
ನವದೆಹಲಿ: ರಾಷ್ಟ್ರಪತಿ ಭವನದಲ್ಲಿದ್ದ ಬ್ರಿಟಿಷ್ ವಾಸ್ತುಶಿಲ್ಪಿ ಎಡ್ವಿನ್ ಲೂಟನ್ಸ್ ಅವರ ಪ್ರತಿಮೆಯ ಜಾಗದಲ್ಲಿ, ಭಾರತದ ಏಕೈಕ ಗವರ್ನರ್ ಜನರಲ್ ಆಗಿದ್ದ ರಾಜಗೋಪಾಲಾಚಾರಿ (ರಾಜಾಜಿ) ಅವರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಅದನ್ನು ಸೋಮವಾರ ರಾಷ್ಟ್ರಪ್ರತಿ ದ್ರೌಪದಿ ಮುರ್ಮು ಅವರು ಅನಾವರಣಗೊಳಿಸಿದರು.
ವಸಾಹತುಶಾಹಿ ಕುರುಹುಗಳನ್ನು ತೆಗೆದುಹಾಕುವ ಉದ್ದೇಶದಿಂದ, ಬ್ರಿಟಿಷರಾಗಿದ್ದ ಲೂಟನ್ಸ್ ಅವರ ಪ್ರತಿಮೆಯನ್ನು ತೆರವುಗೊಳಿಸಲಾಗಿದೆ. ಭಾರತದ ಸಂಸ್ಕೃತಿ, ಪರಂಪರೆ, ಕಾಲಾತೀತ ಸಂಪ್ರದಾಯಗಳ ಶ್ರೀಮಂತಿಕೆಯನ್ನು ಹೆಮ್ಮೆಯಿಂದ ಅಪ್ಪಿಕೊಳ್ಳುವುದು ಮತ್ತು ದೇಶಕ್ಕೆ ಅಸಾಧಾರಣ ಕೊಡುಗೆ ನೀಡಿದವರನ್ನು ಗೌರವಿಸುವ ಸಲುವಾಗಿ ರಾಜಾಜಿಯವರ ಪ್ರತಿಮೆಗೆ ಸ್ಥಾನ ನೀಡಲಾಗಿದೆ.
ಪ್ರಸಿದ್ಧ ಬ್ರಿಟಿಷ್ ವಾಸ್ತುಶಿಲ್ಪಿ ಮತ್ತು ಪಟ್ಟಣ ಯೋಜಕರಾಗಿದ್ದ ಲೂಟನ್ಸ್ ಅವರು ದೆಹಲಿಯ ಪ್ರಮುಖ ಸ್ಮಾರಕ ಕಟ್ಟಡಗಳ ನಿರ್ಮಾತೃ.
ಲೂಟನ್ಸ್ ಮರಿಮೊಮ್ಮಗ ಬೇಸರ: ಈ ಬೆಳವಣಿಗೆಗೆ ಲೂಟನ್ಸ್ ಅವರ ಮರಿಮೊಮ್ಮಗ ಮ್ಯಾಟ್ ರಿಡ್ಲಿ ಪ್ರತಿಕ್ರಿಯಿಸಿದ್ದು, ‘ನನ್ನ ಮುತ್ತಜ್ಜನ ವಿನ್ಯಾಸಗೊಳಿಸಿದ ದೆಹಲಿಯ ರಾಷ್ಟ್ರಪತಿ ಭವನದಿಂದ ಅವರ ಪ್ರತಿಮೆಯನ್ನು ತೆಗೆದುಹಾಕಲಾಗುತ್ತಿದೆ ಎಂದು ತಿಳಿದು ದುಃಖವಾಯಿತು. ಕಳೆದ ವರ್ಷವಷ್ಟೇ ನಾನು ಅದನ್ನು ನೋಡಿದ್ದೆ’ ಎಂದು ಬೇಸರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.