ಬಿಜೆಪಿಯವರಿಂದ ಪಕ್ಷಾತೀತವಾಗಿ ರಾಮಮಂದಿರ ಲೋಕಾರ್ಪಣೆಯಾಗಲಿ: ಸಚಿವ ಮಂಕಾಳ ವೈದ್ಯ

Published : Jan 03, 2024, 05:23 AM IST
ಬಿಜೆಪಿಯವರಿಂದ ಪಕ್ಷಾತೀತವಾಗಿ ರಾಮಮಂದಿರ ಲೋಕಾರ್ಪಣೆಯಾಗಲಿ: ಸಚಿವ ಮಂಕಾಳ ವೈದ್ಯ

ಸಾರಾಂಶ

ಬಿಜೆಪಿಯವರು ನಿಜವಾದ ರಾಮಭಕ್ತರಾಗಿದ್ದರೆ ರಾಮಮಂದಿರವನ್ನು ಪಕ್ಷಾತೀತವಾಗಿ ಲೋಕಾರ್ಪಣೆ ಮಾಡಬೇಕು. ಸಾರ್ವಜನಿಕರಿಗೆ, ಎಲ್ಲ ಪಕ್ಷದವರಿಗೆ ಆಮಂತ್ರಣ ನೀಡಬೇಕು. ಇಲ್ಲದಿದ್ದರೆ ರಾಮನೇ ಅವರನ್ನು ನೋಡಿಕೊಳ್ಳುತ್ತಾನೆ ಎಂದು ಸಚಿವ ಮಂಕಾಳು ವೈದ್ಯ ಹೇಳಿದ್ದಾರೆ. 

ಕಾರವಾರ (ಜ.03): ಬಿಜೆಪಿಯವರು ನಿಜವಾದ ರಾಮಭಕ್ತರಾಗಿದ್ದರೆ ರಾಮಮಂದಿರವನ್ನು ಪಕ್ಷಾತೀತವಾಗಿ ಲೋಕಾರ್ಪಣೆ ಮಾಡಬೇಕು. ಸಾರ್ವಜನಿಕರಿಗೆ, ಎಲ್ಲ ಪಕ್ಷದವರಿಗೆ ಆಮಂತ್ರಣ ನೀಡಬೇಕು. ಇಲ್ಲದಿದ್ದರೆ ರಾಮನೇ ಅವರನ್ನು ನೋಡಿಕೊಳ್ಳುತ್ತಾನೆ ಎಂದು ಸಚಿವ ಮಂಕಾಳು ವೈದ್ಯ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆ ಆಮಂತ್ರಣ ನೀಡದೆ ಇರುವ ಕುರಿತು ಪ್ರಸ್ತಾಪಿಸಿದಾಗ, ಬಿಜೆಪಿಯವರು ಮಾಡೋದೆ ಇದು. 

ಹಣ ನಮ್ಮದು, ಅಂದರೆ ಸಾರ್ವಜನಿಕರ ಹಣ. ರಾಮಮಂದಿರ ಕಟ್ಟಿದವರು ನಾವು. ವೈಯಕ್ತಿಕವಾಗಿ ನಾನೂ ಹಣ ನೀಡಿದ್ದೇನೆ. ಆದರೆ ಲೋಕಾರ್ಪಣೆಗೆ ಆಮಂತ್ರಣ ನೀಡದಿದ್ದರೆ ಬಿಜೆಪಿಯವರು ಉದ್ದೇಶಪೂರ್ವಕವಾಗಿ ಮಾಡುತ್ತಿದ್ದಾರೆ ಎಂದೇ ತಿಳಿದುಕೊಳ್ಳಬೇಕು. ಅಯೋಧ್ಯೆಗೆ ಕಾಂಗ್ರೆಸ್ ವರಿಷ್ಠರು ಸಹ ಹೋಗಬಹುದು. ರಾಮ ಎಲ್ಲರಿಗೂ ಒಬ್ಬನೇ. ನಾನೂ ಹೋಗಬೇಕೆಂದಿದ್ದೆ. ಆದರೆ ಅಯೋಧ್ಯೆಗೆ ಟಿಕೆಟ್ ಸಿಕ್ಕಿಲ್ಲ. ಮುಂದಿನ ದಿನಗಳಲ್ಲಿ ಹೋಗಬಹುದು ಎಂದರು.

ರಾಮನಿಗೆ ಮೊದಲ ಆರತಿಯನ್ನು ಪ್ರಧಾನಿ ನರೇಂದ್ರ ಮೋದಿ ಮಾಡಬೇಕು, ಮಾಡಬಾರದು ಎಂದು ಹೇಳುತ್ತಿಲ್ಲ. ಶಾಸ್ತ್ರೋಕ್ತವಾಗಿ ಬ್ರಾಹ್ಮಣರಿಂದ ಪೂಜೆ ಮಾಡಿಸುವುದು ನಮ್ಮ ಸಂಪ್ರದಾಯ. ಅದಕ್ಕಾಗಿಯೇ ದೇವರ ಬಳಿ ಬ್ರಾಹ್ಮಣರನ್ನು ಇಟ್ಟಿದ್ದೇವೆ. ಅದರಲ್ಲೇ ರಾಜಕಾರಣ ಮಾಡಿದರೆ ಏನು ಹೇಳಬೇಕು ಎಂದು ಪ್ರಶ್ನಿಸಿದರು.

ರಾಮಭಕ್ತರ ಬಂಧನ ವಿರುದ್ಧ ಬಿಜೆಪಿ ಹೋರಾಟ: ಸಿದ್ದು ಸರ್ಕಾರಕ್ಕೆ ಆರ್‌.ಅಶೋಕ್‌ ಎಚ್ಚರಿಕೆ

ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನದ ಕುರಿತು ಮಾತನಾಡಿದ ಅವರು, ನ್ಯಾಯಾಲಯದಲ್ಲಿ ಪ್ರಕರಣ ಇದೆ. ನ್ಯಾಯಾಲಯದ ಆದೇಶಕ್ಕೆ ತಲೆಬಾಗುತ್ತೇವೆ. ಆದರೆ ಈಗ ಬಿಜೆಪಿಯವರೇ ತೊಂದರೆ ಕೊಡೋಕೆ ಮಾಡುತ್ತಿದ್ದಾರೆ ಎಂದು ಹೇಳಿದರು. ನಾವು ಅಪ್ಪ-ಅಮ್ಮನನ್ನು ದೇವರಂತೆ ನೋಡುತ್ತೇವೆ. ಸಹಾಯ ಮಾಡಿದವರನ್ನು ಗೌರವದಿಂದ ನೋಡುತ್ತೇವೆ. ಗುರುಗಳನ್ನೂ ದೇವರಂತೆ ಕಾಣುತ್ತೇವೆ ಎಂದು ಸಿದ್ದರಾಮಯ್ಯ ಅವರನ್ನು ದೇವರಿಗೆ ಆಂಜನೇಯ ಹೋಲಿಸಿದ್ದನ್ನು ಖಂಡಿಸಿ ಸಿ.ಟಿ. ರವಿ ಕಿಡಿಕಾರಿದ ವಿಚಾರಕ್ಕೆ ಪ್ರತಿಕ್ರಿಯಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್
Karnataka News Live: ಟಾಕ್ಸಿಕ್ ಸಿನಿಮಾ ರಿಲೀಸ್ ಸಮೀಪಿಸುತ್ತಿದ್ದಂತೆ ಐಟಿ ಪ್ರಕರಣದಲ್ಲಿ ನಟ ಯಶ್‌ಗೆ ಹೈಕೋರ್ಟ್ ರಿಲೀಫ್