ಬಿಜೆಪಿಯವರಿಗೆ ರಾಮನೊಬ್ಬನೇ ದೇವರಾ?: ಸಚಿವ ತಿಮ್ಮಾಪುರ ಕಿಡಿ

Published : Jan 14, 2024, 01:30 PM IST
ಬಿಜೆಪಿಯವರಿಗೆ ರಾಮನೊಬ್ಬನೇ ದೇವರಾ?: ಸಚಿವ ತಿಮ್ಮಾಪುರ ಕಿಡಿ

ಸಾರಾಂಶ

ಹಳ್ಳಿಯಲ್ಲಿರುವ ದೇವರು ಬಿಜೆಪಿಯವರಿಗೆ ದೇವರಾಗಿ ಕಾಣುತ್ತಿಲ್ವಾ? ಇಂಥ ಸಾವಿರ ಗುಡಿಗಳನ್ನು ನಾವು ಕಟ್ಟಿದ್ದೇವೆ. ನಾವು ಈ ರೀತಿಯ ಪ್ರಚಾರ ಪಡೆದುಕೊಂಡಿಲ್ಲ. ಬಿಜೆಪಿಯವರು ರಾಮನ ಹೆಸರಲ್ಲಿ ಚುನಾವಣೆಗೆ ಹೊರಟಿದ್ದಾರೆ. ಇದನ್ನೆಲ್ಲ ನೋಡುತ್ತಿರುವ ನಮ್ಮ ಜನತೆ ಬುದ್ದಿಗೇಡಿಗಳಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಲಿ ಎಂದ ಅಬಕಾರಿ ಸಚಿವ ಆರ್ .ಬಿ.ತಿಮ್ಮಾಪುರ 

ಹುಬ್ಬಳ್ಳಿ(ಜ.14): ಬಿಜೆಪಿಯವರಿಗೆ ರಾಮನೊಬ್ಬನೇ ದೇವರಾಗಿ ಕಾಣುತ್ತಿದ್ದಾನಾ? ನಮ್ಮೂ ರಲ್ಲಿ ಅನೇಕ ದೇವರಿದ್ದಾರೆ. ಕಾಳವ್ವ, ಹನಮಂತ, ದುರ್ಗವ್ವ ಇವರು ದೇವರಲ್ವಾ? ರಾಮ ಮಂದಿರಕ್ಕೆ ಹೋದರೆ ಅಷ್ಟೆ ಹಿಂದೂಗಳಾ? ಎಂದು ಅಬಕಾರಿ ಸಚಿವ ಆರ್ .ಬಿ.ತಿಮ್ಮಾಪುರ ಪ್ರಶ್ನಿಸಿದರು. 

ಸುದ್ದಿಗಾರರೊಂದಿಗೆ ಮಾತನಾಡಿ, ಹಳ್ಳಿಯಲ್ಲಿರುವ ದೇವರು ಬಿಜೆಪಿಯವರಿಗೆ ದೇವರಾಗಿ ಕಾಣುತ್ತಿಲ್ವಾ? ಇಂಥ ಸಾವಿರ ಗುಡಿಗಳನ್ನು ನಾವು ಕಟ್ಟಿದ್ದೇವೆ. ನಾವು ಈ ರೀತಿಯ ಪ್ರಚಾರ ಪಡೆದುಕೊಂಡಿಲ್ಲ. ಬಿಜೆಪಿಯವರು ರಾಮನ ಹೆಸರಲ್ಲಿ ಚುನಾವಣೆಗೆ ಹೊರಟಿದ್ದಾರೆ. ಇದನ್ನೆಲ್ಲ ನೋಡುತ್ತಿರುವ ನಮ್ಮ ಜನತೆ ಬುದ್ದಿಗೇಡಿಗಳಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಲಿ ಎಂದರು.

ಕಾಂಗ್ರೆಸ್‌ನ ಪ್ರಣಾಳಿಕೆಯಲ್ಲೇ ರಾಮ ಮಂದಿರ ಇತ್ತು: ಸಚಿವ ನಾಗೇಂದ್ರ

ಮೋದಿಯೇ ದೇವರು: 

ಬಿಜೆಪಿಗರಿಗೆ ಮೋದಿಯೇ ದೇವರು. ಮೋದಿ ದೇವರು ಎಂದು ಹೇಳದವರನ್ನು ಬಿಜೆಪಿಯಿಂದ ಮನೆಗೆ ಕಳುಹಿಸುತ್ತಾರೆ. ಜನ ಇವರಿಗೆ ಮತ ಹಾಕಿರುವುದು ರಾಮ ಮಂದಿರದಲ್ಲಿ ಕುಳಿತುಕೊಳ್ಳುವುದಕ್ಕಾ? ಎಂದು ವಾಗ್ದಾಳಿ ನಡೆಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬಂಡವಾಳ ಆಕರ್ಷಣೆಗೆ ರಾಜ್ಯಗಳ ನಡುವೆ ಸ್ಪರ್ಧೆ ಹೆಚ್ಚಾಗಿದೆ: ಸಚಿವ ಎಂ.ಬಿ.ಪಾಟೀಲ್‌
ಬೀಚ್‌ಗಳಲ್ಲಿ ಮದ್ಯ ಮಾರಾಟಕ್ಕೆ ಪರವಾನಗಿ ಬಗ್ಗೆ ಚರ್ಚೆ: ಡಿ.ಕೆ.ಶಿವಕುಮಾರ್‌