
ಬೆಂಗಳೂರು, (ಜು.27): ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ.
ಇಂದು (ಮಂಗಳವಾರ) ನಡೆದ ಶಾಸಕಾಂಗ ಸಭೆಯಲ್ಲಿ ಬಸವರಾಜ್ ಬೊಮ್ಮಾಯಿ ಅವರನ್ನ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದ್ದು, ಇದೇ ವೇಳೆ ಮೂವರು ಉಪಮುಖ್ಯಮಂತ್ರಿಗಳ ಹೆಸರುಗಳನ್ನು ಸಹ ಘೋಷಣೆ ಮಾಡಲಾಗಿದೆ.
ನಾಯಕತ್ವ ಬದಲಾವಣೆ ಮಧ್ಯೆ ಶ್ರೀರಾಮುಲು ಕನಸು ನನಸಾಗುವ ಸಮಯ ಬಂತಾ?
ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಮೂವರಿಗೆ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಮಾಡಲು ನಿರ್ಧರಿಸಿದ್ದು, ಲಿಂಗಾಯಿತ ಸಿಎಂ ಆಗಿರುವುದರಿಂದ ಒಕ್ಕಲಿಗರು, ದಲಿತರು ಮತ್ತು ವಾಲ್ಮೀಕಿ ಸಮುದಾಯಕ್ಕೆ ಉಪಮುಖ್ಯಮಂತ್ರಿ ಸ್ಥಾನ ಘೋಷಣೆ ಮಾಡಲಾಗಿದೆ.
ಗೋವಿಂದ ಕಾರಜೋಳ, ಅಶೋಕ್, ಬಿ. ಶ್ರೀರಾಮುಲುಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲು ತೀರ್ಮಾನಿಸಲಾಗಿದೆ. ಈ ಮೂವರು ಸಹ ಬಿಎಸ್ ಯಡಿಯೂರಪ್ಪನವರ ಆಪ್ತರು ಕೂಡ. ಈ ಮೂಲಕ ಯಡಿಯೂರಪ್ಪ ವಿರೋಧಿಗಳ ಎದುರು ಮೇಲುಗೈ ಸಾಧಿಸಿದ್ದಾರೆ.
ಆರ್. ಅಶೋಕ್ ಯಡಿಯೂರಪ್ಪ ಸಂಪುಟದಲ್ಲಿ ಕಂದಾಯ ಸಚಿವರಾಗಿದ್ರೆ, ಶ್ರೀರಾಮುಲು ಅವರು ಸಮಾಜಿ ಕಲ್ಯಾಣ ಸಚಿವರಾಗಿದ್ರು. ಇನ್ನು ಗೋವಿಂದ ಕಾರಜೋಳ ಡಿಸಿಎಂ ಆಗಿದ್ದರು.
ಶ್ರೀರಾಮುಲು ಅವರಿಗೆ ಈ ಹಿಂದೆಯೇ ಹೈಕಮಾಂಡ್ ಉಪಮುಖ್ಯಮಂತ್ರಿ ಹುದ್ದೆ ನೀಡುವುದಾಗಿ ಭರವಸೆ ನೀಡಿತ್ತು. ಆದ್ರೆ, ಎರಡು ವರ್ಷ ಆದರೂ ಅದು ಈಡೇರಿರಲಿಲ್ಲ. ಆದ್ರೆ, ಇದೀಗ ಕಾಲ ಕೂಡಿಬಂದಿದ್ದು, ಶ್ರೀರಾಮುಲು ಕನಸು ನನಸಾದಂತಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.