
ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕೆ.ಎನ್. ರಾಜಣ್ಣ ಅವರನ್ನು ಎರಡು ದಿನದಲ್ಲಿ ಎರಡನೇ ಸಲ ಭೇಟಿಯಾಗಿದ್ದಾರೆ. ಇಬ್ಬರೂ ನಾಯಕರ ಭೇಟಿ ಕುತೂಹಲ ಕೆರಳಿಸಿದೆ.
ಡಿ.ಕೆ. ಶಿವಕುಮಾರ್ ವಿರುದ್ಧ ಬಹಿರಂಗ ಹೇಳಿಕೆ ನೀಡುವ ಮೂಲಕ ಸಿದ್ದರಾಮಯ್ಯ ಅವರ ಪರ ಬ್ಯಾಟಿಂಗ್ ಮಾಡುತ್ತಿದ್ದ ಕೆ.ಎನ್. ರಾಜಣ್ಣ ಅವರು ಶನಿವಾರ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದರು. ಬೆನ್ನಲ್ಲೇ ಭಾನುವಾರವೂ ಇಬ್ಬರ ನಡುವೆ ಭೇಟಿ ನಡೆದಿದೆ.
ಶನಿವಾರ ಕೆ.ಎನ್. ರಾಜಣ್ಣ ಭೇಟಿ ಕುರಿತು ಪ್ರತಿಕ್ರಿಯಿಸಿದ್ದ ಡಿ.ಕೆ.ಶಿವಕುಮಾರ್, ಕೆ.ಎನ್. ರಾಜಣ್ಣ ನನಗೂ ಆಪ್ತ. ಸಿದ್ದರಾಮಯ್ಯ ಅವರಿಗೂ ರಾಜಣ್ಣನಿಗೆ ಸಂಬಂಧವಿಲ್ಲ. ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದೇ ನಾನು ಎಂದು ಹೇಳಿದ್ದರು.
ಇದಕ್ಕೆ ತಿರುಗೇಟು ನೀಡಿದ್ದ ಕೆ.ಎನ್. ರಾಜಣ್ಣ, ‘ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ನಾನು ಸಿದ್ದರಾಮಯ್ಯ ಪರ. ಶಿವಕುಮಾರ್ ಎಷ್ಟೇ ಪ್ರಯತ್ನಿಸಿದರೂ ನನ್ನ ನಿಲುವು ಬದಲಾಗಲ್ಲ’ ಎಂದು ಹೇಳಿದ್ದು ತೀವ್ರ ಚರ್ಚೆಗೆ ಕಾರಣವಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.