ಸಚಿವ ಸ್ಥಾನ ತಪ್ಪಲು ಇಬ್ಬರು ಕಾರಣ: ರಾಮಲಿಂಗಾ ರೆಡ್ಡಿ ಬಾಂಬ್..!

Published : Dec 23, 2018, 08:00 PM IST
ಸಚಿವ ಸ್ಥಾನ ತಪ್ಪಲು ಇಬ್ಬರು ಕಾರಣ: ರಾಮಲಿಂಗಾ ರೆಡ್ಡಿ ಬಾಂಬ್..!

ಸಾರಾಂಶ

ಸಚಿವ ಸ್ಥಾನ ಕೈತಪ್ಪಲು ಒಂದಿಬ್ಬರು ನನ್ನ ವಿರುದ್ಧ ಕೆಲಸ ಮಾಡಿದ್ದಾರೆ. ಸಚಿವ ಸ್ಥಾನ ಕೈತಪ್ಪಿದ್ದರ ಬಗ್ಗೆ ಆ ನಾಲ್ಕು ಜನರೇ ಉತ್ತರಿಸಬೇಕು-  ಮಾಜಿ ಸಚಿವ ರಾಮಲಿಂಗರೆಡ್ಡಿ ಬಾಂಬ್ ಸಿಡಿಸಿದ್ದಾರೆ.

ಬೆಂಗಳೂರು, [ಡಿ.23] ಸಂಪುಟ ಸರ್ಜರಿ ಬೆನ್ನಲ್ಲೆ ರಾಜ್ಯ ಕೈ ಪಾಳಯದಲ್ಲಿ ಅಸಮಾಧಾನ ಕೊತ ಕೊತ ಅಂತ ಕುದಿಯುತ್ತಿದೆ. ಒಂದೆಡೆ ಅತೃಪ್ತರನ್ನ ಸಮಾಧಾನ ಪಡಿಸಲು ಹಿರಿಯ ನಾಯಕರು ಹರಸಾಹಸ ಪಡುತ್ತಿದ್ದಾರೆ. 

ಅದರಲ್ಲಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದ ಆಸ್ತಿ ಅಂತಾನೇ ಕರೆಸಿಕೊಳ್ಳೋ ಹಿರಿಯ ಮುಖಂಡ ರಾಮಲಿಂಗಾ ರೆಡ್ಡಿ ಸಹ ಮೌನ ಮುರಿದಿದ್ದು, ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.‌ 

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಸಿದ್ದರಾಮಯ್ಯ, ವೇಣುಗೋಪಾಲ್ ಪರಮೇಶ್ವರ್, ದಿನೇಶ್ ಗುಂಡುರಾವ್ ಉತ್ತರಸಬೇಕು ಎಂದು ಅಸಮಾಧಾನ ಹೊರಹಾಕಿದ್ದಾರೆ. ಸಿದ್ದರಾಮಯ್ಯ ಅವರು ಈ ಬಾರಿ ದೆಹಲಿಯಲ್ಲಿ ನನ್ನ ಬಗ್ಗೆ ಮಾತಾಡಲಿಲ್ಲ.

ಸಚಿವ ಸ್ಥಾನ ಸಿಗದಿರೋದಕ್ಕೆ ಬೇಸರ ಆಗಿಲ್ಲ. ಆದ್ರೆ ಬೆಂಗಳೂರಲ್ಲಿ ಹಿರಿಯ ನಾಯಕನಾದ ನನ್ನನ್ನ ಪಕ್ಷದಲ್ಲಿ ಕಡೆಗಣಿಸುತ್ತಿದ್ದಾರೆ ಅನ್ನೋ ಬೇಸರ ಇದೆ. ಸಂಪುಟದಲ್ಲಿ ಜಾರ್ಜ್, ಆರ್.ವಿ ದೇಶಪಾಂಡೆಯಂತ ಹಿರಿಯ ಸಚಿವರಿದ್ದಾರೆ.

ಅವರಿಗೊಂದು ನ್ಯಾಯ. ನಂಗೊಂದು ನ್ಯಾಯನಾ ಎಂದು ರಾಮಲಿಂಗಾರೆಡ್ಡಿ ಪ್ರಶ್ನಿಸಿದರು. ತಮಗೆ ಸಚಿವ ಸ್ಥಾನ ತಪ್ಪಿಸುವಲ್ಲಿ ರಾಜ್ಯದ ಪ್ರಭಾವಿ ನಾಯಕರುಗಳೇ ಎಂದು ಹೇಳಿರುವ ರಾಮಲಿಂಗಾ ರೆಡ್ಡಿ ಅವರು ಆ ಲೀಡರ್ ಗಳ ಹೆಸರಗಳನ್ನು ಬಹಿರಂಗಪಡಿಸಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
ಅನುದಾನ ಬೇಕಾದ್ರೆ ನಾಟಿ ಕೋಳಿ ಅಡುಗೆ ಮಾಡಬೇಕಾ? ರಾಜ್ಯ ಸರ್ಕಾರಕ್ಕೆ ಸಿ.ಟಿ.ರವಿ ಪ್ರಶ್ನೆ