
ಜೈಪುರ(ಆ.04): ಕೆಲ ದಿನಗಳ ಹಿಂದೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ರೆಬೆಲ್ ಅಭ್ಯರ್ಥಿಗಳ ಬಳಿ ಪಕ್ಷದ ಹೈಕಮಾಂಡ್ ಬಳಿ ಕ್ಷಮೆ ಯಾಚಿಸಿದ್ರೆ ಮತ್ತೆ ಕಾಂಗ್ರೆಸ್ಗೆ ಸೇರ್ಪಡೆಗೊಳಿಸುವುದಾಗಿ ಹೇಳಿದ್ದರು. ಹೀಗಿರುವಾಗೇ ಇತ್ತ ಕಾಂಗ್ರೆಸ್ ವಕ್ತಾರ ರಣ್ದೀಪ್ ಸುರ್ಜೇವಾಲಾ ಕೂಡಾ ಸಚಿನ್ ಪೈಲಟ್ ಬಳಿ ತಮ್ಮ ನಿರ್ಧಾರ ಸ್ಪಷ್ಟಪಡಿಸುವಂತೆ ಹೇಳಿದ್ದಾರೆ. ಹೀಗಿರುವಾಗ ಕಾಂಗ್ರೆಸ್ ಪೈಲಟ್ಗೆ ತನ್ನ ಪಕ್ಷದ ಬಾಗಿಲು ಸಂಪೂರ್ಣವಾಗಿ ಮುಚ್ಚಲು ತಯಾರಿಲ್ಲ ಎಂಬುವುದು ಸ್ಪಷ್ಟವಾಗಿದೆ. ಯಾಕೆಂದರೆ ಪಕ್ಷದಲ್ಲಿ ಪೈಲಟ್ ಇಲ್ಲದಿದ್ದರೆ ಅದು ಜಾತಿ ಸಮೀಕರಣದಲ್ಲಿ ಕಾಂಗ್ರೆಸ್ಗೆ ಬಹುದೊಡ್ಡ ಹೊಡೆತ ನೀಡುತ್ತದೆ.
ರಾಜಸ್ಥಾನದಲ್ಲಿ ರಾಜಕೀಯ ಹೈಡ್ರಾಮಾ: ಕಾಂಗ್ರೆಸ್ ಧರಣಿ, ಗವರ್ನರ್ ಗರಂ!
ಇನ್ನು ಕಾಂಗ್ರೆಸ್ ಈಗಾಗಲೇ ರಾಜಸ್ಥಾನದಲ್ಲಿ ಗೆಹ್ಲೋಟ್ ಸರ್ಕಾರಕ್ಕೆ ಯಾವುದೇ ಆತಂಕವಿಲ್ಲ, ಹಾಗೂ ಆಗಸ್ಟ್ 14ರಂದು ನಡೆಯುವ ಅಧಿವೆಶನದಲ್ಲಿ ಬಹುಮತ ಸಾಬೀತು ಮಾಡುತ್ತಾರೆಂದು ಸ್ಪಷ್ಟಪಡಿಸಿದೆ. ಇದೇ ವೇಳೆ ಸುರ್ಜೇವಾಲಾ 'ಸಚಿನ್ ಪೈಲಟ್ ಅಗತ್ಯವಾಗಿ ಮಾತುಕತೆ ನಡೆಸಬೇಕು. ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಲಿ ಆಗಲೇ ಅವರು ಮರಳಿ ಪಕ್ಷಕ್ಕೆ ಸೇರ್ಪಡೆಗೊಳಿಸುವ ಕುರಿತು ಏನಾದರೂ ಯೋಚಿಸಬಹುದು' ಎಂದಿದ್ದಾರೆ.
Fact Check: ಬಿಜೆಪಿ ಸೇರಿದ್ರಾ ಸಚಿನ್ ಪೈಲಟ್.?
ಇನ್ನು ರೆಬೆಲ್ಗಳ ವಿಇರುದ್ಧ ಕಿಡಿ ಕಾರಿರುವ ಅಶೋಕ್ ಗೆಹ್ಲೋಟ್ ಮತ್ತೆ ಅವರನ್ನೇ ಏಕೆ ಪಕ್ಷಕ್ಕೆ ಶಾಮೀಲುಗೊಳಿಸಲು ತಯಾರಾಗಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಸುರ್ಜೇವಾಲಾ ಅಶೋಕ್ ಗೆಹಹ್ಲೋಟ್ ಬಹಳ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಿದ್ದಾರೆ. ಹೀಗಿರುವಾಗ ಸರ್ಕಾರ ಉರುಳಿಸುವ ಕುತಂತ್ರ ನಡೆಯುವಾಗ ಅವರ ಭಾವನೆಗಳಿಗೆ ಧಕ್ಕೆಯುಂಟಾಗಿದೆ. ಇಂತಹ ಸಂದರ್ಭದಲ್ಲಿ ಅವರು ಈ ಮಾತುಗಳನ್ನಾಡಿದ್ದಾರೆ. ಹೀಗಾಗಿ ಅವುಗಳನ್ನು ನಿರ್ಲಕ್ಷಿಸುವುದೇ ಉತ್ತಮ ಎಂದಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳ ಬಳಿಕ ಸಚಿನ್ ಪೈಲಟ್ ಕಾಂಗ್ರೆಸ್ ಷರತ್ತಿನಂತೆ ಕ್ಷಮೆ ಕೇಳಿ ಪಕ್ಷಕ್ಕೆ ಮರಳಿ ಬರುತ್ತಾರಾ? ಅಥವಾ ಈ ಹೈಡ್ರಾಮಾ ಮುಂದುವರೆಯುತ್ತಾ? ಕಾದು ನೋಡಬೇಕಷ್ಟೇ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.