
ಥಾಣೆ: ಕಲ್ಯಾಣ್- ಡೊಂಬಿವಿಲಿ ಮುನ್ಸಿಪಲ್ ಚುನಾವಣೆ ವೇಳೆ ಬಿಜೆಪಿ- ಶಿವಸೇನೆ (ಶಿಂಧೆ) ಅಭ್ಯರ್ಥಿಗಳ ವಿರುದ್ಧ ಸೋಲು ಕಂಡಿದ್ದ ರಾಜ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ನವನಿರ್ಮಾಣ ಸೇನೆ, ಅದೇ ಪಾಲಿಕೆಯ ಮೇಯರ್ ಚುನಾವಣೆಯಲ್ಲಿ ಬಿಜೆಪಿಗೆ ಟಾಂಗ್ ನೀಡಲು ಶಿವಸೇನೆ ಬೆಂಬಲಿಸಲು ಮುಂದಾಗಿದೆ.
122 ಸದಸ್ಯ ಬಲದ ಪಾಲಿಕೆಯಲ್ಲಿ ಶಿವಸೇನೆ 53, ಬಿಜೆಪಿ 50, ಶಿವಸೇನೆ (ಠಾಕ್ರೆ ಬಣ) 11, ಎಂಎನ್ಎಸ್ 5, ಕಾಂಗ್ರೆಸ್ ಮತ್ತು ಎನ್ಸಿಪಿ ತಲಾ ಒಂದು ಸ್ಥಾನ ಗಳಿಸಿವೆ. ಇದರ ಬೆನ್ನಲ್ಲೇ ಶಿವಸೇನೆಯ ಐವರು ವಿಜೇತ ಅಭ್ಯರ್ಥಿಗಳು ಮೇಯರ್ ಸ್ಥಾನಕ್ಕೆ ಶಿಂಧೆ ಬಣಕ್ಕೆ ಬೆಂಬಲ ಸೂಚಿಸಿದ್ದಾರೆ.
ಈ ಮೂಲಕ ಬಿಜೆಪಿಗೆ ಅವಕಾಶ ನಿರಾಕರಿಸುವ ಮತ್ತು ಬಿಜೆಪಿ- ಶಿವಸೇನೆ ದೂರ ಮಾಡುವ ತಂತ್ರವನ್ನು ಎಂಎನ್ಎಸ್ ಹೆಣೆದಿದೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.