
ಬೆಂಗಳೂರು : ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಿರುವ ಲೋಕಸಭಾ ಹಾಗೂ ವಿಧಾನಸಭಾ ಉಪ ಚುನಾವಣೆಯಲ್ಲಿ ಇದೀಗ ಮೈತ್ರಿ ಪಕ್ಷಗಳಿಗೆ ಗೆಲುವು ಲಭ್ಯವಾಗಿದೆ. ರಾಜ್ಯದ ಐದು ಸ್ಥಾನಗಳಲ್ಲಿ ನಾಲ್ಕು ಸ್ಥಾನಗಳು ಮೈತ್ರಿ ಪಕ್ಷಗಳ ಪಾಲಾಗಿವೆ. ಈ ಫಲಿತಾಂಶದಿಂದ ಮೖತ್ರಿ ಪಕ್ಷಗಳ ಸರ್ಕಾರಕ್ಕೆ ಇನ್ನಷ್ಟು ಬಲ ಸೇರಿದಂತಾಗಿದೆ.
ಪ್ರಬಲ ಪೈಪೋಟಿಯ ಕ್ಷೇತ್ರವಾಗಿದ್ದ ಬಳ್ಳಾರಿಯಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
ಈ ಸಂಬಂಧ ಕಾಂಗ್ರೆಸ್ ಮುಖಂಡರು ಜನರಿಗೆ ಏನು ಬೇಕೋ ಅದನ್ನು ಪಡೆಯುತ್ತಾರೆ. ಉತ್ತಮ ಆಡಳಿತ ಹಾಗೂ ಪಾರದರ್ಶಕ ನಡೆಯನ್ನಷ್ಟೇ ಜನರು ಬಯಸುತ್ತಾರೆ ಎಂದು ಫಲಿತಾಂಶದ ಬಗ್ಗೆ ಹರ್ಷ ವಿಶ್ಲೇಷಣೆ ನೀಡಿದ್ದಾರೆ.
ಅಲ್ಲದೇ ರಾಮಮಂದಿರ ನಿರ್ಮಾಣ ವಿಚಾರ ದಕ್ಷಿಣ ಭಾರತದ ಜನರ ಮೇಲೆ ಹೆಚ್ಚು ಪರಿಣಾಮವನ್ನು ಉಂಟು ಮಾಡುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಎಂದಿಗೂ ಕೂಡ ಜನರ ಭಾಗವಹಿಸುವಿಕೆ ಮುಖ್ಯವಾಗಿದ್ದು, ಈ ಚುನಾವಣಾ ಫಲಿತಾಂಶದಲ್ಲಿ ದೇಶಕ್ಕೆ ಸೂಚನೆಯೊಂದನ್ನು ನೀಡಿದೆ ಎಂದು ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.