ಭಾರತ ತಂತ್ರಜ್ಞಾನದಲ್ಲಿ ಮುಂದುವರಿಯಲು ರಾಜೀವ್‌ ಗಾಂಧಿ ಕಾರಣ: ಸಚಿವ ಜಾರ್ಜ್‌

Published : Nov 03, 2023, 01:59 PM IST
ಭಾರತ ತಂತ್ರಜ್ಞಾನದಲ್ಲಿ ಮುಂದುವರಿಯಲು ರಾಜೀವ್‌ ಗಾಂಧಿ ಕಾರಣ: ಸಚಿವ ಜಾರ್ಜ್‌

ಸಾರಾಂಶ

ಭಾರತ ದೇಶದಲ್ಲಿ ತಂತ್ರಜ್ಞಾನ ಮುಂದುವರಿಯಲು ರಾಜೀವ್‌ ಗಾಂಧಿ ಕಾರಣರಾಗಿದ್ದರು. ಕಾಂಗ್ರೆಸ್‌ 50 ವರ್ಷ ಆಳ್ವಿಕೆಯಲ್ಲಿ ದೇಶ ಅಭಿವೃದ್ಧಿ ಹೊಂದಿದೆ. ಕಾಂಗ್ರೆಸ್‌ ಜಾತ್ಯಾತೀತ ಪಕ್ಷವಾಗಿದ್ದು ಇದರಲ್ಲಿ ಯಾರೂ ಬೇಕಾದರೂ ನಾಯಕರಾಗಿ ಬೆಳೆಯಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಾರ್ಜ್‌ ತಿಳಿಸಿದರು. 

ನರಸಿಂಹರಾಜಪುರ (ನ.03): ವಿದ್ಯುತ್‌ ಬೇಡಿಕೆ ಜಾಸ್ತಿಯಾಗಿದ್ದರಿಂದ ವಿದ್ಯುತ್‌ ಕೊರತೆ ಉಂಟಾಗಿದ್ದು ಶೀಘ್ರದಲ್ಲೇ ಹಣ ನೀಡಿ ವಿದ್ಯುತ್‌ ಖರೀದಿ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಾರ್ಜ್‌ ತಿಳಿಸಿದರು. ಪಟ್ಟಣದ ಕಾಂಗ್ರೆಸ್‌ ಕಚೇರಿಯ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಯಾವುದೇ ಕೈಗಾರಿಕೆಗೆ, ಕೃಷಿ ಪಂಪ್‌ಸೆಟ್‌ ಗಳಿಗೆ ಪವರ್‌ ಕಟ್‌ ಮಾಡಿಲ್ಲ. ಮುಂದಿನ ದಿನಗಳಲ್ಲಿ ವಿದ್ಯುತ್‌ ಪವರ್ ಸ್ಟೇಷನ್‌ ನಲ್ಲಿ ಸೋಲಾರ್‌ ಯೂನಿಟ್‌ ಮಾಡುವ ಚಿಂತನೆಯಲ್ಲಿದ್ದೇವೆ. ಸೋಲಾರ್ ಅಳವಡಿಸಿದವರಿಗೆ ಶೇ 70 ರಷ್ಟು ಸಹಾಯಧನ ನೀಡಲಾಗುವುದು ಎಂದರು.

ಭಾರತ ದೇಶದಲ್ಲಿ ತಂತ್ರಜ್ಞಾನ ಮುಂದುವರಿಯಲು ರಾಜೀವ್‌ ಗಾಂಧಿ ಕಾರಣರಾಗಿದ್ದರು. ಕಾಂಗ್ರೆಸ್‌ 50 ವರ್ಷ ಆಳ್ವಿಕೆಯಲ್ಲಿ ದೇಶ ಅಭಿವೃದ್ಧಿ ಹೊಂದಿದೆ. ಕಾಂಗ್ರೆಸ್‌ ಜಾತ್ಯಾತೀತ ಪಕ್ಷವಾಗಿದ್ದು ಇದರಲ್ಲಿ ಯಾರೂ ಬೇಕಾದರೂ ನಾಯಕರಾಗಿ ಬೆಳೆಯಬಹುದು, ಎಲ್ಲಾ ಧರ್ಮ, ಎಲ್ಲಾ ಜಾತಿಯವರು ಒಟ್ಟಾಗಿ ಕಾಂಗ್ರೆಸ್‌ ಪಕ್ಷ ಬೆಳೆಸಿದ್ದೇವೆ. ನಾನು ಕಾಂಗ್ರೆಸ್‌ ಪಕ್ಷದ ಸಾಮಾನ್ಯ ಕಾರ್ಯಕರ್ತ ಎಂದರು.

ಬರ್ತಾ ಬರ್ತಾ ಬಿಗ್‌ಬಾಸ್‌ನಲ್ಲಿ ಅವಾಚ್ಯ ಶಬ್ದಗಳ ಬಳಕೆ ಹೆಚ್ಚುತ್ತಿದೆ: ಮಾಜಿ ಸ್ಪರ್ಧಿ ಕಾವ್ಯಾ ಶಾಸ್ತ್ರಿ!

