ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಸಿದ್ದರಾಮಯ್ಯ ಆಪ್ತ ರಾಜು ತಲ್ಲೂರು: ಬಿಜೆಪಿ ಸೇರಲು ನಿರ್ಧಾರ

Published : Sep 26, 2022, 11:05 PM IST
ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಸಿದ್ದರಾಮಯ್ಯ ಆಪ್ತ ರಾಜು ತಲ್ಲೂರು: ಬಿಜೆಪಿ ಸೇರಲು ನಿರ್ಧಾರ

ಸಾರಾಂಶ

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರ ಇತ್ತೀಚಿನ ಕಾರ್ಯವೈಖರಿಯಿಂದ ಬೇಸತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ಸಲ್ಲಿಸುತ್ತಿದ್ದು, ಬೆಂಬಲಿಗರೊಂದಿಗೆ ಚರ್ಚಿಸಿ ಮುಂದಿನ ತಮ್ಮ ನಿರ್ಧಾರ ಪ್ರಕಟಿಸುವುದಾಗಿ ಸೊರಬ ತಾಲೂಕು ಕಾಂಗ್ರೆಸ್‌ ಮುಖಂಡ ರಾಜು ತಲ್ಲೂರು ಹೇಳಿದರು. 

ಶಿವಮೊಗ್ಗ (ಸೆ.26): ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರ ಇತ್ತೀಚಿನ ಕಾರ್ಯವೈಖರಿಯಿಂದ ಬೇಸತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ಸಲ್ಲಿಸುತ್ತಿದ್ದು, ಬೆಂಬಲಿಗರೊಂದಿಗೆ ಚರ್ಚಿಸಿ ಮುಂದಿನ ತಮ್ಮ ನಿರ್ಧಾರ ಪ್ರಕಟಿಸುವುದಾಗಿ ಸೊರಬ ತಾಲೂಕು ಕಾಂಗ್ರೆಸ್‌ ಮುಖಂಡ ಹಾಗೂ ಸಿದ್ದರಾಮಯ್ಯನವರ ಪಟ್ಟ ಶಿಷ್ಯರಾಗಿರುವ ರಾಜು ತಲ್ಲೂರು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆ ನಿಜಕ್ಕೂ ಬೇಸರ ತರಿಸುತ್ತಿದೆ. 

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರು ಸಹ ಸಹಕಾರ ನೀಡುತ್ತಿಲ್ಲ. ಪಕ್ಷದಲ್ಲಿ ಒಗ್ಗಟ್ಟು ಇಲ್ಲವಾಗಿದೆ. ಪಕ್ಷಕ್ಕೆ ಶಕ್ತಿ ತುಂಬುವ ಕೆಲಸವೂ ಆಗುತ್ತಿಲ್ಲ. ವಿಸಿಟಿಂಗ್‌ ಕಾರ್ಡ್‌ಗಾಗಿ ಕೆಲವರು ಪಕ್ಷದಲ್ಲಿದ್ದಾರೆ. ನಾಲ್ಕೂವರೆ ವರ್ಷದಲ್ಲಿ ಅಧ್ಯಕ್ಷರು ಪದಾಧಿಕಾರಿಗಳನ್ನು ನೇಮಿಸಲು ಮುಂದಾಗಿಲ್ಲ. ಸಂಘಟನೆಯಲ್ಲಿ ತೊಡಗಿಕೊಳ್ಳದವರ ರಾಜೀನಾಮೆ ಪಡೆಯಬೇಕು ಎಂದು ಕೆಪಿಸಿಸಿ ಹಾಗೂ ಎಐಸಿಸಿ ಅಧ್ಯಕ್ಷರಿಗೆ ಪತ್ರ ಬರೆದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದೆಲ್ಲವು ಬೇಸರ ತರಿಸಿದೆ ಎಂದು ಎಂದು ಆರೋಪಿಸಿದರು.

ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ದೇವದಾಸಿಯರು ಹೊಲಿದಿದ್ದ ಕವದಿಯನ್ನು ಗಿಫ್ಟ್​​ಕೊಟ್ಟ ಸುಧಾಮೂರ್ತಿ​

ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸುಂದರೇಶ್‌ ಸಂಪೂರ್ಣ ನಿಷ್ಕ್ರಿಯರಾಗಿದ್ದಾರೆ. ಅವರಿಂದ ಪಕ್ಷ ಚೇತರಿಕೆ ಕಾಣದು ಎಂಬ ಸತ್ಯ ಅರಿವಾಗಿದೆ. ವ್ಯಕ್ತಿ ಪೂಜೆಯಲ್ಲಿ ಅವರು ನಿರತರಾದಂತಿದೆ. ಪಕ್ಷಕ್ಕೆ ಹೊಸ ಪದಾಧಿಕಾರಿಗಳನ್ನು ನೇಮಿಸಿಲ್ಲ. ಇದೀಗ ತಾವು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ಸಲ್ಲಿಕೆ ಮಾಡಿದ್ದೇನೆ. ಇನ್ನೂ ಕೆಲವೇ ದಿನಗಳಲ್ಲಿ ಸೊರಬ ತಾಲೂಕಿನ ಸುಮಾರು 500ಕ್ಕೂ ಹೆಚ್ಚು ಪಕ್ಷದ ಕಾರ್ಯಕರ್ತರು ಪಕ್ಷಕ್ಕೆ ರಾಜಿನಾಮೆ ನೀಡಲಿದ್ದಾರೆ. 

Chikkamagaluru: ಆರ್​ಎಸ್​ಎಸ್​ ಮುಖಂಡನ ಕಾರಿನ ಮೇಲೆ 'ಕಿಲ್ ಯು' ಜಿಹಾದಿ ಬರಹ

ಬೇರೆ ಬೇರೆ ಪಕ್ಷದವರು ನನ್ನನ್ನು ಸಂಪರ್ಕಿಸಿ ತಮ್ಮ ಪಕ್ಷಕ್ಕೆ ಸೇರ್ಪಡೆಯಾಗುವಂತೆ ಆಹ್ವಾನಿಸುತ್ತಿದ್ದಾರೆ. ಮುಂದಿನ ನಡೆ ಏನು ಎಂಬುದನ್ನು ಸದ್ಯ ತೀರ್ಮಾನಿಸಿಲ್ಲ. ಆದರೆ ಮತ್ತೆ ಮಾತೃಪಕ್ಷ ಬಿಜೆಪಿಗೆ ಹೋಗಲು ಚಿಂತನೆ ನಡೆಸಿದ್ದು, ಕೆಲವೇ ದಿನಗಳಲ್ಲಿ ಬೆಂಬಲಿಗರ ಸಭೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ವಿಜಯ್‌ಕುಮಾರ್‌, ಎಂ.ಪಿ. ಗಿರೀಶ್‌, ನವೀನ್‌, ಪ್ರಶಾಂತ್‌ ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!
ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್