ವಯನಾಡು ಕ್ಷೇತ್ರಕ್ಕೆ ರಾಹುಲ್‌ ರಾಜೀನಾಮೆ?

Published : Jun 13, 2024, 07:00 AM IST
ವಯನಾಡು ಕ್ಷೇತ್ರಕ್ಕೆ ರಾಹುಲ್‌ ರಾಜೀನಾಮೆ?

ಸಾರಾಂಶ

ನಾನು ಈಗ ಯಾವ ಕ್ಷೇತ್ರವನ್ನು ಉಳಿಸಿಕೊಳ್ಳಬೇಕು ಎಂಬುದು ತಿಳಿಯುತ್ತಿಲ್ಲ. ವಯನಾಡು, ರಾಯ್‌ಬರೇಲಿ ಯಾವುದಾದರೂ ಒಂದು ಕ್ಷೇತ್ರವನ್ನು ಉಳಿಸಿಕೊಳ್ಳಲು ನಾನು ನಿರ್ಧಾರ ತೆಗೆದುಕೊಂಡರೆ ಎರಡೂ ಕ್ಷೇತ್ರದ ಜನತೆ ನನ್ನ ನಿರ್ಧಾರವನ್ನು ಸಂತೋಷವಾಗಿ ಸ್ವೀಕರಿಸುತ್ತಾರೆ ಎಂದು ನಾನು ಭಾವುಸುತ್ತೇನೆ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ

ಮಲಪ್ಪುರಂ(ಜೂ.13):  18ನೇ ಲೋಕಸಭಾ ಚುನಾವಣೆಯಲ್ಲಿ ವಯನಾಡು ಮತ್ತು ರಾಯ್‌ಬರೇಲಿಯಲ್ಲಿ ಎರಡೂ ಕ್ಷೇತ್ರಗಳಲ್ಲೂ ಗೆದ್ದಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಕೇರಳದ ವಯನಾಡು ಕ್ಷೇತ್ರ ತೊರೆಯುವ ಸಾಧ್ಯತೆ ದಟ್ಟವಾಗಿದೆ.

ತಮ್ಮನ್ನು ಗೆಲ್ಲಿಸಿದ ವಯನಾಡು ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಸಲುವಾಗಿ ರಾಹುಲ್‌ ಬುಧವಾರ ಇಲ್ಲಿ ರೋಡ್‌ಶೋ ನಡೆಸಿದರು. ಬಳಿಕ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ವಯನಾಡು ಜನತೆ ಮತ್ತೆ ನನ್ನ ಕೈ ಹಿಡಿದಿದ್ದು, ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿದ್ದೀರಿ. ಎಲ್ಲರಿಗೂ ಧನ್ಯವಾದಗಳು. ನಾನು ಈಗ ಯಾವ ಕ್ಷೇತ್ರವನ್ನು ಉಳಿಸಿಕೊಳ್ಳಬೇಕು ಎಂಬುದು ತಿಳಿಯುತ್ತಿಲ್ಲ. ವಯನಾಡು, ರಾಯ್‌ಬರೇಲಿ ಯಾವುದಾದರೂ ಒಂದು ಕ್ಷೇತ್ರವನ್ನು ಉಳಿಸಿಕೊಳ್ಳಲು ನಾನು ನಿರ್ಧಾರ ತೆಗೆದುಕೊಂಡರೆ ಎರಡೂ ಕ್ಷೇತ್ರದ ಜನತೆ ನನ್ನ ನಿರ್ಧಾರವನ್ನು ಸಂತೋಷವಾಗಿ ಸ್ವೀಕರಿಸುತ್ತಾರೆ ಎಂದು ನಾನು ಭಾವುಸುತ್ತೇನೆ ಎಂದರು.

ರಾಯ್‌ಬರೇಲಿ ಉಳಿಸಿಕೊಳ್ಳಲು ಮುಂದಾದ ರಾಹುಲ್ ಗಾಂಧಿ? ವಯನಾಡು ಕ್ಷೇತ್ರದ 'ಕೈ' ಅಭ್ಯರ್ಥಿ ಇವರೇನಾ?

