Raichur: ಮಂತ್ರಾಲಯದಿಂದ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಆರಂಭ

Published : Oct 21, 2022, 08:56 AM IST
Raichur: ಮಂತ್ರಾಲಯದಿಂದ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಆರಂಭ

ಸಾರಾಂಶ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್‌ ಜೋಡೋ ಪಾದಯಾತ್ರೆ ಮಂತ್ರಾಲಯದ ಅಭಯ ಆಂಜನೇಯ ದೇವಾಲಯದಿಂದ ಆರಂಭವಾಗಿದೆ. ಆಂಧ್ರಪ್ರದೇಶದ ಕಾಂಗ್ರೆಸ್ ನಾಯಕರೊಂದಿಗೆ ರಾಹುಲ್ ಗಾಂಧಿ ಪಾದಯಾತ್ರೆ ಆರಂಭಿಸಿದ್ದು, ಮಾಧವರಂ ಮೂಲಕ ತುಂಗಭದ್ರಾ ಸೇತುವೆ ದಾಟಿ ರಾಜ್ಯ ಮರುಪ್ರವೇಶಿಸಲಿದೆ. 

ರಾಯಚೂರು (ಅ.21): ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್‌ ಜೋಡೋ ಪಾದಯಾತ್ರೆ ಮಂತ್ರಾಲಯದ ಅಭಯ ಆಂಜನೇಯ ದೇವಾಲಯದಿಂದ ಆರಂಭವಾಗಿದೆ. ಆಂಧ್ರಪ್ರದೇಶದ ಕಾಂಗ್ರೆಸ್ ನಾಯಕರೊಂದಿಗೆ ರಾಹುಲ್ ಗಾಂಧಿ ಪಾದಯಾತ್ರೆ ಆರಂಭಿಸಿದ್ದು, ಮಾಧವರಂ ಮೂಲಕ ತುಂಗಭದ್ರಾ ಸೇತುವೆ ದಾಟಿ ರಾಜ್ಯ ಮರುಪ್ರವೇಶಿಸಲಿದೆ. ಇನ್ನು ರಾಜ್ಯದ ಗಡಿಯಲ್ಲಿ ಪಾದಯಾತ್ರೆ ಸ್ವಾಗತಿಸಲು ರಾಜ್ಯ ಕಾಂಗ್ರೆಸ್ ನಾಯಕರು ಕಾಯುತ್ತಿದ್ದು, ರಾಗಾರನ್ನು ಸ್ವಾಗತಿಸಲು ಸೇತುವೆ ಮುಂದೆ ಕಲಾ ತಂಡಗಳು, ಡೊಳ್ಳು, ವಾದ್ಯ ಮೇಳಗಳ ಸಂಭ್ರಮ ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಜನರು ಬಂದು ಸೇರುತ್ತಿದ್ದಾರೆ. ಸದ್ಯ ತುಂಗಭದ್ರ ಸೇತುವೆಯಿಂದ ಗಿಲ್ಲೆಸುಗೂರುವರೆಗೆ ನಾಲ್ಕು ಕಿಮೀ ನಡಿಗೆಯಿದ್ದು, ಗಿಲ್ಲೆಸುಗೂರಿನಲ್ಲಿ ಉಪಹಾರ ಹಾಗೂ ರೈತರೊಂದಿಗೆ ನರೆಗಾ ಸಂವಾದವನ್ನು ರಾಹುಲ್ ಗಾಂಧಿ ನಡೆಸಲಿದ್ದಾರೆ.

ಮಂತ್ರಾಲಯಕ್ಕೆ ಭೇಟಿ ನೀಡಿದ ಗಾಂಧಿ ಕುಟುಂಬದ ಮೊದಲ ಕುಡಿ: ಭಾರತ್ ಜೋಡೋ ಪಾದಯಾತ್ರೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಗುರುವಾರ ಮಂತ್ರಾಲಯದಲ್ಲಿರುವ ರಾಯರ ದರ್ಶನಕ್ಕಾಗಿ ಶ್ರೀಮಠಕ್ಕೆ ಆಗಮಿಸಿದ್ದಾರೆ. ಈ ಮೂಲಕ ಇದೇ ಮೊದಲ ನೆಹರು ಕುಟುಂಬದ ಸದಸ್ಯರೊಬ್ಬರು ರಾಯರ ದರ್ಶನವನ್ನ ಪಡೆದುಕೊಂಡಿದ್ದಾರೆ.  ಶ್ರೀಮಠದ ಸಂಪ್ರದಾಯದಂತೆ ರಾಹುಲ್ ಗಾಂಧಿ ವಸ್ತ್ರ ಧರಿಸಿ ರಾಯರ ದರ್ಶನಕ್ಕೆ ಆಗಮಿಸಿದ್ದರು. ಮಂತ್ರಾಲಯ ಗ್ರಾಮ ದೇವತೆ ಮಂಚಲಮ್ಮ ದೇವಿಯ ದರ್ಶನವನ್ನೂ ರಾಹುಲ್ ಗಾಂಧಿ ಪಡೆದಿದ್ದಾರೆ. ಬಳಿಕ ಶ್ರೀರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದಿದ್ದಾರೆ. 

