ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ: ಸಿಎಂ ಪರ ಸಹಿ ಸಂಗ್ರಹಕ್ಕೆ ಮುಂದಾದವರಿಗೆ ಖಡಕ್ ಎಚ್ಚರಿಕೆ

Published : Jun 07, 2021, 04:52 PM ISTUpdated : Jun 07, 2021, 05:02 PM IST
ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ: ಸಿಎಂ ಪರ ಸಹಿ ಸಂಗ್ರಹಕ್ಕೆ ಮುಂದಾದವರಿಗೆ ಖಡಕ್ ಎಚ್ಚರಿಕೆ

ಸಾರಾಂಶ

* ರಾಜ್ಯ ಬಿಜೆಪಿ ಭುಗಿಲೆದ್ದ ಅಸಮಾಧಾನ * ಸಿಎಂ ಪರ ಸಹಿ ಸಂಗ್ರಹಕ್ಕೆ ಮುಂದಾಗಿದ್ದ ರೇಣುಕಾಚಾರ್ಯಗೆ ವಾರ್ನಿಂಗ್ * ಖಡಕ್ ಎಚ್ಚರಿಕೆ ಕೊಟ್ಟ ಸಚಿವ ಆರ್. ಅಶೋಕ್

ಬೆಂಗಳೂರು, (ಜೂನ್.07): ಬಿ.ಎಸ್.ಯಡಿಯೂರಪ್ಪ ಪರ ಸಹಿ ಸಂಗ್ರಹಿಸಿರುವುದಾಗಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿಕೆ ಕೊಟ್ಟಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಆರ್. ಅಶೋಕ್,  ಯಾರೂ ಪರ, ವಿರುದ್ಧ ಸಹಿ ಸಂಗ್ರಹ ಮಾಡಬಾರದು. ಅನಗತ್ಯ ಗೊಂದಲ ಸೃಷ್ಟಿಸಿದರೆ ಕ್ರಮ ನಿಶ್ಚಿತ ಎಂದ ರೇಣುಕಾಚಾರ್ಯಗೆ ಖಡಕ್ ಎಚ್ಚರಿಕೆ ಕೊಟ್ಟರು.

ಯಡಿಯೂರಪ್ಪ ಪರ ಸಹಿ ಸಂಗ್ರಹ: ಬಿಜೆಪಿಯಲ್ಲಿ ಭುಗಿಲೆದ್ದ ಆಕ್ರೋಶ

ಯಾರೂ ಪರ, ವಿರೋಧದ ಹೇಳಿಕೆಗಳನ್ನ ನೀಡಬಾರದು. ಸಹಿ ಸಂಗ್ರಹವನ್ನೂ ಮಾಡಬಾರದು. ಪರ, ವಿರುದ್ಧ ಸಹಿ ಸಂಗ್ರಹವನ್ನೂ ಮಾಡಬಾರದು. ಸಿಎಂ ಬಗ್ಗೆಯೂ ಯಾವುದೇ ಹೇಳಿಕೆಗಳನ್ನ ನೀಡಬಾರದು. ಅನಗತ್ಯ ಗೊಂದಲ ಸೃಷ್ಟಿಸಿದರೆ ಕ್ರಮ ನಿಶ್ಚಿತ. ಈ ಸಂಬಂಧ ಸಮಿತಿಯನ್ನ ಕೂಡ ರಚಿಸಲಾಗಿದೆ ಎಂದು ಎಚ್ಚರಿಸಿದರು.

ಒಂದು ಬಾರಿ ಸಭೆಯನ್ನ ಕೂಡ ನಡೆಸಲಾಗಿದೆ. ನಮ್ಮ ಪಕ್ಷದ ರಾಜ್ಯದ ಅಧ್ಯಕ್ಷರು ಸಮಿತಿ ರಚನೆ ಮಾಡಿದ್ದಾರೆ. ಸಮಿತಿ ಮೂಲಕ ಗೊಂದಲಕಾರಿ ಹೇಳಿಕೆ ತಡೆಯುವಂಥ ಕೆಲಸ ಮಾಡಲಾಗುತ್ತೆ. ಪರವಾಗಿ, ವಿರುದ್ಧವಾಗಿ ಯಾರೂ ಮಾತಾಡಬಾರದು. ಸಿಎಂ ವಿರುದ್ಧ ಅನಗತ್ಯವಾಗಿ ಹೇಳಿಕೆ ನೀಡಬಾರದು. ಮುಂದೆ ಬಿಜೆಪಿಗೆ ಬೂಸ್ಟ್ ಆಗುವ ರೀತಿಯಲ್ಲಿ ಸಮಿತಿ ರಚಿಸಲಾಗಿದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