ಆದರೆ ಇದೇ ಕಾರ್ಯಕ್ರಮದಲ್ಲಿ ಮಾತನಾಡಿದ ಕೇರಳ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಕೆ.ಸುಧಾಕರನ್‌, ‘ದೇಶ ಮುನ್ನಡೆಸಬೇಕಾದ ರಾಹುಲ್‌ ಗಾಂಧಿ ವಯನಾಡಲ್ಲೇ ಇರಬೇಕೆಂದು ನಾವು ಬಯಸುವುದು ಸರಿಯಲ್ಲ. ಈ ವಿಷಯದಲ್ಲಿ ನಾವು ದುಃಖ ಪಡಬಾರದು’ ಎನ್ನುವ ಮೂಲಕ ರಾಹುಲ್‌ ವಯನಾಡು ತೊರೆದು ಉತ್ತರಪ್ರದೇಶ ಉಳಿಸಿಕೊಳ್ಳುವ ಸಾಧ್ಯತೆ ಇದೆ ಎಂಬ ಸುಳಿವು ನೀಡಿದ್ದಾರೆ

ರಾಯ್‌ಬರೇಲಿಯೇ ಏಕೆ?

ಗಾಂಧೀ ಕುಟುಂಬದ ಸಾಂಪ್ರದಾಯಿಕ ಕ್ಷೇತ್ರ, ತೊರೆದರೆ ಗಾಂಧೀ ಕುಟುಂಬ ನಂಟು ತಪ್ಪುತ್ತದೆ
ಯುಪಿಯಲ್ಲಿ ಇಂಡಿ ಕೂಟ ಉತ್ತಮ ಸಾಧನೆ ಮಾಡಿದ್ದು, ಅದನ್ನು ಕಾಪಾಡಿಕೊಳ್ಳೂವ ಹೊಣೆ ಇದೆ
ವಯನಾಡಿಗೆ ಹೋಲಿಸಿದರೆ ದೆಹಲಿಗೆ ಸಮೀಪದ ರಾಯ್‌ಬರೇಲಿಗೆ ಹೋಗಿಬರುವುದು ಸುಲಭ

ಲೋಕಸಭೆಯ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ?

ಮೋದಿ ವಿರುದ್ಧ ರಾಹುಲ್‌ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್‌, ಮೋದಿ ಅವರು ‘ನಾನು ದೇವರ ಆಜ್ಞೆಯಂತೆ ನಾನು ಭೂಮಿಯಲ್ಲಿ ಕೆಲಸ ಮಾಡಲು ಬಂದಿದ್ದೇನೆ’ ಎಂದು ಚುನಾವಣಾ ರ್‍ಯಾಲಿ ಸಂದರ್ಭದಲ್ಲಿ ತಿಳಿಸಿದ್ದರು. ಆದರೆ ಅವರು ಅಂಬಾನಿ ಮತ್ತು ಅದಾನಿ ಅವರಿಗೆ ಪೂರಕವಾಗಿರುವ ನಿರ್ಧಾರಗಳನ್ನು ತೆಗೆದುಕೊಳ್ಳಲು ಮತ್ತು ರಕ್ಷಣಾ ವಲಯದಲ್ಲಿ ಕೈಗಾರಿಕೋದ್ಯಮಿಗೆ ಸಹಾಯ ಮಾಡಲು ಅಗ್ನಿವೀರ್‌ ಎಂಬ ಅಸ್ತ್ರವನ್ನು ಬಳಸಲು ದೇವರೇ ಪ್ರಧಾನಿ ಅವರಿಗೆ ನಿರ್ದೇಶನ ನೀಡುತ್ತಾರೆ ಎಂದು ಆರೋಪಿಸಿದರು.

ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ನೀಡದೇ ದೇಶದ ಜನತೆ ಸಂದೇಶವನ್ನು ರವಾನಿಸಿದ್ದಾರೆ. ಆದರೂ ಮೋದಿ ಅವರಿಗೆ ಮನೋಭಾವ ಕಡಿಮೆಯಾಗಿಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌
ದಲಿತ ಸಮುದಾಯಕ್ಕೆ ಸಿಎಂ ಹುದ್ದೆ ಕೊಡಿ ಎಂದು ಸಮಯ ಬಂದಾಗ ಕೇಳುವೆ: ಸಚಿವ ಮಹದೇವಪ್ಪ