ರಾಹುಲ್‌ ಯಾತ್ರೆ ವೇಳೆ ವಿದ್ಯುತ್‌ ತಗುಲಿ ನಾಲ್ವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಮಂಚಾಲಮ್ಮ ದೇವಿಯ ದರ್ಶನದ ಬಳಿಕ ರಾಯರ ವೃಂದಾವನ ದರ್ಶನ ಪಡೆದುಕೊಂಡು ರಾಯರ ವೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆ ಬಳಿಕ ಮಠದ ಪೀಠಾಧಿಪತಿ ಸುಭುದೇಂದ್ರ ತೀರ್ಥರಿಂದ ಆಶಿರ್ವಚನ ಪಡೆದಿದ್ದಾರೆ. ಬಳಿಕ ಶ್ರೀಗಳೊಂದಿಗೆ ರಾಹುಲ್ ಗಾಂಧಿ ಕೆಲ ಕಾಲ ಚರ್ಚೆ ನಡೆಸಲಿದ್ದಾರೆ. ರಾಹುಲ್ ಗಾಂಧಿಗೆ ಶ್ರೀಮಠದ ಕುರಿತು ಶ್ರೀಗಳು ಕಿರು ಪರಿಚಯ ಮಾಡಿಕೊಟ್ಟಿದ್ದಾರೆ. ಶ್ರೀ ರಾಘವೇಂದ್ರ ಸ್ವಾಮೀಜಿಗಳ ಪವಾಡಗಳನ್ನ  ರಾಹುಲ್ ಗಾಂಧಿ ಕೇಳಿದ್ದಾರೆ. ಬಳಿಕ ಶ್ರೀಮಠದಿಂದ ರಾಹುಲ್ ಗಾಂಧಿಗೆ ಶ್ರೀಗಳು ಸನ್ಮಾನಿಸಿದ್ದಾರೆ. ರಾಹುಲ್ ಗಾಂಧಿ ಮಂತ್ರಾಲಯದ ಹೊರವಲಯದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ರಾಹುಲ್ ಗಾಂಧಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಬಸನಗೌಡ ಬಾದರ್ಲಿ ಸಾಥ್ ನೀಡಿದ್ದರು. ಮಂತ್ರಾಲಯದ ರಾಯರ ಮಠದಲ್ಲಿ ರಾಹುಲ್ ಗಾಂಧಿ ಶ್ರೀಗಳ ಆಶಿರ್ವಾದ ಪಡೆದಿದ್ದಾರೆ. ಶಾಲು ಹೊದಿಸಿ, ಮಂತ್ರಾಕ್ಷತೆ ನೀಡಿ ಶ್ರೀಗಳಿಂದ ಆಶಿರ್ವಾದ ಪಡೆದಿದ್ದಾರೆ. ರಾಹುಲ್ ಗಾಂಧಿ ಶ್ರೀಗಳಿಗೆ ಹಣ್ಣು ಹಂಪಲು ನೀಡಿ ಆಶಿರ್ವಾದ ಪಡೆದಿದ್ದಾರೆ. ಇದೇ ವೇಳೆ ನೀಡಿದ ಬೆಳ್ಳಿ ಖಡ್ಗ ಕಾಣಿಕೆಯನ್ನ ಸುಬುಧೇಂದ್ರ ತೀರ್ಥ ಶ್ರೀಗಳು ನಯವಾಗಿ ತಿರಸ್ಕರಿಸಿದ್ದಾರೆ. 

ದಾಖಲೆ ಕೊಟ್ರೆ ಸಿದ್ದು ವಿರುದ್ಧ ಕ್ರಮ ತಗೋತೀರಾ?: ರಾಹುಲ್‌ಗೆ ಸಿಎಂ ಸವಾಲ್‌

ರಾಹುಲ್ ಗಾಂಧಿಗೆ ಆಶಿರ್ವಚನ ನೀಡಿದ ಬಳಿಕ ಮಾತನಾಡಿದ ಶ್ರೀಗಳು, ರಾಹುಲ್ ಗಾಂಧಿ ಜೋಡೋ ಯಾತ್ರೆ ನಿಮಿತ್ತ ಮಠಕ್ಕೆ ಆಗಮಿಸಿದ್ದಾರೆ. ರಾಯರ ದರ್ಶನ, ನಾಮಸ್ಮರಣೆ, ಪ್ರಸಾರ ಸ್ವಿಕರಿಸಿ ಧನ್ಯತೆಯಿಂದ ತೆರಳಿದ್ದಾರೆ. ರಾಹುಲ್ ಗಾಂಧಿ ಹಿಂದೂ ಸಂಸ್ಕೃತಿಯ ಉಡುಪು ಧರಿಸಿ ಮಠಕ್ಕೆ ಬಂದಿದ್ದರು. ದೇಶಕ್ಕೆ ಒಳ್ಳೆಯದಾಗಲಿ, ಶಾಂತಿ ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಶ್ರೀಮಠಕ್ಕೆ ಹಿಂದಿನಿಂದಲೂ ನೆಹರು ಕುಟುಂಬದ ಸೇವೆಯಿದೆ. ಮಾಜಿ ಪ್ರಧಾನಿ ಪಿ.ವಿ. ನರಸಿಂಹರಾವ್ ಮಠಕ್ಕೆ ಸೇವೆ ಸಲ್ಲಿಸಿದ್ದರು. ಕ್ಷೇತ್ರದ ಮಹಿಮೆ, ರಾಯರ ಪೂರ್ವಾವತಾರದ ಕುರಿತು ರಾಹುಲ್ ಗಾಂಧಿಗೆ ಮಾಹಿತಿ ನೀಡಿದ್ದೇವೆ ಅಂತ ಶ್ರೀಗಳು ತಿಳಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!