ನನ್ನ ಮೊದಲ ಲೋಕಸಭಾ ಚುನಾವಣೆಗೆ ಎದುರು ನೋಡುತ್ತಿದ್ದು ಸ್ಪರ್ಧೆಗೆ ಉತ್ಸುಕ: ರಾಜೀವ್‌ ಚಂದ್ರಶೇಖರ್‌

Published : Feb 17, 2024, 08:01 AM IST
ನನ್ನ ಮೊದಲ ಲೋಕಸಭಾ ಚುನಾವಣೆಗೆ ಎದುರು ನೋಡುತ್ತಿದ್ದು ಸ್ಪರ್ಧೆಗೆ ಉತ್ಸುಕ: ರಾಜೀವ್‌ ಚಂದ್ರಶೇಖರ್‌

ಸಾರಾಂಶ

ನನ್ನ ಮೊದಲ ಲೋಕಸಭಾ ಚುನಾವಣೆಗೆ ಎದುರು ನೋಡುತ್ತಿದ್ದು, ಸ್ಪರ್ಧಿಸಲು ಉತ್ಸುಕನಾಗಿದ್ದೇನೆ. ನಾನು ಸ್ಪರ್ಧಿಸುವ ಕ್ಷೇತ್ರ ಯಾವುದು ಎಂದು ಪಕ್ಷದ ವರಿಷ್ಠರು ನಿರ್ಧರಿಸಲಿದ್ದಾರೆ’ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್‌ ಚಂದ್ರಶೇಖರ್‌ ಹೇಳಿದ್ದಾರೆ

 ನವದೆಹಲಿ (ಫೆ.17): ‘ನನ್ನ ಮೊದಲ ಲೋಕಸಭಾ ಚುನಾವಣೆಗೆ ಎದುರು ನೋಡುತ್ತಿದ್ದು, ಸ್ಪರ್ಧಿಸಲು ಉತ್ಸುಕನಾಗಿದ್ದೇನೆ. ನಾನು ಸ್ಪರ್ಧಿಸುವ ಕ್ಷೇತ್ರ ಯಾವುದು ಎಂದು ಪಕ್ಷದ ವರಿಷ್ಠರು ನಿರ್ಧರಿಸಲಿದ್ದಾರೆ’ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್‌ ಚಂದ್ರಶೇಖರ್‌ ಹೇಳಿದ್ದಾರೆ.

ಇತ್ತೀಚೆಗೆ ಕರ್ನಾಟಕ ರಾಜ್ಯಸಭಾ ಸ್ಥಾನದಿಂದ ಅವರು ನಿವೃತ್ತರಾಗಿದ್ದರು. ಆ ಬಳಿಕ ಅವರು ಬೆಂಗಳೂರು ಅಥವಾ ಕೇರಳದಿಂದ ಲೋಕಸಭೆಗೆ ಸ್ಪರ್ಧಿಸಬಹುದು ಎಂಬ ಸುದ್ದಿ ಹರಿದಾಡುತ್ತಿವೆ.

ಶುಕ್ರವಾರ ಪಿಟಿಐ ಸುದ್ದಿಸಂಸ್ಥೆಗೆ ಸಂದರ್ಶನ ನೀಡಿದಾಗ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ‘ನನ್ನ ರಾಜಕೀಯ ಜೀವನದ ಇನ್ನೊಂದು ರೋಚಕ ಹಂತ ನೋಡಲು ಕಾತರನಾಗಿದ್ದೇನೆ. ಲೋಕಸಭಾ ಸದಸ್ಯರಾಗಲು ರಾಜಕಾರಣಿಯು ತಳಮಟ್ಟದ ಅನುಭವ ಹೊಂದಿರಬೇಕು. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಹಾಗೂ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅಧೀನದಲ್ಲಿ ನನಗೆ ಕೆಲಸ ಮಾಡಲು ಸಾಧ್ಯವಾಗಿದ್ದು ನನ್ನ ಪಾಲಿನ ಅದೃಷ್ಟ. ಹೀಗಾಗಿ ನಾನು ಲೋಕಸಭೆಗೆ ಸ್ಪರ್ಧಿಸಲು ಅರ್ಹನಾಗಿದ್ದೇನೆ’ ಎಂದರು.

ಇನ್ನು ತಾವು ಬೆಂಗಳೂರಿನಿಂದ ಅಥವಾ ಕೇರಳದ ತಿರುವನಂತಪುರದಿಂದ (ಕಾಂಗ್ರೆಸ್‌ನ ಶಶಿ ತರೂರ್‌ ವಿರುದ್ಧ) ಸ್ಪರ್ಧಿಸಬಹುದು ಎಂಬ ವರದಿಗಳನ್ನು ನಿರಾಕರಿಸಿದ ಅವರು, ‘ಅವು ಕೇವಲ ಊಹಾಪೋಹ. ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದನ್ನು ಪಕ್ಷದ ನಾಯಕತ್ವ ನಿರ್ಧರಿಸಲಿದೆ. ಅಲ್ಲಿ ನಾನು ಹೋರಾಡಿ ಗೆಲ್ಲುತ್ತೇನೆ’ ಎಂದರು.

‘ಲೋಕಸಭೆ ಸದಸ್ಯನಾಗುವುದು ಸುಲಭವಲ್ಲ. ಲೋಕಸಭಾ ಸದಸ್ಯರಾಗಲು ನೀವು ಅತ್ಯಂತ ತಳಮಟ್ಟದ ರಾಜಕಾರಣಿಯಾಗಿರಬೇಕು, ಜನರೊಂದಿಗೆ ಸಂಪರ್ಕ ಹೊಂದಿರಬೇಕು. ಈಗಿನ ಮಾಹಿತಿ ಮತ್ತು ಸಾಮಾಜಿಕ ಮಾಧ್ಯಮದ ಈ ಆಧುನಿಕ ಜಗತ್ತಿನಲ್ಲಿ ಅತ್ಯಂತ ಜವಾಬ್ದಾರಿಯುತ ರಾಜಕಾರಣಿಗಳಾಗಿರಬೇಕು. ನಾನು ಅದನ್ನು ಮಾಡಲು ಸಮರ್ಥನಾಗಿದ್ದೇನೆ ಎಂದು ನನ್ನ ನಾಯಕತ್ವ ಭಾವಿಸಿದೆ ಎಂದು ನನಗೆ ಖುಷಿಯಾಗಿದೆ. ಹಾಗಾಗಿ ನಾನು ಅದನ್ನು ಎದುರು ನೋಡುತ್ತಿದ್ದೇನೆ’ ಎಂದು ಅವರು ಹೇಳಿದರು.

ಕೇರಳ ಸಿಎಂ ಪುತ್ರಿಯ 135 ಕೋಟಿ ವಂಚನೆ ಕೇಸ್, ವೀಣಾ ವಿಜಯನ್ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್

ರಾಜೀವ್‌ ಅವರು ಮೂಲ ಕೇರಳದವರು. ಆದರೆ ಕಳೆದ ಕೆಲವು ದಶಕಗಳಿಂದ ಕರ್ನಾಟಕದಲ್ಲಿ ನೆಲೆಸಿದ್ದಾರೆ. ಉದ್ಯಮಿಯಾಗಿರುವ ಅವರು, 2006, 2012 ಹಾಗೂ 2018ರಿಂದ ಕರ್ನಾಟಕದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