ಸ್ವಾಮೀಜಿ ಹೆಗಲ ಮೇಲೆ ಆರ್.ಅಶೋಕ್ ಕೈ; ಕಾಂಗ್ರೆಸ್-ಬಿಜೆಪಿ ನಡುವೆ ಟ್ವೀಟ್‌ ವಾರ್!

Published : Nov 11, 2022, 10:56 PM ISTUpdated : Nov 11, 2022, 11:19 PM IST
ಸ್ವಾಮೀಜಿ ಹೆಗಲ ಮೇಲೆ ಆರ್.ಅಶೋಕ್ ಕೈ; ಕಾಂಗ್ರೆಸ್-ಬಿಜೆಪಿ ನಡುವೆ ಟ್ವೀಟ್‌ ವಾರ್!

ಸಾರಾಂಶ

ಕೆಂಪೇಗೌಡರ ಪ್ರತಿಮೆ ಅನಾವರಣ ಸಮಯದಲ್ಲಿ ಫೋಟೊ ತೆಗೆಯುವ ವೇಳೆ ನಿರ್ಮಲಾನಂದ ಶ್ರೀಗಳ ಹೆಗಲ ಮೇಲೆ ಕೈ ಹಾಕಿ ಫೋಟೊಗೆ ಪೋಸ್ ಕೊಟ್ಟಿರುವ ಕಂದಾಯ ಆರ್.ಅಶೋಕ್. ಈ ಫೋಟೊ ಎಲ್ಲೆಡೆ ವೈರಲ್ ಆಗಿದೆ.  ಈ ಫೋಟೊವನ್ನು ಬಳಸಿಕೊಂಡು ಟ್ವಿಟ್ ಮಾಡುವ ಮೂಲಕ ಆರ್.ಅಶೋಕ್ ವಿರುದ್ಧ ಕರ್ನಾಟಕ ಕಾಂಗ್ರೆಸ್ ಹರಿಹಾಯ್ದಿದಿದ್ದಾರೆ.

ಬೆಂಗಳೂರು (ನ.11) : ಮಠಾಧೀಶರು ಸ್ವಾಮೀಜಿಗಳಿಗೆ ಅವರದ್ದೇ ಆದ ಗೌರವವಿರುತ್ತದೆ. ಘನತೆ ಇರುತ್ತದೆ. ಹೆಗಲ ಮೇಲೆ ಕೈ ಹಾಕುವಷ್ಟು ಆದಿಚುಂಚನಗಿರಿ ಶ್ರೀಗಳು ಸಚಿವ ಆರ್.ಅಶೋಕ್ ಅವರಿಗೆ ಸದರ ಎನಿಸಿದ್ದಾರೆಯೇ? ಇದೇ ರೀತಿ ಮೋದಿ ಹೆಗಲಿಗೆ ಕೈ ಹಾಕುವ ಧೈರ್ಯವಿದೆಯೇ? ನಿರ್ಮಾಲಾನಂದಶ್ರೀಗಳ ಹೆಗಲ ಮೇಲೆ ಕೈಹಾಕಿ ಅವಮಾನ ಮಾಡಿರುವ ಹಿನ್ನೆಲೆ ಸಚಿವ ಆರ್.ಅಶೋಕ್ ವಿರುದ್ಧ ಕಾಂಗ್ರೆಸ್ ಟ್ವೀಟ್ ಮೂಲಕ ತರಾಟೆಗೆ ತೆಗೆದುಕೊಂಡಿದೆ.

ಧರ್ಮ, ಸಂಸ್ಕೃತಿ ಬಗ್ಗೆ ಮಾತಾಡುವ ಬಿಜೆಪಿ ನಾಯಕರಿಗೆ ಕನಿಷ್ಠ ಸಂಸ್ಕಾರದ ಜ್ಞಾನವಿಲ್ಲ. ಬರೀ ಮಾತಿನಲ್ಲೇ ದೇಶ, ಸಂಸ್ಕೃತಿ ಬಗ್ಗೆ ಮಾತನಾಡುವ ಇವರು. ವಾಸ್ತವವಾಗಿ ಅದ್ಯಾವುದನ್ನೂ ಪಾಲಿಸುವುದಿಲ್ಲ ಎಂಬುದು ಈ ಘಟನೆ ಸಾಕ್ಷಿ ಎಂದು ಕಿಡಿ ಕಾರಿದ್ದಾರೆ.

