ಶಿಡ್ಲಘಟ್ಟ: ರಾಮಚಂದ್ರೇಗೌಡ ಬಿಜೆಪಿ ಸೇರ್ಪಡೆ

Published : Mar 10, 2023, 12:30 AM IST
ಶಿಡ್ಲಘಟ್ಟ: ರಾಮಚಂದ್ರೇಗೌಡ ಬಿಜೆಪಿ ಸೇರ್ಪಡೆ

ಸಾರಾಂಶ

ಪಕ್ಷದ ಬಗ್ಗೆ ನಿಷ್ಠೆ ಮತ್ತು ಯಾವುದೇ ಷರತ್ತುಗಳಿಲ್ಲದೆ ಯಾರೇ ಪಕ್ಷಕ್ಕೆ ಬಂದರೂ ಸ್ವಾಗತಿಸುವುದಾಗಿ ತಿಳಿಸಿದರು. ಉತ್ತರದ ಮೂರು ರಾಜ್ಯಗಳ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು ನಮ್ಮ ರಾಜ್ಯದಲ್ಲೂ 150 ಸ್ಥಾನಗಳನ್ನು ಪಡೆದು ಮತ್ತೆ ಅಧಿಕಾರವನ್ನು ಪಡೆಯುವುದು ಖಚಿತವೆಂದ ನಳಿನ್‌ ಕುಮಾರ್‌ ಕಟೀಲ್‌ 

ಶಿಡ್ಲಘಟ್ಟ(ಮಾ.10): ಬೆಂಗಳೂರು ನಗರದ ಬಿಜೆಪಿ ಪಕ್ಷದ ಕೇಂದ್ರ ಕಚೇರಿಯಲ್ಲಿ ಸೀಕಲ್‌ ರಾಮಚಂದ್ರೇ ಗೌಡ ಮತ್ತು ಜೆಟಿ ದೇವೇಗೌಡ ರವರ ಅಳಿಯ ಆನಂದ್‌ ಗೌಡ ರವರು ಬಿಜೆಪಿಗೆ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮಾತನಾಡಿ, ಪಕ್ಷದ ಬಗ್ಗೆ ನಿಷ್ಠೆ ಮತ್ತು ಯಾವುದೇ ಷರತ್ತುಗಳಿಲ್ಲದೆ ಯಾರೇ ಪಕ್ಷಕ್ಕೆ ಬಂದರೂ ಸ್ವಾಗತಿಸುವುದಾಗಿ ತಿಳಿಸಿದರು. ಉತ್ತರದ ಮೂರು ರಾಜ್ಯಗಳ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು ನಮ್ಮ ರಾಜ್ಯದಲ್ಲೂ 150 ಸ್ಥಾನಗಳನ್ನು ಪಡೆದು ಮತ್ತೆ ಅಧಿಕಾರವನ್ನು ಪಡೆಯುವುದು ಖಚಿತವೆಂದರು.

CHIKKABALLAURA : ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಜಿಲ್ಲೆಗೆ ಶಾಶ್ವತ ನೀರು

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಆಕಾಂಕ್ಷಿ ಸೀಕಲ್‌ ರಾಮಚಂದ್ದೇ ಗೌಡ ತಮ್ಮ ನೂರಾರು ಬೆಂಬಲಿಗರೊಂದಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ತಾಲ್ಲೂಕು ಬಿಜೆಪಿ ಅಧ್ಯಕ್ಷ ಕಂಬದ ಹಳ್ಳಿ ಸುರೇಂದ್ರ ಗೌಡ ಹಾಗೂ ಮಾಜಿ ಶಾಸಕ ಎಂ. ರಾಜಣ್ಣ ಸೇರಿದಂತೆ ಹಲವಾರು ಉಪಸ್ಥಿತರಿದ್ದರು.

ಸೇರ್ಪಡೆಯ ನಂತರ ಮಾತನಾಡಿದ ರಾಮಚಂದ್ರ ಗೈಡ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸರ್ಕಾರಗಳ ಅವಧಿಯಲ್ಲಿ ಶಿಡ್ಲಘಟ್ಟ ತಾಲೂಕು ಯಾವುದೇ ಅಭಿವೃದ್ಧಿಯನ್ನು ಕಂಡಿಲ್ಲ ತಾಲೂಕಿನ ಯಾವುದೇ ಸಮಸ್ಯೆಗಳ ಬಗ್ಗೆ ಕಿಂಚಿತ್ತೂ ಸ್ಪಂದಿಸಿಲ್ಲ. ಆದರೆ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ಜನರ ಮೂಲಭೂತ ಸೌಕರ್ಯಗಳ ಬಗ್ಗೆ ಹೆಚ್ಚಿನ ಗಮನ ಹರಿಸಿದ್ದು ರೈತರ ಮತ್ತು ನಿರುದ್ಯೋಗ ಸಮಸ್ಯೆಗಳ ನಿವಾರಣೆಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಜನರು ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಬಯಸುತ್ತಿದ್ದಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!