ರಾಜೀವ್‌ ಗಾಂಧಿ ದೇಶದ ಭವಿಷ್ಯವನ್ನು ರೂಪಿಸಿದ ಮಹಾನ್‌ ನಾಯಕ: ಶಾಸಕ ತಮ್ಮಯ್ಯ

Published : Aug 21, 2023, 04:36 PM IST
ರಾಜೀವ್‌ ಗಾಂಧಿ ದೇಶದ ಭವಿಷ್ಯವನ್ನು ರೂಪಿಸಿದ ಮಹಾನ್‌ ನಾಯಕ: ಶಾಸಕ ತಮ್ಮಯ್ಯ

ಸಾರಾಂಶ

ದೇಶದ ಯುವ ಜನರ ಕಲ್ಪನೆ ಹಾಗೂ ಭರವಸೆಗಳನ್ನು ಮನಗಂಡ ಮಾಜಿ ಪ್ರಧಾನಿ ದಿ. ರಾಜೀವ್‌ ಗಾಂಧಿ ದೇಶದ ಭವಿಷ್ಯವನ್ನು ರೂಪಿಸಿದ ಮಹಾನ್‌ ನಾಯಕ. ಉಳುವವರಿಗೆ ಭೂಮಿ ಕೊಡಿಸಿ ಮಹಾನ್‌ ಸಾಧನೆ ಮಾಡಿದ ಮುಖ್ಯಮಂತ್ರಿಗಳಾಗಿದ್ದ ದೇವರಾಜ ಅರಸು ನಮಗೆಲ್ಲ ಮಾದರಿಯಾಗಿದ್ದಾರೆ ಎಂದು ಶಾಸಕ ಎಚ್‌.ಡಿ.ತಮ್ಮಯ್ಯ ಹೇಳಿದರು.

ಚಿಕ್ಕಮಗಳೂರು (ಆ.21): ದೇಶದ ಯುವ ಜನರ ಕಲ್ಪನೆ ಹಾಗೂ ಭರವಸೆಗಳನ್ನು ಮನಗಂಡ ಮಾಜಿ ಪ್ರಧಾನಿ ದಿ. ರಾಜೀವ್‌ ಗಾಂಧಿ ದೇಶದ ಭವಿಷ್ಯವನ್ನು ರೂಪಿಸಿದ ಮಹಾನ್‌ ನಾಯಕ. ಉಳುವವರಿಗೆ ಭೂಮಿ ಕೊಡಿಸಿ ಮಹಾನ್‌ ಸಾಧನೆ ಮಾಡಿದ ಮುಖ್ಯಮಂತ್ರಿಗಳಾಗಿದ್ದ ದೇವರಾಜ ಅರಸು ನಮಗೆಲ್ಲ ಮಾದರಿಯಾಗಿದ್ದಾರೆ ಎಂದು ಶಾಸಕ ಎಚ್‌.ಡಿ.ತಮ್ಮಯ್ಯ ಹೇಳಿದರು.

ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್‌ ಹಿಂದುಳಿದ ವರ್ಗಗಳ ವಿಭಾಗದಿಂದ ಆಯೋಜಿಸಿದ್ದ ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜನ್ಮದಿನಾಚರಣೆಯಲ್ಲಿ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಈ ಮಹಾನ್‌ ನಾಯಕರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅವುಗಳು ಇಂದು ಶಾಶ್ವತವಾಗಿ ನೆಲೆಯೂರಿವೆ. ರಾಜೀವ್‌ಗಾಂಧಿ ಹಾಗೂ ಡಿ.ದೇವರಾಜ ಅರಸು ಜನ್ಮ ದಿನವಾದ ಇಂದು ರಾಜ್ಯ ಮತ್ತು ದೇಶಕ್ಕೆ ಅವರು ಕೊಟ್ಟಿರುವ ಕೊಡುಗೆಯನ್ನು ನೆನಪು ಮಾಡಿಕೊಳ್ಳಬೇಕು ಮತ್ತು ಆ ದಾರಿಯಲ್ಲಿ ನಡೆಯೋಣ ಎಂದು ಕರೆ ನೀಡಿದರು.