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್‌ ಉತ್ತಮ ಕೆಲಸ ಮಾಡಿ ಜಿಲ್ಲೆಯ 5 ಶಾಸಕರನ್ನು ಗೆಲ್ಲಿಸಿ ಕೊಂಡು ಬಂದಿದ್ದಾರೆ. ಕಾರಣಾಂತರದಿಂದ ರಾಜೇಗೌಡರು ಮಂತ್ರಿಯಾಗಲಿಲ್ಲ. ಆದರೂ, ಶಾಸಕ ರಾಜೇಗೌಡರು ಒಳ್ಳೆಯ ಕಾರ್ಯ ಮಾಡುತ್ತಿದ್ದು ಸಿದ್ದರಾಮಯ್ಯ ಅವರಿಗೆ ಹತ್ತಿರವಾಗಿದ್ದಾರೆ. ಅವರು ಯಾವುದೇ ಯೋಜನೆ ತಂದರೂ ನನ್ನ ಸಹಕಾರ ಇದೆ. ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಶ್ರೀನಿವಾಸ್ ಬಹಳ ಹಿಂದಿನಿಂದಲೂ ನನಗೆ ಪರಿಚಯ. ಅವರಿಗೂ ಅಧಿಕಾರ ನೀಡಿದರೆ ಜಿಲ್ಲೆಗೆ ಮಾತ್ರವಲ್ಲ, ರಾಜ್ಯಕ್ಕೂ ಉಪಯೋಗವಾಗಲಿದೆ. ಕಾಂಗ್ರೆಸ್‌ ಪಕ್ಷ 5 ಗ್ಯಾರಂಟಿ ಘೋಷಣೆ ಮಾಡಿತ್ತು. ಇದರಲ್ಲಿ 4 ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ ಎಂದರು.

ಶಾಸಕ ಟಿ.ಡಿ.ರಾಜೇಗೌಡ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರು ಎಷ್ಟೇ ಕೆಲಸದ ಒತ್ತಡ ಇದ್ದರೂ ಪಕ್ಷದ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಬೆರೆಯುತ್ತಾರೆ. ಕಾಂಗ್ರೆಸ್‌ ವಿವಿಧ ರಾಜ್ಯಗಳ ಚುನಾವಣಾ ಕಮಿಟಿ ಸದಸ್ಯರನ್ನಾಗಿ ಜಾರ್ಜ್‌ ಅವರನ್ನು ನೇಮಿಸಿದೆ. ಇದರಿಂದ ಅವರು ದೆಹಲಿ ಮುಂತಾದ ಕಡೆ ಸುತ್ತಾಡಬೇಕಾಗಿದೆ. ಶೃಂಗೇರಿ ಕ್ಷೇತ್ರದ ಹಲವಾರು ಸಮಸ್ಯೆಗಳನ್ನು ಜಾರ್ಜ್‌ ಅ‍ವರ ಗಮನಕ್ಕೆ ತಂದಿದ್ದೇನೆ ಎಂದರು. ಸಭೆ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್‌ ಮಾತನಾಡಿ, ಜಾರ್ಜ್‌ ಅವರು ಜಿಲ್ಲೆಯ ಎಲ್ಲಾ ಶಾಸಕರು, ಮುಖಂಡರು, ಕಾರ್ಯಕರ್ತರ ಸಂಪರ್ಕ ಇಟ್ಟುಕೊಂಡಿದ್ದಾರೆ. ಕೆಲಸ ಮಾಡದ ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದ್ದಾರೆ. ಪಕ್ಷವನ್ನು ಸಂಘಟಿಸಿ ಗಟ್ಟಿ ತಳಪಾಯ ಹಾಕಿದ್ದಾರೆ ಎಂದರು.

ಸಿಎಂ ಬದಲಾವಣೆ ಅನಿವಾರ್ಯವಾದರೆ ಡಿಕೆಶಿಗೆ ಬೆಂಬಲ: ಶಾಸಕ ಕೆ.ಎಂ.ಉದಯ್

ಇದೇ ಸಂದರ್ಭದಲ್ಲಿ ಬ್ಲಾಕ್‌ ಕಾಂಗ್ರೆಸ್‌ನಿಂದ ಸಚಿವ ಜಾರ್ಜ್‌ ಅವರನ್ನು ಸನ್ಮಾನಿಸಲಾಯಿತು. ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ ಶೆಟ್ಟಿ ಶೃಂಗೇರಿ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಸಚಿವರಿಗೆ ಮನವಿ ಅರ್ಪಿಸಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಎಸ್.ಸುಬ್ರಮಣ್ಯ ಬ್ಲಾಕ್‌ ಕಾಂಗ್ರೆಸ್‌ ಪರವಾಗಿ ಸಚಿವರಿಗೆ ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಶ್ರೀನಿವಾಸ್ ಅವರಿಗೆ ಪ್ರವಾಸೋದ್ಯಮ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಮನವಿ ನೀಡಿದರು. ಪಪಂ ಸದಸ್ಯೆ ಜುಬೇದ ಸಂವಿಧಾನ ಓದಿದರು. ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಗೇರ್‌ ಬೈಲು ನಟರಾಜ, ಮುಖಂಡರಾದ ಪಿ.ಆರ್.ಸದಾಶಿವ, ಇ.ಸಿ.ಜೋಯಿ, ಕೆ.ಎಂ.ಸುಂದರೇಶ್‌,ಕೆ.ಎ.ಅಬೂಬಕರ್‌ ಮತ್ತಿತರರು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!
ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್