ರಾಜ್ಯದಲ್ಲಿ ಸೋತಿರುವ ಲೋಕಸಭೆ ರಿಸಲ್ಟ್‌ ಬಗ್ಗೆ ವರದಿ ಕೇಳಿದ ರಾಹುಲ್‌ ಗಾಂಧಿ

Published : Jun 08, 2024, 05:03 AM IST
ರಾಜ್ಯದಲ್ಲಿ ಸೋತಿರುವ ಲೋಕಸಭೆ ರಿಸಲ್ಟ್‌ ಬಗ್ಗೆ ವರದಿ ಕೇಳಿದ ರಾಹುಲ್‌ ಗಾಂಧಿ

ಸಾರಾಂಶ

ರಾಜ್ಯದಲ್ಲಿ ಸೋತಿರುವ ಲೋಕಸಭೆ ಸ್ಥಾನಗಳ ಬಗ್ಗೆ ಎಲ್ಲಾ ಸಚಿವರ ಮೇಲೆ ಹೊಣೆಗಾರಿಕೆ ಇರಬೇಕು ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ. 

ಬೆಂಗಳೂರು (ಜೂ.08): ರಾಜ್ಯದಲ್ಲಿ ಸೋತಿರುವ ಲೋಕಸಭೆ ಸ್ಥಾನಗಳ ಬಗ್ಗೆ ಎಲ್ಲಾ ಸಚಿವರ ಮೇಲೆ ಹೊಣೆಗಾರಿಕೆ ಇರಬೇಕು ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ. ಜತೆಗೆ ಚುನಾವಣಾ ಫಲಿತಾಂಶದ ಬಗ್ಗೆ ವರದಿ ಕೇಳಿದ್ದು, ಎಲ್ಲಾ ನಾಯಕರ ಜತೆ ಚರ್ಚೆ ಮಾಡಿ ಸದ್ಯದಲ್ಲೇ ಹೈಕಮಾಂಡ್‌ಗೆ ವರದಿ ಸಲ್ಲಿಸುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಬೆಂಗಳೂರಿನಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಸಚಿವರು ಹಾಗೂ ನೂತನ ಸಂಸದರು, ಪರಾಜಿತ ಅಭ್ಯರ್ಥಿಗಳೊಂದಿಗೆ ಸಭೆ ನಡೆಸಿದ ಬಳಿಕ ಶಿವಕುಮಾರ್‌ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಫಲಿತಾಂಶದ ಬಗ್ಗೆ, ಸೋಲಿನ ಬಗ್ಗೆ ಎಲ್ಲ ಸಚಿವರ ಮೇಲೆ ಹೊಣೆಗಾರಿಕೆ ಇರಬೇಕು. ಎಲ್ಲೆಲ್ಲಿ ಲೋಪವಾಗಿದೆಯೋ ಸರಿಪಡಿಸಿಕೊಳ್ಳಬೇಕು. ಎಲ್ಲ ನಾಯಕರೊಂದಿಗೆ ಚರ್ಚಿಸಿ ಮುಂದಿನ ಕಾರ್ಯ ಯೋಜನೆ ರೂಪಿಸಲು ಸಲಹೆ ನೀಡಿದ್ದಾರೆ ಎಂದರು.

ಎಲ್ಲರ ಮೇಲೂ ಹೊಣೆಗಾರಿಕೆ ಇರಬೇಕು: ಕೆಲ ಸಚಿವರನ್ನು ಭೇಟಿ ಮಾಡಿದ ರಾಹುಲ್ ಗಾಂಧಿ ಅವರು, ಸಚಿವರ ಕ್ಷೇತ್ರದಲ್ಲಿ ಚುನಾವಣೆ ಫಲಿತಾಂಶ ಏನಾಯಿತು ಎಂದು ಚರ್ಚೆ ಮಾಡಿದರು. ರಾಜ್ಯದಲ್ಲಿ ಇನ್ನೂ 5-6 ಸೀಟು ಗೆಲ್ಲುವ ನಿರೀಕ್ಷೆ ಇತ್ತು. ಎಲ್ಲೆಲ್ಲಿ ಹಿನ್ನಡೆಯಾಗಿದೆಯೋ ಅಲ್ಲಿ ಸರಿಪಡಿಸಿಕೊಳ್ಳಬೇಕು. ಮತ್ತೆ ಜನರ ಬಳಿಗೆ ಹೋಗಬೇಕು. ಎಲ್ಲರ ಮೇಲೂ ಹೊಣೆಗಾರಿಕೆ ಇರಬೇಕು ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ ಎಂದು ಶಿವಕುಮಾರ್‌ ತಿಳಿಸಿದರು.

ಮಂತ್ರಿಗಿರಿಗಾಗಿ ಬಿಜೆಪಿ ಮೇಲೆ ಒತ್ತಡ ಹೇರಿಲ್ಲ: ಎಚ್‌.ಡಿ.ಕುಮಾರಸ್ವಾಮಿ

ಅಶ್ವತ್ಥನಾರಾಯಣ್‌ಗೆ ತಿರುಗೇಟು: ರಾಹುಲ್ ಗಾಂಧಿ ಮುಖ್ಯಮಂತ್ರಿಗಳ ರಾಜೀನಾಮೆ ಪಡೆಯಲು ಬಂದಿದ್ದಾರಾ ಎಂಬ ಬಿಜೆಪಿ ಶಾಸಕ ಅಶ್ವತ್ಥ್ ನಾರಾಯಣ ಅವರ ಹೇಳಿಕೆಗೆ, ‘ಮೊದಲು ಅವರ ಪಕ್ಷದ ಬಗ್ಗೆ ಮಾತನಾಡಲಿ. ನಿಗಮ ಮಂಡಳಿಗಳಲ್ಲಿ ಹಣ ದುರುಪಯೋಗ ಪ್ರಕರಣ ಈ ಹಿಂದೆಯೂ ಆಗಿದೆ. ಈಗ ಆತ್ಮಹತ್ಯೆಯಿಂದಾಗಿ ಪ್ರಕರಣ ಈಚೆ ಬಂದಿದೆ. ಬಿಜೆಪಿ ಅವಧಿಯಲ್ಲಿನ ಪ್ರಕರಣಗಳು ಇವೆ. ಸಚಿವರು ಈಗಾಗಲೇ ಸರ್ಕಾರ ಹಾಗೂ ಪಕ್ಷಕ್ಕೆ ಮುಜುಗರವಾಗಬಾರದು ಎಂದು ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದಾರೆ’ ಎಂದು ತಿರುಗೇಟು ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