಗುರುವಾರ ಸಿಎಂ ಸಿದ್ದರಾಮಯ್ಯ ಪರ ವಕೀಲ ಅಭಿಷೇಕ್ ಮನು ಸಿಂಘೀವಾದ ಮಂಡಿಸಿ ಪ್ರಾಸಿಕ್ಯೂಷನ್ ಕ್ರಮವನ್ನು ರದ್ದುಪಡಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ಅದರೊಂದಿಗೆ ಸಿಂಘೀ ಅವರ ವಾದ ಪೂರ್ಣಗೊಂಡಿದ್ದು, ರಾಜ್ಯಪಾಲರ ಕಚೇರಿ ಹಾಗೂ ಖಾಸಗಿ ದೂರುದಾರರ ಪರ ವಕೀಲರು ಪ್ರತಿ ವಾದ ಮಂಡನೆಗೆ ಶನಿವಾರ ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 10.30ಕ್ಕೆ ಆರಂಭವಾಗ ಲಿರುವ ಕಲಾಪದಲ್ಲಿ ಪ್ರತಿವಾದಿಗಳ ವಾದ ಮಂಡನೆಯಾಗಲಿದೆ. ಪ್ರತಿವಾದಿಗಳ (ರಾಜ್ಯಪಾಲರ ಕಚೇರಿ ಹಾಗೂ ಖಾಸಗಿ ದೂರುದಾರರ ಪರ ವಕೀಲರು) ವಾದಕ್ಕೆ ಉತ್ತರ ನೀಡಲು ಅರ್ಜಿದಾರರ ಪರ ವಕೀಲರು ಕಾಲಾವಕಾಶ ಕೋರಿದರೆ ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡುವ ಸಾಧ್ಯತೆಯಿದೆ. ಒಂದೊಮ್ಮೆ ಅರ್ಜಿದಾರರ ಪರವಕೀಲರು ಹಾಗೂ ಪ್ರತಿವಾದಿಗಳ ವಾದ-ಪ್ರತಿವಾದ ಪ್ರಕ್ರಿಯೆ ಶನಿವಾರವೇ ಪೂರ್ಣಗೊಂಡರೆ ನ್ಯಾಯಮೂರ್ತಿಗಳು ತೀರ್ಪು ಕಾಯ್ದಿರಿಸಬಹುದು. 

ಆಗ, ಅಂತಿಮ ತೀರ್ಪು ಪ್ರಕಟವಾಗುವವರೆಗೆ ಪ್ರಾಸಿಕ್ಯೂ ಷನ್ ಆದೇಶ ಆಧರಿಸಿ ಆತುರದ ಕ್ರಮಕೈಗೊಳ್ಳಬಾರದು, ಪ್ರಕರಣ ಕುರಿತು ಸಿಬಿಐ ಅಥವಾ ಮತ್ಯಾವುದೇ ಸ್ವತಂತ್ರ ತನಿಖಾ ಸಂಸ್ಥೆಯತನಿಖೆಗೆ ಆದೇಶಿಸಬೇಕು ಎಂದು ಕೋರಿ ಸ್ನೇಹಮಯಿ ಕೃಷ್ಣ ದಾಖ ಲಿಸಿರುವ ದೂರಿನ ಕುರಿತು ಕಾಯ್ದಿರಿಸಿರುವ ತೀರ್ಪನ್ನು ಮುಂದೂಡಬೇಕು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸೂಚಿಸುವ ಮಧ್ಯಂತರ ಆದೇಶ ವಿಸ್ತರಿಸುವ ಸಾಧ್ಯತೆ ಇರುತ್ತದೆ. 

ಛತ್ರಪತಿ ಶಿವಾಜಿ ಮಹಾರಾಜ್‌ ಕಾಲಿಗೆ ತಲೆ ಇಟ್ಟು ಕ್ಷಮೆ ಕೋರುವೆ: ಪ್ರಧಾನಿ ಮೋದಿ

ಕುತೂಹಲ ಕೆರಳಿಸಿರುವ ಪ್ರಕರಣ: ಹೈಕೋರ್ಟ್ ವಿಚಾರಣೆಯ ಫಲಿತಾಂಶ ಏನಾಗಬಹುದು ಎಂಬ ತೀವ್ರ ಕುತೂಹಲ ರಾಜ್ಯ ಹಾಗೂ ರಾಷ್ಟ್ರ ರಾಜಕೀಯ ವಲಯ ದಲ್ಲಿ ದಿನೇದಿನೇ ಹೆಚ್ಚಾಗುತ್ತಿದೆ. ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠವು ಶನಿವಾರವೇ ವಿಚಾರಣೆ ಪೂರ್ಣಗೊ ಳಿಸಿ ತೀರ್ಪು ಕಾಯ್ದಿರಿಸುತ್ತದೆಯೇ ಅಥವಾ ವಾದ-ಪ್ರತಿ ವಾದ ಪೂರ್ಣಗೊಳ್ಳದೆ ಅರ್ಜಿ ವಿಚಾರಣೆ ಮುಂದೂಡಿಕೆ ಕಾಣುತ್ತದೆಯೇ ಎಂಬ ಕುತೂಹಲ ಮುಂದುವರೆದಿದೆ. ಒಂದೊಮ್ಮೆ ತೀರ್ಪು ಪ್ರಕಟಿಸಿದರೆ ಸಿದ್ದರಾಮಯ್ಯ ಅವರ ಪರ ಇರಲಿದೆಯೇ? ಅಥವಾ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿಯಲಿದೆಯೇ ಎಂಬ ಕುತೂಹಲವೂ ಸಾರ್ವಜನಿಕ ಹಾಗೂ ರಾಜಕೀಯವಲಯದಲ್ಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ರೈತರ ಬೆಳೆಗಳಿಗೆ ಮಾರುಕಟ್ಟೆ ಕಲ್ಪಿಸಲು 'ಅಂತಾರಾಷ್ಟ್ರೀಯ ಸ್ಯಾಂಡ್‌ವಿಚ್ ಸ್ನಾತಕೋತ್ತರ ಕೋರ್ಸ್': ಸಿಎಂ ಸಿದ್ದರಾಮಯ್ಯ
ಸಿದ್ಧರಾಮಯ್ಯ ಮಾತು ಎತ್ತಿದ್ರೆ ಸಾಬ್ರು ಸಾಬ್ರು ಅಂತ ಜಪ ಮಾಡ್ತಾರೆ: ಶಾಸಕ ಯತ್ನಾಳ್ ವ್ಯಂಗ್ಯ!