ದೇಶದಲ್ಲೇ ರಾಜ್ಯ ಶೀಘ್ರ ನಂ.1 ಆಗಲಿದೆ: ಗೃಹ ಸಚಿವ ಪರಮೇಶ್ವರ್‌

ಜಿಪಂ ಮಾಜಿ ಅಧ್ಯಕ್ಷ ಎ.ಎನ್‌.ಮಹೇಶ್‌ ಮಾತನಾಡಿ, ರಾಜೀವ್‌ ಗಾಂಧಿಯವರ ಪಂಚಾಯತ್‌ ರಾಜ್‌ ವ್ಯವಸ್ಥೆ ಮತ್ತು ಮೀಸಲಾತಿಗಳಿಂದ ಬಹುತೇಕರಿಗೆ ಅಧಿಕಾರ ದೊರೆಯು ವಂತಾಗಿದೆ. ತಾಂತ್ರಿಕ ಜಗತ್ತಿನಲ್ಲಿ ಪ್ರಪಂಚಕ್ಕೆ ಸವಾಲ್‌ ಎಂಬಂತೆ ನಮ್ಮ ದೇಶ ರೂಪಿಸಿದ ರಾಜೀವ್‌ಗಾಂಧಿ ಅವರನ್ನು ಈ ದೇಶದ ಜನ ಮರೆಯಬಾರದು. ಹಾಗೆಯೇ ದೇವರಾಜ ಅರಸು ಜನಪರವಾದ ದಿಟ್ಟಆಡಳಿತವನ್ನು ನೀಡುವ ಜೊತೆಗೆ ರಾಜ್ಯವನ್ನು ಪ್ರಗತಿಯತ್ತ ಕೊಂಡೊಯ್ದ ಮಹಾನ್‌ ನಾಯಕ ಎಂದು ಹೇಳಿದರು.

ಆಯನೂರು ಮಂಜು​ನಾಥ್‌ ಜೆಡಿಎಸ್‌ ಪಕ್ಷ​ದಲ್ಲಿದ್ದೇ ಧಮ್‌ ತೋರಲಿ!

ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಎಂ.ಸಿ. ಶಿವಾನಂದಸ್ವಾಮಿ ಹಾಗೂ ಜಿಲ್ಲಾ ಕಾಂಗ್ರೆಸ್‌ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಡಿ.ಸಿ.ಪುಟ್ಟೇಗೌಡ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಎಂ.ಎಲ್‌.ಮೂರ್ತಿ, ಚಿಕ್ಕಮಗಳೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಪಿ.ಮಂಜೇಗೌಡ, ರಾಜ್ಯ ಮಹಿಳಾ ಕಾಂಗ್ರೆಸ್‌ ಉಪಾಧ್ಯಕ್ಷೆ ರೇಖಾ ಹುಲಿಯಪ್ಪಗೌಡ, ಮುಖಂಡರಾದ ಮಹಮದ್‌ ಅಕ್ಬರ್‌, ಪ್ರಸಾದ್‌ ಅಮಿನ್‌, ಹಿರೇಮಗಳೂರು ರಾಮಚಂದ್ರ, ಪ್ರಕಾಶ್‌ ರೈ, ನಾಗೇಶ್‌, ನಾಗಭೂಷಣ್‌, ನಾಗೇಶ್‌ರಾಜ್‌ ಅರಸ್‌, ಮಧು, ಭರತ್‌, ರಾಘವೇಂದ್ರ, ಉಮೇಶ್‌ ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬಿಜೆಪಿಗರ ಬಳಿ 1 ಕೋಟಿ 2 ಕೋಟಿ ಮೊತ್ತದ ದುಬಾರಿ ವಾಚ್‌ಗಳಿವೆ ಚೆಕ್ ಮಾಡಿ: ಕಾಂಗ್ರೆಸ್ ಶಾಸಕ
ಎಚ್‌ಡಿಕೆ ಮನುವಾದಿ ಆಗಿದ್ದಾರೆ ಎಂದ ಸಿದ್ದು: ಸಿದ್ದರಾಮಯ್ಯ ಮಜಾವಾದಿ ಎಂದ ಎಚ್‌ಡಿಕೆ