
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್(Nitin nabin) ಆಂಧ್ರಪ್ರದೇಶಕ್ಕೆ ಭೇಟಿ ನೀಡಿದ್ದಾಗ ಪಕ್ಷದ ನಾಯಕರೊಂದಿಗೆ ಊಟ ಮಾಡಿದ್ದರು. ಆದರೆ ಈ ಬಗ್ಗೆ ಛತ್ತೀಸ್ಗಢ ಕಾಂಗ್ರೆಸ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ತಪ್ಪು ಮಾಹಿತಿ ಹಂಚಿಕೊಂಡಿದ್ದು 'ಶ್ರಾವಣ ಮಾಸದಲ್ಲಿ ಬಿಜೆಪಿ ಅಧ್ಯಕ್ಷರು ಮಾಂಸಾಹಾರ ಸೇವಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪ ಮಾಡಿರುವುದು ಇದೀಗ ಕಾಂಗ್ರೆಸ್ ಬಿಜೆಪಿ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ.
ಬಿಜೆಪಿ ರಾಜ್ಯಸಭಾ ಸಂಸದ ಸುಧಾಂಶು ತ್ರಿವೇದಿ ಅವರು ಗುರುವಾರ ಛತ್ತೀಸ್ಗಢ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಜನರ ಬೆಂಬಲ ಗಳಿಸಲು ಸತತವಾಗಿ ಸೋಲುತ್ತಿರುವ ಕಾಂಗ್ರೆಸ್ ಪಕ್ಷ, ಈಗ ಸೋಲಿನ ಹತಾಶೆಯಿಂದ ತನ್ನ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಸುಳ್ಳು, ಬೆದರಿಕೆ, ಸಂಪೂರ್ಣ ಕಟ್ಟುಕಥೆಗಳನ್ನು ಪೋಸ್ಟ್ ಮಾಡುತ್ತಿದೆ. ನಬಿನ್ ಅವರ ಭೇಟಿಗೆ ಸಂಬಂಧಿಸಿದ ಈ ಪೋಸ್ಟ್ ಆಧಾರರಹಿತ, ಸುಳ್ಳು, ಖಂಡನೀಯ, ಜನರನ್ನು ದಾರಿ ತಪ್ಪಿಸುವಂತದ್ದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಷ್ಟೇ ಅಲ್ಲ, ಆಗಸ್ಟ್ 15ರ ಆಸುಪಾಸಿನಲ್ಲಿ ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕರು ಭಾರತದ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ 'ಅಸಂಬದ್ಧ ಮತ್ತು ದುರುದ್ದೇಶಪೂರಿತ ಪ್ರಚಾರ'ದಲ್ಲಿ ತೊಡಗಿದ್ದರು. ಬಿಜೆಪಿ ಕಾರ್ಯಕ್ರಮವೊಂದರ ವಿಡಿಯೋವನ್ನು ಸ್ವಾತಂತ್ರ್ಯ ದಿನಾಚರಣೆಯದ್ದು ಎಂದು ಕಾಂಗ್ರೆಸ್ನ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಗಳು ತಪ್ಪಾಗಿ ಬಿಂಬಿಸಿದ್ದವು. ಅಷ್ಟೇ ಅಲ್ಲದೆ, ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಪ್ರದರ್ಶಿಸಿದ್ದವು. ಕಾಂಗ್ರೆಸ್ನ ಈ ನಡವಳಿಕೆಯು ಅತ್ಯಂತ ಅಪಾಯಕಾರಿ ಮನಸ್ಥಿತಿಯನ್ನು ತೋರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪೋಸ್ಟ್ ಗೆ ಬಿಜೆಪಿಯ ತಿರುಗೇಟು
"ನಮ್ಮ ರಾಷ್ಟ್ರೀಯ ಅಧ್ಯಕ್ಷರ ಬಗ್ಗೆ ಇಂದು ಅವರು ಮಾಡಿರುವುದು ಸಂಪೂರ್ಣವಾಗಿ ಖಂಡನೀಯ. ಅವರು ಹರಡಲು ಯತ್ನಿಸಿದ ಸುಳ್ಳು ಮತ್ತು ದಾರಿತಪ್ಪಿಸುವ ಪ್ರಚಾರವನ್ನು ಭಾರತೀಯ ಜನತಾ ಪಕ್ಷ ಬಲವಾಗಿ ಖಂಡಿಸುತ್ತದೆ" ಎಂದು ಬಿಜೆಪಿ ನಾಯಕರು ಮತ್ತೊಮ್ಮೆ ಸ್ಪಷ್ಟಪಡಿಸಿದರು.