ಕೆಂಪೇಗೌಡರ ಪ್ರತಿಮೆ ಅನಾವರಣ ಸಮಯದಲ್ಲಿ ಫೋಟೊ ತೆಗೆಯುವ ವೇಳೆ ನಿರ್ಮಲಾನಂದ ಶ್ರೀಗಳ ಹೆಗಲ ಮೇಲೆ ಕೈ ಹಾಕಿ ಫೋಟೊಗೆ ಪೋಸ್ ಕೊಟ್ಟಿರುವ ಕಂದಾಯ ಆರ್.ಅಶೋಕ್. ಈ ಫೋಟೊ ಎಲ್ಲೆಡೆ ವೈರಲ್ ಆಗಿದೆ.  ಈ ಫೋಟೊವನ್ನು ಬಳಸಿಕೊಂಡು ಟ್ವಿಟ್ ಮಾಡುವ ಮೂಲಕ ಆರ್.ಅಶೋಕ್ ವಿರುದ್ಧ ಕರ್ನಾಟಕ ಕಾಂಗ್ರೆಸ್ ಹಾರಿಹಾಯ್ದಿದೆ.

ಬಿಜೆಪಿ ಕಾಂಗ್ರೆಸ್ ನಡುವೆ ಟ್ವಿಟ್ ವಾರ್: 

ಕರ್ನಾಟಕ ಕಾಂಗ್ರೆಸ್ ಆರ್.ಅಶೋಕ್ ವಿರುದ್ಧ ಟ್ವೀಟ್ ಮಾಡ್ತಿದ್ದಂತೆ, ರಾಹುಲ್ ಗಾಂಧಿ, ಉಗ್ರಪ್ಪನ ಫೋಟೋ ವೈರಲ್ ಮಾಡಿ ಬಿಜೆಪಿ ತಿರುಗೇಟು ನೀಡಿದೆ.

ಆರ್‌.ಅಶೋಕ್ ಫೋಟೊ ವೈರಲ್ ಬೆನ್ನಲ್ಲೇ ಕಾಂಗ್ರೆಸ್ ನ ಮಾಜಿ ಸಂಸದ ಉಗ್ರಪ್ಪ ಈ ಹಿಂದೆ ಮೀಸಲಾತಿ ಹೋರಾಟ ಕಾರ್ಯಕ್ರಮದಲ್ಲಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ ಹೆಗಲ ಮೇಲೆ ಕೈ ಇಟ್ಟು ಮಾತನಾಡುತ್ತಿರುವ ಫೋಟೊ ಹಾಕಿ ಬಿಜೆಪಿ ತಿರುಗೇಟು ನೀಡಿದೆ.

ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡಿದ್ದ ವೇಳೆ ಚಿತ್ರದುರ್ಗ ಮಠಾಧೀಶರೊಂದಿಗೆ ಕುರ್ಚಿಯಲ್ಲಿ ಕುಳಿತಿದ್ದ ಫೋಟೊ ಕೂಡ ವೈರಲ್ ಮಾಡಿರುವ ಬಿಜೆಪಿ ಬೆಂಬಲಿಗರು, ಆ ಫೋಟೊದಲ್ಲಿ ಕೆಲವು ಸ್ವಾಮೀಜಿಗಳು ರಾಹುಲ್ ಗಾಂಧಿಯ ಕಾಲಿನ ಕೆಳಗೆ ಕುಳಿತಿದ್ದಾರೆ. "ಇದು ನಿಮ್ಮ ಯುವಕ ರಾಹುಲ್ ಗಾಂಧಿ ಸ್ವಾಮೀಜಿಗಳಿಗೆ ಮಾಡಿದ ಅವಮಾನ ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ. 

ಕಾಂಗ್ರೆಸ್‌ಗೆ ಮಾಡುವುದಕ್ಕೆ ಏನೂ ಕೆಲಸವಿಲ್ಲದೆ ಖಾಲಿ ಕುಳಿತಿದೆ. ಹೀಗಾಗಿ ಇಂಥ ಕ್ಷುಲ್ಲಕ ವಿಚಾರಗಳನ್ನಿಟ್ಟುಕೊಂಡು ರಾಜಕೀಯ ಮಾಡ್ತಿದೆ ಎಂದಿರುವ ಬಿಜೆಪಿ ಬೆಂಬಲಿಗರು, ಸ್ವಲ್ಪ ತಾಳಿ ಮುಂದೆಯೂ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತೆ ಕಾಂಗ್ರೆಸಿಗರೇ ಎಂದು ಕಿಚಾಯಿಸಿದ್ದಾರೆ. ಒಟ್ಟಿನಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಟ್ವಿಟ್ ವಾರ್ ಇಲ್ಲಿಗೆ ನಿಲ್ಲುವಂತೆ ಕಾಣುತ್ತಿಲ್ಲ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Karnataka News Live: ಚಿಕ್ಕಮಗಳೂರು ರೆಸಾರ್ಟ್‌ನಲ್ಲಿ ನಾಗಾಲ್ಯಾಂಡ್ ಯುವತಿ ದುರಂತ ಅಂತ್ಯ, ಇಬ್ಬರ ಮೇಲೆ ಅನುಮಾನ
ಬಡವ್ರಿಗೆ ಫ್ರಿಜ್‌, ಗಂಡಸ್ರಿಗೂ ಫ್ರೀ ಬಸ್‌ : ಅಣ್ಣಾ ಗ್ಯಾರಂಟಿ!