ನಿವೃತ್ತಿ ನಾಟಕ ಆಡ್ತಾ ಕಳೆದ ಹತ್ತು ವರ್ಷಗಳಿಂದ ಸಿದ್ದರಾಮಯ್ಯ ಎಲೆಕ್ಷನ್‌ಗೆ ನಿಲ್ತಾನೆ ಇದ್ದಾರೆ: ಆರ್ ಅಶೋಕ್

Kannadaprabha News   | Kannada Prabha
Published : Jul 28, 2026, 10:20 AM IST
R Ashok slams former cm siddaramaiah over retirement from election politics statement

ಸಾರಾಂಶ

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎನ್ನುವುದು ಹಿರಿಯ ನಾಯಕರಿಗೆ ಬೆದರಿಕೆ ಹಾಕುವ ನಾಟಕ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಸಿ.ಟಿ. ರವಿ ಅವರ ಮೇಲೆ ಎಫ್‌ಐಆರ್‌ ಮಾಡುವ ಪೊಲೀಸರು, ಹಿಂದೂ ಧರ್ಮವನ್ನು ನಿಂದಿಸುವವರ ಮೇಲೆ ಏನು ಕ್ರಮ ಜರುಗಿಸಿದ್ದಾರೆ?

 ಬೆಂಗಳೂರು (ಜು.28): ಹಿರಿಯ ನಾಯಕರಿಗೆ ಬೆದರಿಕೆ ಹಾಕುವ ಉದ್ದೇಶದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂಬ ನಾಟಕ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಹತ್ತು ವರ್ಷಗಳಿಂದ ರಾಜಕೀಯ ನಿವೃತ್ತಿ ಎನ್ನುತ್ತಿದ್ದಾರೆ. ಚುನಾವಣೆ ಸಮೀಪ ಬಂದಾಗ ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ. ಹಿರಿಯ ನಾಯಕರಿಗೆ ಬೆದರಿಕೆ ಹಾಕಲು ಅವರು ಈ ರೀತಿ ನಾಟಕ ಮಾಡುತ್ತಿದ್ದಾರೆ. ಯಾವುದೇ ನಾಯಕರು ಶಾಶ್ವತವಲ್ಲ. ಯಾವ ನಾಯಕರು ಹೋದರೂ ಮತ್ತೊಬ್ಬರು ಬೆಳೆಯುತ್ತಾರೆ ಎಂದರು.

ಬಿಜೆಪಿ ಮುಖಂಡರ ಮೇಲೆ ಕೇಸ್‌:

ಚುನಾವಣೆಗೆ ಸಮೀಪವಾಗುವಾಗ ಬಿಜೆಪಿ ಮುಖಂಡರ ಮೇಲೆ ಪ್ರಕರಣ ದಾಖಲಿಸಲಾಗುತ್ತಿದೆ. ಪ್ರಕಾಶ್‌ ರಾಜ್‌, ಭಗವಾನ್‌ ಮೊದಲಾದವರು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿದರೂ ಅವರ ವಿರುದ್ಧ ಕ್ರಮ ಇರುವುದಿಲ್ಲ. ನೀಟ್‌ ಪ್ರತಿಭಟನೆ ಸಮಯದಲ್ಲಿ ಕೆಲವರು ಪೋಸ್ಟರ್‌ಗಳನ್ನು ಹಿಡಿದು ಪೊಲೀಸರಿಗೆ ಸವಾಲು ಹಾಕಿದ್ದರು. ಅವರ ವಿರುದ್ಧ ಕ್ರಮ ಕೈಗೊಳ್ಳದ ಪೊಲೀಸರು ಸಿ.ಟಿ.ರವಿ ವಿರುದ್ಧ ಮಾತ್ರ ಎಫ್‌ಐಆರ್‌ ಮಾಡಿದ್ದಾರೆ. ಅವರ ಹೇಳಿಕೆಯನ್ನು ತಿರುಚಲಾಗಿದೆ. ಇದರ ವಿರುದ್ಧ ಚಿಕ್ಕಮಗಳೂರಿನಲ್ಲಿ ಹೋರಾಟ ಮಾಡುವುದಾಗಿ ಅಶೋಕ್‌ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

30 ವಿದ್ಯಾರ್ಥಿಗಳ ಸಾವಿಗೆ ಸಚಿವ ಶಾ ನೇರ ಹೊಣೆ, ಕೆಪಿಎಸ್‌ಸಿ ಅಕ್ರಮಕ್ಕೆ ಯಾರು ಹೊಣೆ? ಮಧು ಬಂಗಾರಪ್ಪ ಹೇಳಿದ್ದೇನು?
ಸಂಪುಟ ವಿಸ್ತರಣೆಗೆ ಕಡೆಗೂ ಮುಹೂರ್ತ ಫಿಕ್ಸ್: ಇಂದು ರಾತ್ರಿ 8ಕ್ಕೆ ರಾಹುಲ್ ಜೊತೆ ರಾಜ್ಯ ನಾಯಕರ ಸಭೆ, 20ರಲ್ಲಿ 18 ಸ್ಥಾನ ಯಾರಿಗೆ?