ನಿತಿನ್ ನಬಿನ್ ಅವರ ಆಂಧ್ರಪ್ರದೇಶ ಭೇಟಿಯ ಕ್ಲಿಪ್ ಒಂದನ್ನು ಹಂಚಿಕೊಂಡಿದ್ದ ಛತ್ತೀಸ್ಗಢ ಕಾಂಗ್ರೆಸ್, "ತುಟಿಯಲ್ಲಿ ಸನಾತನ, ಮಾತುಗಳಲ್ಲಿ ಸಂಸ್ಕೃತಿ... ಉಳಿದಂತೆ ಬಿಜೆಪಿಯ ನಡತೆ ಬಯಲಾಗಿದೆ" ಎಂದು ಎಕ್ಸ್ನಲ್ಲಿ ಪೋಸ್ಟ್ ಮಾಡಿತ್ತು. ಇದಕ್ಕೆ ತಿರುಗೇಟು ನೀಡಿದ ಬಿಜೆಪಿ, ನಬಿನ್ ಅವರು ವಿಶಾಖಪಟ್ಟಣದಲ್ಲಿ ಸಸ್ಯಾಹಾರಿ ದಕ್ಷಿಣ ಭಾರತದ ಊಟವನ್ನು ಸೇವಿಸಿದ್ದರು ಎಂದು ಹೇಳಿದೆ. "ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಶ್ರೀ ನಿತಿನ್ ಗಡ್ಕರಿ ಅವರು ಶುದ್ಧ ಸಸ್ಯಾಹಾರಿ ದಕ್ಷಿಣ ಭಾರತದ ಊಟವನ್ನು ಸೇವಿಸಿದ್ದಾರೆ... ಆದರೆ INDI ಮೈತ್ರಿಕೂಟವು ಇದು ಮಾಂಸಾಹಾರ ಎಂದು ಸುಳ್ಳು ಪ್ರಚಾರ ಮಾಡುತ್ತಿದೆ" ಎಂದು ಆಂಧ್ರಪ್ರದೇಶ ಬಿಜೆಪಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.
ನಿತಿನ್ ನಬಿನ್ ಆಂಧ್ರಪ್ರದೇಶ ಭೇಟಿ ನೀಡಿದಾಗ ನಡೆದಿದ್ದೇನು?
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಮಂಗಳವಾರ ರಾಜ್ಯಕ್ಕೆ ಭೇಟಿ ನೀಡಿದ್ದರು. ವಿಶಾಖಪಟ್ಟಣದಲ್ಲಿ ಪಕ್ಷದ ರಾಜ್ಯ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು ಮತ್ತು ಜಿಲ್ಲಾ ಉಸ್ತುವಾರಿಗಳೊಂದಿಗೆ ಸಭೆ ನಡೆಸಿದ್ದರು. ಆಂಧ್ರಪ್ರದೇಶದಲ್ಲಿ ಸಂಘಟನೆಯನ್ನು ಬಲಪಡಿಸುವುದು, ಪರಿಣಾಮಕಾರಿ ಸಮನ್ವಯ ಮತ್ತು ಸಾರ್ವಜನಿಕ ಸಂಪರ್ಕವನ್ನು ಖಚಿತಪಡಿಸಿಕೊಳ್ಳುವ ಬಗ್ಗೆ ಚರ್ಚೆಗಳು ನಡೆದವು.
(ಈ ಸುದ್ದಿಯ ಹೆಡ್ಲೈನ್ ಹೊರತುಪಡಿಸಿ, ಏಷ್ಯಾನೆಟ್ ನ್ಯೂಸಬಲ್ ಇಂಗ್ಲಿಷ್ ಸಿಬ್ಬಂದಿ ಈ ಲೇಖನವನ್ನು ಸಂಪಾದಿಸಿಲ್ಲ ಮತ್ತು ಇದನ್ನು ಸಿಂಡಿಕೇಟೆಡ್ ಫೀಡ್ನಿಂದ ಪ್ರಕಟಿಸಲಾಗಿದೆ.)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.