
ಬಾಗಲಕೋಟೆ (ಜು.9) : ಕೇಂದ್ರ ಬಿಜೆಪಿ ಸರ್ಕಾರ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ವಿರುದ್ಧ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಜಿಲ್ಲಾ ಘಟಕದ ನೇತೃತ್ವದಲ್ಲಿ ಬಸವೇಶ್ವರ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾ ಮೆರವಣಿಗೆ ಮೂಲಕ ಬಸವೇಶ್ವರ ವೃತ್ತಕ್ಕೆ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರು(Congress workers), ಕೇಂದ್ರ ಸರ್ಕಾರ(Central government) ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿ ಕಿಡಿಕಾರಿಕಾರಿದರು.
ರಾಹುಲ್ ಸಂಸತ್ ಸದಸ್ಯತ್ವ ರದ್ದು: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ ಹದ್ಲಿ(Nagaraj hadli) ಮಾತನಾಡಿ, ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿದೇಶದ ಒಳಿತಿಗಾಗಿ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡುತ್ತಿದ್ದಾರೆ. ರಾಜಕೀಯ ಟೀಕೆ, ಟಿಪ್ಪಣಿಗಳು ಸಹಜವಾಗಿ ಮಾಡಿದ್ದಾರೆ. ಆದರೆ, ಪ್ರಶ್ನೆಗಳಿಗೆ ಉತ್ತರಿಸಲಾಗದ ಕೇಂದ್ರ ಬಿಜೆಪಿ ಸರ್ಕಾರ(BJP Govt) ರಾಜಕೀಯ ದ್ವೇಷ ಸಾಧಿಸುತ್ತಿದೆ. ಇಂತಹ ರಣಹೇಡಿ ಕೆಲಸ ಮಾಡುವುದು ತರವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಹುಲ್ ಗಾಂಧಿ ಮಾತನಾಡಿದ್ದು ಕರ್ನಾಟಕದಲ್ಲಿ ಆದರೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುಜರಾತನಲ್ಲಿ ಪ್ರಕರಣ ದಾಖಲಿಸುವಂತೆ ನೋಡಿಕೊಂಡಿದ್ದಾರೆ. ಅಲ್ಲದೇ ನ್ಯಾಯಾಲಯದ ಮೇಲೆ ಒತ್ತಡ ಹಾಕಿ ನ್ಯಾಯಾಂಗ ವ್ಯವಸ್ಥೆ ದುರುಪಯೋಗ ಪಡಿಸಿಕೊಂಡಿದ್ದಾರೆ. ಹೈಕೋರ್ಚ್ ಮೇಲೆ ಒತ್ತಡ ಹಾಕಿ ರಾಹುಲ್ ಗಾಂಧಿ ವಿರುದ್ಧ ತೀರ್ಪು ಬರುವಂತೆ ನೋಡಿಕೊಂಡಿದ್ದಾರೆ. ಇಂತಹ ರಾಜಕೀಯ ನಾಟಕ ಬಹಳ ದಿನ ನಡೆಯುವುದಿಲ್ಲ. ಅಧಿಕಾರದಲ್ಲಿ ಯಾರು ಶಾಶ್ವತವಾಗಿ ಇರುವುದಿಲ್ಲ. ಇದನ್ನು ನೆನಪಿಟ್ಟುಕೊಳ್ಳಿ ಎಂದರು.
ಹೋರಾಟಗಾರ ಕುತುಬುದ್ಧೀನ್ ಖಾಜಿ ಮಾತನಾಡಿ, ದೇಶದಲ್ಲಿ ಸಾಮಾಜಿಕ, ಆರ್ಥಿಕ, ಶಾಸಕಾಂಗ, ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ದೇಶಕ್ಕೆ ಸಂಬಂಧಪಟ್ಟಂತೆ ಪ್ರಶ್ನೆ ಮಾಡುವುದು ಕೂಡಾ ದೇಶ ವಿರೋಧಿ ಅಂತ ಬಿಂಬಿಸಲು ಹೊರಟಿದ್ದಾರೆ ಬಿಜೆಪಿ ನಾಯಕರು. ಇಂತಹ ಗೊಡ್ಡು ಬೆದರಿಕೆಗೆ ಯಾರು ಹೆದರುವುದಿಲ್ಲ. ಇದೇ ರೀತಿ ಮುಂದುವರೆದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ರಾಹುಲ್ ಗಾಂಧಿಗೆ ಶಿಕ್ಷೆ ತಗ್ಗಿಸದ ಹೈಕೋರ್ಟ್: ಅನರ್ಹತೆ ತಡೆಯಾಜ್ಞೆ ಅರ್ಜಿ ತಿರಸ್ಕಾರ
ಈ ವೇಳೆ ಮುಖಂಡರಾದ ಭರತ ಈಟಿ, ಮುತ್ತು ಜೋಳದ, ಸಂಜೀವ ವಾಡ್ಕರ, ಶ್ರೀನಿವಾಸ ಬಳ್ಳಾರಿ, ಹನುಮಂತ ರಾಕುಂಪಿ, ಎಚ್.ಬಿ.ಗೊರವರ, ಶೈಲಜಾ ನಾಯಕ, ಮಂಜುಳಾ ಭೂಸಾರೆ, ಎಸ್. ಎನ್.ರಾಂಪೂರ, ಮನೊ ೕಹರ ಏಳ್ಳಮ್ಮಿ, ದ್ಯಾಮಣ್ಣ ಗಾಳಿ ಇತರರು ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.